Sunday | June 14, 2026 |

ದುಬಾರಿ ಸಹಾಯಧನದಿಂದ ತೆರಿಗೆಯೇತರ ರಾಜಸ್ವ ಪ್ರಮಾಣ ನಗಣ್ಯ; ತೆರಿಗೆ ಭಾರ ಹೊರಿಸಲಿದೆಯೇ?

Support THE-FILE

spot_img

ಬೆಂಗಳೂರು; ಲಾಭಕರವಲ್ಲದ ಹಾಗೂ ದುಬಾರಿ ಸಹಾಯಧನಗಳಿಂದಾಗಿ ಜಿಎಸ್‌ಡಿಪಿಗೆ ಹೋಲಿಸಿದಲ್ಲಿ ತೆರಿಗೆಯೇತರ ರಾಜಸ್ವದ ಪ್ರಮಾಣವು ನಗಣ್ಯವಾಗಿದೆ. ಹೀಗಾಗಿ ಹೊಸ ತೆರಿಗೆ ಪ್ರಸ್ತಾಪಿಸುವುದು ಮತ್ತು ತೆರಿಗೆ ಸ್ವರೂಪಗಳ ಪರಿಷ್ಕರಣೆ ಮೂಲಕ ಹೆಚ್ಚುವರಿ ಸಂಪನ್ಮೂಲ ಸಂಗ್ರಹಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿರುವುದು  ಇದೀಗ ಬಹಿರಂಗವಾಗಿದೆ.

 

ಐದು ಗ್ಯಾರಂಟಿಗಳ ಅನುಷ್ಠಾನದಿಂದಾಗಿ ಎದುರಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಈಗಿನಿಂದಲೇ ಸಜ್ಜಾಗಿರುವ ಸರ್ಕಾರವು ಇದಕ್ಕಾಗಿ ತೆರಿಗೆಯೇತರ, ಬಳಕೆದಾರರ ಶುಲ್ಕ, ಬಾಕಿ ಇರುವ ಸಾಲವನ್ನು ವಸೂಲು ಮಾಡಬೇಕು ಎಂದು ಇಲಾಖೆ ಮುಖ್ಯಸ್ಥರಿಗೆ ಸೂಚಿಸಿರುವುದು ಮುನ್ನೆಲೆಗೆ ಬಂದಿದೆ.

 

2024-25ನೇ ಸಾಲಿನ ಆಯವ್ಯಯ ರಾಜಸ್ವ-ಜಮೆ ತಯಾರಿಕೆ ಸಂಬಂಧ ಆರ್ಥಿಕ ಇಲಾಖೆಯು ಇಲಾಖೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಗಳಲ್ಲಿ ಈ ಎಲ್ಲಾ  ಅಂಶಗಳನ್ನು ಉಲ್ಲೇಖಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು ಸುತ್ತೋಲೆ  (ಆಇ 27 ಬಿಪಿಎ 2023)  ಹೊರಡಿಸಿದೆ. ಸುತ್ತೋಲೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ರಾಜಸ್ವ ಸ್ವೀಕೃತಿಯಲ್ಲಿ ತೆರಿಗೆಯೇತರ ರಾಜಸ್ವದ ಪಾಲು ಹಿಂದಿನ ಹಲವಾರು ವರ್ಷಗಳಿಂದಲೂ ಇಳಿಮುಖವಾಗಿದೆ. ಪ್ರಮುಖವಾಗಿ ವೆಚ್ಚ ವಸೂಲಾತಿ ದರದಲ್ಲಿ ಇಳಿಕೆಯಾಗಿದೆಯಲ್ಲದೇ ಕ್ಷೀಣಗೊಂಡಿದೆ. ಸಾರ್ವಜನಿಕ ಉದ್ದಿಮೆಗಳ ಕಳಪೆ ನಿರ್ವಹಣೆ ಹಾಗೂ ಲಾಭಕರವಲ್ಲದ, ದುಬಾರಿ ಸಹಾಯಧನಗಳಿಂದಾಗಿ ಜಿಎಸ್‌ಡಿಪಿಗೆ ಹೋಲಿಸಿದಲ್ಲಿ ತೆರಿಗೆಯೇತರ ರಾಜಸ್ವದ ಪ್ರಮಾಣವು ನಗಣ್ಯವಾಗಿದೆ,’ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

 

ರಾಜಸ್ವ ಸಂಗ್ರಹಿಸಲು ನಿಯಮಿತವಾಗಿ ಬಳಕೆದಾರರ ಶುಲ್ಕಗಳನ್ನು ಪರಿಷ್ಕರಣೆ ಮಾಡಬಹುದು ಎಂದು ಮಹಾಲೇಖಪಾಲರು ಈ ಹಿಂದೆಯೇ ನೀಡಿದ್ದ ಸೂಚನೆಯನ್ನು ಪಾಲಿಸಲು ನಿರ್ದೇಶಿಸಿರುವ ಆರ್ಥಿಕ ಇಲಾಖೆಯು ಎಲ್ಲಾಇಲಾಖೆಗಳು ತಮ್ಮ ಇಲಾಖೆಗಳ ತೆರಿಗೆಯೇತರ ರಾಜಸ್ವಗಳನ್ನು ಪರಿಶೀಲಿಸಬೇಕು. ಕಳೆದ 3 ವರ್ಷಗಳಿಂದ ಪರಿಷ್ಕರಣೆಯಾಗದೇ ಇದ್ದಲ್ಲಿ ಕೂಡಲೇ ತೆರಿಗೆಯೇತರ ರಾಜಸ್ವ ದರಗಳನ್ನು ಈಗಿರುವ ಹಣದುಬ್ಬರದ ದರಕ್ಕೆ ಅನುಗುಣವಾಗಿ ಪರಿಶೀಲಿಸಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ ಸಿ ಜಾಫರ್‍‌ ಅವರು ಇಲಾಖೆ ಮುಖ್ಯಸ್ಥರಿಗೆ ನಿರ್ದೇಶಿಸಿರುವುದು ಗೊತ್ತಾಗಿದೆ.

 

‘ಎಲ್ಲಾ ಇಲಾಖೆ ಮುಖ್ಯಸ್ಥರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ತೆರಿಗೆಯೇತರ ಆದಾಯದ ದರಗಳನ್ನು ಕಳೆದ ಮೂರು ವರ್ಷಗಳಲ್ಲಿ ಪರಿಷ್ಕರಿಸದಿದ್ದಲ್ಲಿ ಪರಿಷ್ಕರಿಸಬೇಕು. ಎಲ್ಲಾ ಇಲಾಖೆಗಳು ತೆರಿಗೆಯೇತರ ರಾಜಸ್ವ ಅಂದಾಜುಗಳನ್ನು ಸಲ್ಲಿಸುವ ಮುನ್ನ ಎಲ್ಲಾ ತೆರಿಗೆಯೇತರ ರಾಜಸ್ವ ಮೂಲಗಳನ್ನು ಪರಿಶೀಲಿಸಿ ದರಗಳನ್ನು/ ಬಳಕೆದಾರರ ಶುಲ್ಕಗಳನ್ನು ಪರಿಷ್ಕರಣೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಬೇಕು,’ ಎಂದು ಸುತ್ತೊಲೆಯಲ್ಲಿ ಸೂಚಿಸಿರುವುದು ತಿಳಿದು ಬಂದಿದೆ.

 

ಅಲ್ಲದೆ ಸಾಲ ಮರುಪಾವತಿಯ ಷರತ್ತು , ನಿಬಂಧನೆಗಳು, ಬಂಡವಾಳ ಹೂಡಿಕೆ ಮತ್ತು ಮರು ಪಾವತಿ ಅವಧಿ ಮುಂತಾದ ಅಂಶಗಳನ್ನು ಪರಿಶೀಲಿಸಲು ಸೂಚಿಸಿದೆ. ವಿವಿಧ ಸಾರ್ವಜನಿಕ ಉದ್ದಿಮೆಗಳು, ಸಹಕಾರಿ ಸಂಘಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಂದ ಬಡ್ಡಿ ಸ್ವೀಕೃತಿಗಳು, ಲಾಭಾಂಶಗಳು, ಬಂಡವಾಳ ಸಾಲ ವಸೂಲು ಮಾಡಬೇಕು. ಇತರೆ ಇಲಾಖೆ ಸಾಲಗಳನ್ನು ವಸೂಲು ಮಾಡಲು ಕ್ರಮವಹಿಸಬೇಕು ಎಂದೂ ಸೂಚಿಸಿರುವುದು ಗೊತ್ತಾಗಿದೆ.

 

ಹಾಗೆಯೇ ವಾರ್ಷಿಕ ಯೋಜನೆಗಳಿಗೆ ಹಿಂದಿನ ಯೋಜನಾ ಅವಧಿಯ ಬದ್ಧ ವೆಚ್ಚಗಳಿಗೆ, ಕಾಲಕಾಲಕ್ಕೆ ತುಟ್ಟಿಭತ್ಯೆ ಹೆಚ್ಚಳ, ಕಾನೂನು ಸುವ್ಯವಸ್ಥೆ ನಿರ್ವಹಣೆ, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಪರಿಹಾರ ಕಾಮಗಾರಿಗಳನ್ನೊಳಗೊಂಡಂತೆ ಸಮಾಜ ಕಲ್ಯಾಣ ಕಾರ್ಯಗಳು ಮುಂತಾದವುಗಳಿಗೆ ಹಣ ಒದಗಿಸಲು ಸಂಪನ್ಮೂಲ ಸಂಗ್ರಹಿಸಬೇಕು ಎಂದು ವಿವರಿಸಿದೆ. ಹೀಗಾಗಿ ಇಲಾಖೆ ಮುಖ್ಯಸ್ಥರುಗಳು ಬಾಕಿ ವಸೂಲಾತಿಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿರುವುದು ತಿಳಿದು ಬಂದಿದೆ.

 

ಸಾಲ ವಸೂಲಾತಿ ಬಗ್ಗೆ ನಿರ್ದಿಷ್ಟವಾಗಿ ಸೂಚನೆಗಳನ್ನು ನೀಡಿದೆ. ಈ ಹಿಂದೆ ಸಾಕಷ್ಟು ಸಾಲಗಳನ್ನು ಮಂಜೂರು ಮಾಡಿದ್ದು ಅವುಗಳು ವಸೂಲಾಗದೇ ಇನ್ನೂ ಬಾಕಿ ಉಳಿದಿವೆ. ಅಭಿವೃದ್ಧಿ ಮತ್ತು ಅಭಿವೃದ್ಧಿಯೇತರ ಚಟುವಟಿಕೆಗಳಿಗಾಗಿ ಸರ್ಕಾರಿ ಕಂಪನಿಗಳು, ಕಾರ್ಪೋರೇಷನ್‌ಗಳು, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರಿ ಸಂಘಗಳು, ಸರ್ಕಾರೇತರ ಸಂಸ್ಥೆಗಳು ಮತ್ತಿತರೆ ಸಂಸ್ಥೆಗಳಿಗೆ ನೀಡಿರುವ ಸಾಲಗಳು ವಸೂಲಾಗಿಲ್ಲ. ಬದಲಿಗೆ ಸಾಲದ ಪ್ರಮಾಣವು ಹೆಚ್ಚಾಗಿದೆ. ಸಾಲಗಳ ವಸೂಲಾತಿಯು ಹೆಚ್ಚಾಗದೇ ಸ್ಥಿರವಾಗಿದೆ ಎಂಬ ಅಂಶವನ್ನು ಸುತ್ತೋಲೆಯಲ್ಲಿ ಪ್ರಸ್ತಾವಿಸಿದೆ.

 

‘ಸರ್ಕಾರವು ಹೂಡಿಕೆಗಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಯಲ್ಲಿ ಸಾಲ ಪಡೆಯುತ್ತಿದ್ದು ಈ ಹೂಡಿಕೆಗಳ ಮೇಲಿನ ಮರು ಪಾವತಿಯ ಶೇಕಡವಾರು ಪ್ರಮಾಣವು ತುಂಬಾ ಕಡಿಮೆಯಾಗುತ್ತಿದೆ. ಬಾಕಿ ಇರುವ ಸಾಲಗಳು, ಸಾಲದ ನಿಬಂಧನೆಗಳ ಮತ್ತು ಷರತ್ತುಗಳ ಅನ್ವಯ ವಸೂಲಾತಿ ಆಧಾರದ ಮೇಲೆ ಸಾಲ ಸ್ವೀಕೃತಿಗಳ ಅಂದಾಜುಗಳನ್ನು ತಯಾರಿಸಬೇಕು,’ ಎಂದು ಸೂಚಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img