Friday | June 19, 2026 |

ದಲಿತ ವಿದ್ಯಾರ್ಥಿಗಳಿಗೆ ‘ವಿಶ್ವಾಸ ಕಿರಣ’ವಿಲ್ಲ!; ಬಜೆಟ್‌ನಲ್ಲಿ ಲ್ಯಾಪ್‌ಟಾಪ್‌ ಯೋಜನೆ ಪ್ರಸ್ತಾವವಿಲ್ಲ

Support THE-FILE

spot_img

ಬೆಂಗಳೂರು; ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಣೆ ಮಾಡುವ ಸಂಬಂಧ ಪದವಿಪೂರ್ವ ಶಿಕ್ಷಣ ಮಂಡಳಿಯ ಮುಂದುವರೆದ  ಯೋಜನೆಯ ಕುರಿತಾಗಿ  ಬಜೆಟ್‌ನಲ್ಲಿ ಪ್ರಸ್ತಾವಿಸಿಲ್ಲ.

 

ವಿಶ್ವಾಸ ಕಿರಣ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುವ ಸಂಬಂಧ 9 ಕೋಟಿ ರು. ಅಂದಾಜು ವೆಚ್ಚದ ಪ್ರಸ್ತಾವನೆಯನ್ನು  ಪದವಿಪೂರ್ವ ಶಿಕ್ಷಣ ಮಂಡಳಿಯ ಉಪನಿರ್ದೇಶಕರು (ಶೈಕ್ಷಣಿಕ) ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2024ರ ಜನವರಿ 16ರಂದೇ ಪ್ರಸ್ತಾವನೆ ಸಲ್ಲಿಸಿದ್ದರು.

 

2024-25ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆಗೆ ಅನುದಾನ ಲಭ್ಯವಾಗಲಿದೆ  ಎಂದು ಮಂಡಳಿಯು ಎದುರು ನೋಡಿತ್ತು. ಆದರೀಗ ಬಜೆಟ್‌ನಲ್ಲಿ ಉಚಿತ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಬಗ್ಗೆ ಪ್ರಸ್ತಾವಿಸಿಲ್ಲ.

 

2023-24ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ  ಪರಿಶಿಷ್ಟ ಜಾತಿ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೈಕಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಹೆಸರಿನಲ್ಲಿ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಹಮ್ಮಿಕೊಂಡಿತ್ತು.

 

ಪ.ಜಾತಿಯ ಪ್ರತಿ ವಿಭಾಗದ 5 ವಿದ್ಯಾರ್ಥಿಗಳಿಗೆ 15 ಹಾಗೂ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಪ್ರತಿ ವಿಭಾಗದ 3 ವಿದ್ಯಾರ್ಥಿಗಳಿಗೆ ಒಟ್ಟು 09 ಲ್ಯಾಪ್‌ಟಾಪ್‌ಗಳನ್ನು ಬಹುಮಾನವಾಗಿ ನೀಡಲಿತ್ತು.  ಇದಕ್ಕಾಗಿ ಪಿಯು  ಮಂಡಳಿಯು ಕ್ರಿಯಾ ಯೋಜನೆ ರೂಪಿಸಿತ್ತು.

 

ಒಟ್ಟು 32 ಶೈಕ್ಷಣಿಕ ಜಿಲ್ಲೆಗಳಲ್ಲಿ 2023-24ನೇ ಸಾಲಿಗೆ   768 ಲ್ಯಾಪ್‌ಟಾಪ್‌ ಖರೀದಿಸಲು ಪ್ರಸ್ತಾವಿಸಿದೆ. ಪ್ರತಿ ಲ್ಯಾಪ್‌ಟಾಪ್‌ಗೆ  60,000 ರು.ನಂತೆ ಎಸ್‌ಸಿಪಿ ಅಡಿಯಲ್ಲಿ 480 ಲ್ಯಾಪ್‌ಟಾಪ್‌ಗಳಿಗೆ 2.88 ಕೋಟಿ ರು., ಟಿಎಸ್‌ಪಿ ಅಡಿಯಲ್ಲಿ 288 ಲ್ಯಾಪ್‌ಟಾಪ್‌ಗಳಿಗೆ 1.72 ಕೋಟಿ ರು. ಒಟ್ಟಾರೆ 4.60 ಕೋಟಿ ರು. ಅನುದಾನ ಕೋರಿತ್ತು.

768 ಲ್ಯಾಪ್‌ಟಾಪ್‌ ಖರೀದಿ; ಪ್ರಸ್ತಾವದಲ್ಲೇ ತಲಾ 60,000 ರು. ನಿಗದಿಗೊಳಿಸಿದ ಪಿಯು ಮಂಡಳಿ

ಅದೇ ರೀತಿ 2024-25ನೇ ಸಾಲಿಗೆ ವಿಶ್ವಾಸ  ಕಿರಣ ಯೋಜನೆಯಡಿಯಲ್ಲಿ  4.06 ಕೋಟಿ ರು, ಲ್ಯಾಪ್‌ಟಾಪ್‌ ಯೋಜನೆಯಡಿಯಲ್ಲಿ 2.88 ಕೋಟಿ ರು., ಸೇರಿ 6.98 ಕೋಟಿ ರು.,  (ಎಸ್‌ಸಿಪಿ), ಟಿಎಸ್‌ಪಿ ಅಡಿಯಲ್ಲಿ ವಿಶ್ವಾಸ ಕಿರಣ ಯೋಜನೆಯಡಿಯಲ್ಲಿ 1.08 ಕೋಟಿ ರು., ಲ್ಯಾಪ್‌ಟಾಪ್‌ ಯೋಜನೆಯಡಿಯಲ್ಲಿ 1.72 ಕೋಟಿ ರು. ಸೇರಿ ಒಟ್ಟಾರೆ 9.76 ಕೋಟಿ ರು. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

 

ಪದವಿಪೂರ್ವ ಶಿಕ್ಷಣ ಮಂಡಳಿಯು ತಲಾ ಲ್ಯಾಪ್‌ಟಾಪ್‌ವೊಂದಕ್ಕೆ 60,000 ರು. ದರ ಎಂದು ನಿಗದಿಪಡಿಸಿರುವುದು ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ದುಪ್ಪಟ್ಟಾಗಿತ್ತು.  ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿಯಲ್ಲಿ ಪಿಯುಸಿ 2024ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯ ಭಾಗವಾಗಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.

 

ಘೋಷಣೆಯಾಗಿರುವುದೇನು?

 

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಶೌಚಾಲಯ ಸೇರಿದಂತೆ ಇನ್ನಿತರೆ  ಮೂಲಭೂತ ಸೌಕರ್ಯಗಳನ್ನು ಒದಗಿಸಲು 850 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಹೊಸದಾಗಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲಿದೆ. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

 

ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 10 ಕೋಟಿ ರು ವೆಚ್ಚದಲ್ಲಿ ಗಣಕ ವಿಜ್ಙಾನ ಸಂಯೋಜನೆ ಆರಂಭಿಸಲಿದೆ. ವಿಜ್ಞಾನ ವಿಷಯಗಳಲ್ಲಿ 400ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಙಾನ ಪ್ರಯೋಗಾಲಯಗಳ್ನು ಉನ್ನತೀಕರಿಸಲು ತಲಾ 10 ಲಕ್ಷ ರು.ನಂತೆ ಅನುದಾನ ಒದಗಿಸಲಿದೆ.

 

ಅದೇ ರೀತಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಙಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳೀಗೆ ನೀಟ್, ಜೆಇಇ, ಸಿಇಟಿ ತರಬೇತಿ ಕಾರ್ಯಕ್ರಮಗಳಿಗಾಗಿ 10 ಕೋಟಿ ರು. ನೀಡಲಾಗುವುದು ಎಂದು ಘೋಷಿಸಿದ್ದಾರೆ. ಹಾಗೆಯೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ ಮತ್ತು  ನೀರಿನ ಸೌಲಭ್ಯವನ್ನು ಒದಗಿಸಲು 25 ಕೋಟಿ ರು. ವೆಚ್ಚವಾಗಲಿದೆ ಎಂದು ಹೇಳಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img