Sunday | September 13, 2026 |

ಕರ್ನಾಟಕ ಭವನಕ್ಕೆ ಕಾರು ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಎಂದು ಜರಿದ ಬಿಜೆಪಿ

Support THE-FILE

spot_img

ಬೆಂಗಳೂರು; ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆಯನ್ನು  ರಾಜ್ಯ ಬಿಜೆಪಿಯು ಟೀಕಿಸಿದೆ. ಈ ಕುರಿತು ‘ದಿ ಫೈಲ್‌’ ಪ್ರಕಟಿಸಿದ್ದ ವರದಿಯನ್ನು ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿಯು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂಈ ಜುಟ್ಟಿಗೆ ಮಲ್ಲಿಗೆ ಹೂ ಎಂದು ಜರಿದಿದೆ.

 

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಪರಿಸ್ಥಿತಿ ನಿಭಾಯಿಸಲು ಹಣದ ಕೊರತೆ ಮತ್ತು ಕೇಂದ್ರ ಸರ್ಕಾರವು ನೀಡುತ್ತಿರುವ ಪರಿಹಾರದ ಮೊತ್ತ ಸಾಕಾಗುತ್ತಿಲ್ಲ ಎಂದು ಪದೇ ಪದೇ ಬೀದಿಗಿಳಿಯುತ್ತಿರುವ ಹೊತ್ತಿನಲ್ಲೇ ಇದೀಗ ನವದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಅಧಿಸೂಚನೆ ಹೊರಡಿಸಿತ್ತು. ಈ ಕುರಿತು ರಾಜ್ಯ ಬಿಜೆಪಿಯು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟೀಕಿಸಿದೆ.

 

‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು” ಇದು ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಪರಿ. ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ. ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲ. ಇಂತಹ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮೇ 7 ರಂದು ಪ್ರತಿಯೊಬ್ಬ ನಾಡಿನ ಹೆಮ್ಮೆಯ ರೈತರು ತಕ್ಕ ಉತ್ತರ ನೀಡಬೇಕು,’  ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

 

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಅಲ್ಪಾವಧಿಯಲ್ಲೇ ಸಚಿವರಿಗೆ 9.90 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ ಕಾರುಗಳನ್ನು ಖರೀದಿಸಿತ್ತು. ಅದೇ ಸಂದರ್ಭದಲ್ಲೂ ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೂ ಕಾರುಗಳನ್ನು ಖರೀದಿಸಿತ್ತು.

 

 

ಭೀಕರ ಬರದ ನಡುವೆಯೂ 1.36 ಕೋಟಿ ರು ವೆಚ್ಚದಲ್ಲಿ 7 ಹೊಸ ಕಾರುಗಳ ಖರೀದಿ

ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೆ ಅವಶ್ಯಕವಿರುವ 7 ವಾಹನಗಳನ್ನು ಪ್ರತಿ ವಾಹನಕ್ಕೆ  19,46,421 ರು.ಗಳಂತೆ ಒಟ್ಟಾರೆ 1,36,24,947 ರು.ಗಳ ವೆಚ್ಚದಲ್ಲಿ ಖರೀದಿಸಲು ಕೆಟಿಪಿಪಿ ಕಾಯ್ದೆ ಅಡಿ 4(ಜಿ) ವಿನಾಯಿತಿ ನೀಡಿತ್ತು.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸದ್ಯ ಎದುರಾಗಿರುವ ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಟ್ರಾಮಾ ಕೇರ್‍‌ ಕೇಂದ್ರಕ್ಕೆ ಅನುದಾನವನ್ನೂ ಕಡಿತಗೊಳಿಸಿತ್ತು.

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಓಡಾಟ ನಡೆಸಲು 2023ರಲ್ಲೇ ಹೊಸ ಕಾರನ್ನು ಖರೀದಿಸಲಾಗಿತ್ತು. ಅಲ್ಲದೇ  ಅನುದಾನ ಲಭ್ಯವಿಲ್ಲದಿದ್ದರೂ ಎಲ್ಲಾ  ಸಚಿವರಿಗೆ ಹೊಸ ಕಾರು ಖರೀದಿಸಲು ಹೆಚ್ಚುವರಿಯಾಗಿ ಅನುದಾನ ಒದಗಿಸಿತ್ತು.  ಅಲ್ಲದೇ ಹಳೆಯ ವಾಹನಗಳನ್ನು ಬದಲಾಯಿಸುವುದನ್ನು ಒಳಗೊಂಡಂತೆ ಹೊಸ ವಾಹನಗಳನ್ನು ಖರೀದಿಸಲು ಸಂಪೂರ್ಣವಾಗಿ ತಡೆಹಿಡಿಯಲಾಗಿತ್ತು. ಆದರೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅನುದಾನವಿಲ್ಲದಿದ್ದರೂ  ಸಚಿವರಿಗೆ ಹೊಸ  ಕಾರುಗಳನ್ನು ಖರೀದಿಸಲು  9.90 ಕೋಟಿ ರು. ಅನುದಾನ ಒದಗಿಸಿತ್ತು.

 

ಸಚಿವರಿಗೆ ಹೊಸ ಕಾರುಗಳು; ಹೆಚ್ಚುವರಿ ಅನುದಾನ, ಖರೀದಿ ಮೊತ್ತ ಮಿತಿಯೂ ಹೆಚ್ಚಳ, ಸುತ್ತೋಲೆ ಉಲ್ಲಂಘನೆ

ಈ ಲೆಕ್ಕ ಶೀರ್ಷಿಕೆ ( 4070-00-800-0-10ಯಲ್ಲಿ )ಯಲ್ಲಿ 500.00 ಲಕ್ಷ ರು. ಮಾತ್ರ ಅನುದಾನವಿತ್ತು. ಆದರೆ 2023ರ ಆಗಸ್ಟ್‌ 13ರವರೆಗೆ 64.94 ಲಕ್ಷ ರು. ವೆಚ್ಚವಾಗಿ 435.06 ಲಕ್ಷ ರು. ಮಾತ್ರ ಲಭ್ಯವಿತ್ತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕರೂ ಆಗಿರುವ ಎ ಎಸ್‌ ಪೊನ್ನಣ್ಣ ಅವರಿಗೆ ಹೊಸ ವಾಹನ ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿತ್ತು.

 

ಇದಕ್ಕಾಗಿ 30.00 ಲಕ್ಷ ರು.ಗಳನ್ನು ಕಾಯ್ದಿರಿಸಿದ್ದಲ್ಲಿ ಈ ಲೆಕ್ಕ ಶೀರ್ಷಿಕೆಯಲ್ಲಿ 405.06 ಲಕ್ಷ ರು. ಮಾತ್ರ ಲಭ್ಯವಿತ್ತು. ಹೀಗಾಗಿ ಸಚಿವರಿಗೆ ಹೊಸ ಕಾರುಗಳನ್ನು ಖರೀದಿಸಲು ಅನುದಾನವೇ ಇರಲಿಲ್ಲ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img