Friday | September 11, 2026 |

ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್‌!

Support THE-FILE

spot_img

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಕತ್ತಲಲ್ಲಿಟ್ಟಿದ್ದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳು ಓವರ್‍‌ ಡ್ರಾಫ್ಟ್‌ ಸೌಲಭ್ಯ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ 94.73 ಕೋಟಿ ರುಪಾಯಿ ವರ್ಗಾವಣೆ ಮಾಡಿದ್ದರು.

 

ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರ್‍‌ ಆತ್ಮಹತ್ಯೆ ಪ್ರಕರಣವು ರಾಜಕೀಯಕರಣಗೊಳ್ಳುತ್ತಿದ್ದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್‍‌ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ಬ್ಯಾಂಕ್‌ನ ಮೋಸದ ಚಟುವಟಿಕೆಗಳನ್ನು ವಿವರಿಸಿದ್ದಾರೆ.

 

ರಾಜಶೇಖರ್‍‌ ಅವರು ನೀಡಿದ್ದ ದೂರಿನ ಆಧಾರದ ಮೇಲ್‌ ಬ್ಯಾಂಕ್‌ನ ಎಂ ಡಿ ಹಾಗೂ ಸಿಇಒ ಮನಿಮೇಖಲೈ ಮತ್ತಿತರರ ವಿರುದ್ಧ ಎಫ್‌ಐಆರ್‍‌ ದಾಖಲಾಗಿದೆ. ಬ್ಯಾಂಕ್‌ನ ಅಧಿಕಾರಿಗಳು ನಿಗಮ ಮತ್ತು ನಿಗಮದ ಅಧಿಕಾರಿಗಳ ಗಮನಕ್ಕೂ ತಾರದೆಯೇ ನಿಗಮಕ್ಕೆ ಸೇರಿದ 94.73 ಕೋಟಿ ರು.ಗಳನ್ನು ಅನಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು ಎಂದು ಎಫ್‌ಐಆರ್‍‌ನಲ್ಲಿ ಉಲ್ಲೇಖಿಸಲಾಗಿದೆ.

 

ಎಫ್‌ಐಆರ್‍‌ನಲ್ಲೇನಿದೆ?

 

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯನ್ನು ( ಖಾತೆ ಸಂಖ್ಯೆ; 520141001659653) ಎಂ ಜಿ ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾತೆಗೆ ವರ್ಗಾಯಿಸಿಕೊಂಡಿತ್ತು. ನಿಗಮದ ಖಾತೆಯನ್ನು ನಿಗಮದ ಪರವಾಗಿ ನಿರ್ವಹಣೆ ಮಾಡಲು 2024ರ ಫೆ.26ರಂದು ಬ್ಯಾಂಕ್‌ನವರು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳು ಸಹಿ ಪಡೆದುಕೊಂಡು ಹೋಗಿದ್ದರು.

 

ಆ ನಂತರ ಈ ಖಾತೆಯಿಂದ 2024ರ ಮಾರ್ಚ್‌ 4ರಂದು 25 ಕೋಟಿ, ಮಾರ್ಚ್‌ 6ರಂದು 25 ಕೋಟಿ, 21ರಂದು 44 ಕೋಟಿ, 22ರಂದು 33 ಕೋಟಿ, ಮೇ 21ರಂದು 50 ಕೋಟಿ ರು. ಸೇರಿ ಒಟ್ಟು 185.33 ಕೋಟಿ ರು ಬೇರೆ ಬೇರೆ ಬ್ಯಾಂಕ್‌ನಿಂದ ಹಾಗೂ ಸ್ಟೇಟ್‌ ಹುಜುರ್‍‌ ಟ್ರೆಜರಿ ಖಜಾನೆ 2ರಿಂದ ನಿಗಮದ ಖಾತೆಗೆ ಹಣ ಸಂದಾಯವಾಗಿತ್ತು.

 

ಚೆಕ್‌ಬುಕ್‌, ಪಾಸ್‌ ಬುಕ್‌ ನೀಡದ ಬ್ಯಾಂಕ್‌

 

ಈ ಮಧ್ಯೆ ಚುನಾವಣೆ ನೀತಿ ಸಂಹಿತೆ ಇದ್ದದ್ದರಿಂದ ನಿಗಮ ಮತ್ತು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದೊಂದಿಗೆ ಯಾವುದೇ ಮಾತುಕತೆ, ಪತ್ರವ್ಯವಹಾರ ನಡೆದಿರುವುದಿಲ್ಲ. ಸದರಿ ಬ್ಯಾಂಕ್‌ನವರು ನಿಗಮದ ಅಧಿಕೃತ ವಿಳಾಸಕ್ಕೆ ಯಾವುದೇ ಚೆಕ್‌ ಬುಕ್‌ ಹಾಗೂ ಪಾಸ್‌ ಬುಕ್‌ ಕಳಿಸಿರಲಿಲ್ಲ.

 

ದಾಖಲಾತಿಗಳನ್ನೂ ಕಳಿಸಿರಲಿಲ್ಲ

 

2024ರ ಮೇ 22ರಂದು ನಿಗಮದ ಅಧಿಕಾರಿಗಳು ಬ್ಯಾಂಕ್‌ ಗೆ ಹೋಗಿ ಚೆಕ್‌ ಬುಕ್‌ ಮತ್ತು ಪಾಸ್‌ ಬುಕ್‌ ಮತ್ತು ನಿಗಮದ ಖಾತೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನಿಗಮದ ಅಧಿಕಾರಿಗಳು ಕೇಳಿದ್ದರು. ಆದರೆ ನಿಗಮದ ವಿಳಾಸಕ್ಕೆ ಕಳಿಸಲಾಗಿದೆ ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದ್ದರು. ಆದರೆ ವಾಸ್ತವದಲ್ಲಿ ಬ್ಯಾಂಕ್‌ ಯಾವುದೇ ದಾಖಲಾತಿಗಳನ್ನು ನೀಡಿರಲಿಲ್ಲ. ನಿಗಮಕ್ಕೆ ಸಂಬಂಧಪಟ್ಟ ದಾಖಲಾತಿಗಳು, ಆರ್‍‌ಟಿಜಿಎಸ್‌, ಬೋರ್ಡ್‌ ರೆಸ್ಯೂಲೂಷನ್‌ ಜತೆಗೆ ಸಹಿಯನ್ನು ನಕಲು ಮಾಡಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡಲಾಗಿತ್ತು ಎಂಬುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

 

‘ನಿಗಮದ ಖಾತೆಯನ್ನು ನೋಡಲಾಗಿ ಸುಮಾರು 94,73,08,500 ರು.ಗಳು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುತ್ತದೆ. ಸಂಬಂಧಪಟ್ಟ ಬ್ಯಾಂಕ್‌ನವರು ನಿಗಮದ ನೋಂದಾಯಿತ ಇ-ಮೇಲ್‌ಗೆ ಇದಕ್ಕೆ ಸಂಬಂಧಪಟ್ಟ ಯಾವುದೇ ಸಂದೇಶಗಳನ್ನೂ ಕಳಿಸಿಲ್ಲ. ಮತ್ತು ಯಾವುದೇ ಮೊಬೈಲ್‌ ನಂಬರ್‍‌ಗಳನ್ನೂ ರೆಕಾರ್ಡ್‌ ಮಾಡಿಲ್ಲ. ಹಣ ವರ್ಗಾವಣೆಯಾದ ಬಗ್ಗೆ ಮಾಹಿತಿ ನೀಡಿರುವುದಿಲ್ಲ,’ ಎಂದು ರಾಜಶೇಖರ್‍‌ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಈ ಪ್ರಕರಣ ಬೆಳಕಿಗೆ ಬಂದ ನಂತರ ತಕ್ಷಣವೇ ನಿಗಮದ ಖಾತೆಗೆ 5 ಕೋಟಿ ರು.ಗಳನ್ನು ಬ್ಯಾಂಕ್‌ನವರು ಜಮಾವಣೆ ಮಾಡಿದ್ದಾರೆ. ಹಾಗೂ ಅಕ್ರಮಕ್ಕೆ ಸಂಬಂಧಪಟ್ಟಂತೆ ಬ್ಯಾಂಕ್‌ ಸಿಸಿಟಿವಿ ದೃಶ್ಯಗಳು ಒದಗಿಸುವಂತೆ ಕೋರಲಾಗಿತ್ತು. ಆದರೆ ಇಲ್ಲಿಯವರೆಗೂ ಯಾವುದೇ ಸಿಸಿಟಿವಿ ದೃಶ್ಯಗಳನ್ನು ಒದಗಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಓವರ್‍‌ ಡ್ರಾಫ್ಟ್‌ ಸೌಲಭ್ಯ ಸೃಷ್ಟಿಸಿ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಢಿ ಕೃತ್ಯ ಎಸಗಿ ನಿಗಮ, ಮಂಡಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.  ಈ ಸಂಬಂಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಎಫ್‌ಐಆರ್‍‌ ದಾಖಲಾಗಿದೆ.

 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅನಧಿಕೃತ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದನ್ನು ಒಪ್ಪಿಕೊಂಡಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img