Saturday | September 12, 2026 |

ಹೈಟೆಕ್‌ ಆಂಬುಲೆನ್ಸ್‌, ಇಸಿಜಿ ಯಂತ್ರ ಖರೀದಿಯಲ್ಲಿ ಅಕ್ರಮ; ಇಎಸ್‌ಐ ಆಸ್ಪತ್ರೆಗಳಲ್ಲಿ 16.32 ಕೋಟಿ ಅವ್ಯವಹಾರ?

Support THE-FILE

spot_img

ಬೆಂಗಳೂರು; ರಾಜ್ಯದ ಇಎಸ್‌ಐ ಆಸ್ಪತ್ರೆಗಳಿಗೆ 2023-24ನೇ ಸಾಲಿನಲ್ಲಿ 16.32 ಕೋಟಿ ರು. ವೆಚ್ಚದಲ್ಲಿ ಹೈಟೆಕ್‌ ಆಂಬ್ಯುಲೆನ್ಸ್‌, ಇಸಿಜಿ ಯಂತ್ರ ಸೇರಿದಂತೆ ವೈದ್ಯಕೀಯ ಸಲಕರಣೆ ಮತ್ತು ಔಷಧಗಳ ಖರೀದಿಯಲ್ಲಿ ಅಕ್ರಮದ ವಾಸನೆ ಬಡಿದಿದೆ.

 

ಹಾಗೆಯೇ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಆಗದೇ ಇದ್ದರೂ ಸಹ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಿದೆ.  ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳು ಮತ್ತು ಔಷಧಾಲಯಗಳಿಗೆ ಖರೀದಿಯಾಗಿರುವ ಬಹುತೇಕ ವೈದ್ಯಕೀಯ ಸಲಕರಣೆಗಳು ಮತ್ತು ಪೀಠೋಪಕರಣಗಳು ಕಳಪೆಯಿಂದ ಕೂಡಿವೆ. ಈ ಕುರಿತು ಇಎಸ್‌ಐನ ವಿಚಕ್ಷಣಾ ದಳದ ತಪಾಸಣೆಯು ಬಹಿರಂಗಗೊಳಿಸಿದೆ.

 

ಅಲ್ಲದೇ ಈ ಕುರಿತು ರಾಜ್ಯ ಇಎಸ್‌ಐನ ನಿರ್ದೇಶಕರಿಗೂ 2024ರ ಜುಲೈ 8ರಂದು ಪತ್ರ ಬರೆದಿದೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೂ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

 

ಪತ್ರದಲ್ಲೇನಿದೆ?

 

ಕಾರ್ಮಿಕ ವಿಮಾ ಆಸ್ಪತ್ರೆಗಳಿಗೆ 5.99 ಕೋಟಿ ರು. ವೆಚ್ಚದಲ್ಲಿ 8 ಹೈಟೆಕ್‌ (ಸಿ ಮಾದರಿ) ಆಂಬ್ಯುಲೆನ್ಸ್‌ ಗಳನ್ನು ಖರೀದಿ ಮಾಡಲಾಗಿದೆ. ಆದರೆ ಅದನ್ನು ಬಳಕೆ ಮಾಡಿಲ್ಲ. ಚಾಲಕರು ಮತ್ತು ಪ್ಯಾರಾ ಮೆಡಿಕಲ್‌ ಸಿಬ್ಬಂದಿ ನೇಮಕವಾಗಿರದ ಕಾರಣ ಈ ಆಂಬ್ಯಲೆನ್ಸ್‌ಗಳು ಬಳಕೆ ಮಾಡಿಲ್ಲ ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.

 

ಇಸಿಜಿ ಯಂತ್ರಗಳು, ವಾಟರ್‍‌ ಕೂಲರ್ಸ್‌, ರೆಫ್ರಿರಿಜೇಟರ್‍‌ಗಳನ್ನು ಖರೀದಿ ಮಾಡಲಾಗಿದೆ. ಆದರೆ ಬಹುತೇಕ ಔಷಧಾಲಯಗಳಲ್ಲಿ ಧೂಳು ಹಿಡಿದು ಕೂತಿದೆ ಎಂಬುದು ಪತ್ರದಿಂದ ತಿಳಿದು ಬಂದಿದೆ.

 

ಔಷಧಾಲಯಗಳಿಗೆ 10.33 ಕೋಟಿ ರು ವೆಚ್ಚದಲ್ಲಿ ಖರೀದಿ ಮಾಡಲಾಗಿರುವ ಪೀಠೋಪಕರಣಗಳು ಕಳಪೆಯಾಗಿವೆ. ಹಲವು ಉಪಕರಣಗಳನ್ನು ಇನ್ನೂ ಅಳವಡಿಸಿಲ್ಲ. ಈ ಎಲ್ಲವನ್ನೂ ಪರಿಶೀಲಿಸಿ ಅಂಶವಾರು ಈ ಕಚೇರಿಗೆ ವಾಸ್ತವ ವರದಿಯನ್ನು ನೀಡಬೇಕು ಎಂದು 2024ರ ಜುಲೈ 8ರಂದು ಇಎಸ್‌ಐನ ಉಪ ನಿರ್ದೇಶಕರು (ವಿಚಕ್ಷಣಾ) ವಿನಯ್‌ ಕುಮಾರ್ ಶರ್ಮಾ ಅವರು ಕಾರ್ಮಿಕ ವಿಮಾ ಆಸ್ಪತ್ರೆಗಳ ರಾಜ್ಯ ನಿರ್ದೇಶಕರಿಗೆ ಸೂಚಿಸಿರುವುದು ಗೊತ್ತಾಗಿದೆ.

 

ಈ ಪತ್ರದ ಕುರಿತು ಮಾಹಿತಿ ಮತ್ತು ಸ್ಪಷ್ಟನೆ ಕೋರಿ ‘ದಿ ಫೈಲ್‌’, ರಾಜ್ಯದ ಇಎಸ್‌ಐ ನ ನಿರ್ದೇಶಕರಿಗೆ ವಾಟ್ಸಾಪ್‌ ಮೂಲಕ ಕೋರಿದೆ. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರತಿಕ್ರಿಯೆ ಮತ್ತು ಮಾಹಿತಿ ಬಂದಲ್ಲಿ ಈ ವರದಿಯನ್ನು ನವೀಕರಿಸಲಾಗುವುದು.

 

ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ನಿಗಮದ ಆಸ್ಪತ್ರೆಗಳು ಪಾಳು ಬಿದ್ದಿವೆ. ಅನೇಕ ಆಸ್ಪತ್ರೆಗಳಲ್ಲಿ ಆಧುನಿಕ ವೈದ್ಯಕೀಯ ಸಲಕರಣೆ, ಉಪಕರಣಗಳ ಬಳಕೆ ಆಗುತ್ತಿಲ್ಲ. ಬೇಡಿಕೆ ಇರದೇ ಇದ್ದರೂ ಸಹ ಖರೀದಿ ಮಾಡಲಾಗಿದೆ ಎಂಬ ಆರೋಪಗಳೂ ಇವೆ.

 

ಕೋವಿಡ್‌ ಸಂದರ್ಭದಲ್ಲೇ ಹಿಂದಿನ ಸರ್ಕಾರವು ಕಾರ್ಮಿಕ ರಾಜ್ಯ ವಿಮಾ ನಿಗಮದ ಆಸ್ಪತ್ರೆಗಳ ಪುನರುಜ್ಜೀವನ ಮತ್ತು ನವೀಕರಣಕ್ಕೆ ಬಹುಕೋಟಿಗಳಷ್ಟು ಅನುದಾನ ನೀಡಿತ್ತು. ಆದರೆ ಹಲವು ಆಸ್ಪತ್ರೆಗಳಲ್ಲಿ ಸುಣ್ಣ ಬಣ್ಣ ಬಳಿದಿದ್ದು ಬಿಟ್ಟರೇ ಬೇರೆ ಯಾವುದೇ ಕಾಮಗಾರಿಯೂ ನಡೆದಿಲ್ಲ ಎಂಬ ಆಪಾದನೆಗಳಿವೆ.

 

ಅಗತ್ಯ ವೈದ್ಯಕೀಯ ಸಲಕರಣೆಗಳು ಇನ್ನೂ ಪೂರೈಕೆಯಾಗಿಲ್ಲ. ಅದೇ ರೀತಿ ಸರಬರಾಜು ಆಗಿರುವ ವೈದ್ಯಕೀಯ ಸಲಕರಣೆಗಳು ಕಳಪೆಯಿಂದ ಕೂಡಿವೆ. ಗುಣಮಟ್ಟದಿಂದ ಕೂಡಿರುವ ಸಲಕರಣೆಗಳಿದ್ದರೂ ಸಹ ಅದನ್ನು ಬಳಕೆ ಮಾಡದೇ ಹಾಳುಗೆಡವಲಾಗಿದೆ ಎಂಬ ಅನೇಕ ದೂರುಗಳು ದಾಖಲಾಗಿರುವುದು ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img