Sunday | June 14, 2026 |

ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ; 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದ ಪದ್ಮನಾಭ್‌

Support THE-FILE

spot_img

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಡಿಜಿಎಂ ಆಗಿದ್ದ ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಗಮದಲ್ಲಿ ನಿಯಮಬಾಹಿರವಾಗಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಅಂಶ ಇದೀಗ ಬಯಲಾಗಿದೆ.

 

ಪ್ರಭಾರಿ ಕರ್ತವ್ಯ ಅವಧಿ ಪೂರ್ಣಗೊಂಡಿದ್ದರೂ ಸಹ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿರಲಿಲ್ಲ. ಬದಲಿಗೆ  ನಿಯಮಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿಯೇ ನಿಗಮದಲ್ಲಿ 88 ಕೋಟಿ ರು. ಅಕ್ರಮವಾಗಿ ವರ್ಗಾವಣೆ ಆಗಿತ್ತು ಎಂಬ ಸಂಗತಿಯೂ ಇದೀಗ ಮುನ್ನೆಲೆಗೆ ಬಂದಿದೆ.

 

ಜೆ ಜೆ ಪದ್ಮನಾಭ್‌ ಅವರು 6 ತಿಂಗಳ ನಂತರವೂ ನಿಯಮಬಾಹಿರವಾಗಿ ಪ್ರಭಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು ಎಂದು ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ವಾಲ್ಮೀಕಿ ಪರಿಶಿಷ್ಟ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‍‌ಗೆ ತಡೆಯಾಜ್ಞೆ ದೊರೆತಿರುವುದು ಮತ್ತು ಇಡಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಇಡೀ ಕಾಂಗ್ರೆಸ್‌ ಸರ್ಕಾರವೇ ಪ್ರತಿಭಟನೆ ನಡೆಸಿದ್ದರ ಬೆನ್ನಲ್ಲೇ ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದರು ಎಂಬ ಸಂಗತಿಯು ಚರ್ಚೆಗೆ ಒಳಗಾಗಿದೆ.

 

ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದರು ಎಂಬುದಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ವಿಶೇಷವೆಂದರೇ ಜೆ ಜೆ ಪದ್ಮನಾಭ್‌ ಅವರನ್ನು ನಿಗಮದಲ್ಲಿ ಪ್ರಭಾರಿಯಾಗಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಿಸಬೇಕು ಎಂದು ಸ್ವತಃ ಸಚಿವ ಬಿ ನಾಗೇಂದ್ರ ಅವರೇ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಯೊಬ್ಬರಿಗೆ ಮೌಖಿವಾಗಿ ನಿರ್ದೇಶಿಸಿದ್ದರು. ಆದರೆ ಇದಕ್ಕೆ ಉನ್ನತ ಅಧಿಕಾರಿಯು ಇದಕ್ಕೆ ಅವಕಾಶವಿಲ್ಲ ಎಂದಿದ್ದರು. ನಂತರ ಈ ಸಂಬಂಧ ಟಿಪ್ಪಣಿ ಕಳಿಸಲು ಕೋರಿದ್ದರು. ಆದರೆ ಸಚಿವರು ಟಿಪ್ಪಣಿ ಕಳಿಸಿರಲಿಲ್ಲ, ಬದಲಿಗೆ ಸಚಿವರೇ ನೇರವಾಗಿ ಕಡತವನ್ನೇ ಕಳಿಸಿದ್ದರು ಎಂದು ತಿಳಿದು ಬಂದಿದೆ.

 

ನಂತರ ಈ ಕಡತವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರಿಗೆ ರವಾನಿಸಲಾಗಿತ್ತು. ಜೆ ಜೆ ಪದ್ಮನಾಭ್‌ ಅವರನ್ನು ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಿಸುವ ಸಂಬಂಧ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರನ್ನು ನೇಮಿಸಲು ಅನುಮೋದಿಸಿದ್ದರು ಎಂದು ತಿಳಿದು ಬಂದಿದೆ.

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿತ್ತು. ನಿಯಮಗಳ ಪ್ರಕಾರ ನಿಗಮದಲ್ಲಿನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ತಾತ್ಕಾಲಿಕವಾಗಿ ಗರಿಷ್ಠ 6 ತಿಂಗಳವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. 6 ತಿಂಗಳ ನಂತರ ಪ್ರಭಾರಿಯಾಗಿ ಮುಂದುವರೆಯಲು ಅವಕಾಶವಿಲ್ಲ.

 

ಈ ಹುದ್ದೆಯಲ್ಲಿಯೇ ಜೆ ಜೆ ಪದ್ಮನಾಭ್‌ ಅವರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ 6 ತಿಂಗಳ ನಂತರವೂ ಮುಂದುವರೆಸಬೇಕಿದ್ದರೇ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಬೇಕು. ಆದರೆ ಜೆ ಜೆ ಪದ್ಮನಾಭ್‌ ಅವರನ್ನು ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿಯೇ ಮುಂದುವರೆಸುವ ಸಂಬಂಧ ಆರ್ಥಿಕ ಇಲಾಖೆಗೆ ಕಡತವನ್ನು ಸಲ್ಲಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಜೆ ಜೆ ಪದ್ಮನಾಭ್‌ ಅವರು ಬಂಧನಕ್ಕೊಳಗಾದ ನಂತರ ಈ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರಿಯಾಗಿ ನೇಮಿಸಿ ಇತ್ತೀಚೆಗಷ್ಟೇ ಆದೇಶ ಹೊರಡಿಸಿರುವುದನ್ನು ಸ್ಮರಿಸಬಹುದು.

 

ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್​, ತನ್ನ ಸ್ನೇಹಿತನ ಮನೆಯಲ್ಲಿಟ್ಟಿದ್ದ 3.62 ಕೋಟಿ ರೂಪಾಯಿಯನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

 

ನೆಲಮಂಗಲದ ಗೋವಿನಹಳ್ಳಿ ಸ್ನೇಹಿತನೊಬ್ಬರ ಮನೆಯಲ್ಲಿ ಇಟ್ಟಿದ್ದ 3.62 ಕೋಟಿ ಹಣವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಪ್ರಕರಣದ ಆರೋಪಿಯಾಗಿರುವ ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್​ನ ಎಂಡಿ ಸತ್ಯನಾರಾಯಣ ವರ್ಮಾ ಎಂಬುವರು ವಿವಿಧ ಕಂಪನಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದರು.

 

ನಕಲಿ ದಾಖಲೆ ಮೂಲಕ ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದರು. ಇದೇ ಹಣವನ್ನು ಆರೋಪಿತರಿಗೆ ಆರ್​ಟಿಜಿಎಸ್, ನೆಟ್ ಬ್ಯಾಂಕಿಂಗ್ ಹಾಗೂ ಗೂಗಲ್ ಪೇ ಮೂಲಕ ಹಣ ಕಳುಹಿಸಿದ್ದರು. ಇದೇ ರೀತಿ ಪದ್ಮನಾಭ ಅವರಿಗೂ ಹಣವನ್ನ ವರ್ಮಾ ಕಳುಹಿಸಿದ್ದರು ಎಂದು ಎಸ್ಐಟಿ ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದ ರಿಮ್ಯಾಂಡ್ ಅರ್ಜಿಯಲ್ಲಿ ನಮೂದಿಸಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img