Wednesday | June 17, 2026 |

‘ಹೇಗೆ ಎತ್ತಂಗಡಿ ಮಾಡಿಸಬೇಕು ಎಂದು ಗೊತ್ತಿದೆ’; ಮಹಿಳಾ ಇಂಜಿನಿಯರ್‍‌ಗಳಿಗೆ ಕಚೇರಿಯಲ್ಲೇ ಗುತ್ತಿಗೆದಾರರ ಬೆದರಿಕೆ

Support THE-FILE

spot_img

ಬೆಂಗಳೂರು; ವಿಧಾನಸೌಧದ ಕೂಗಳತೆ ದೂರದಲ್ಲಿರುವ ಲೋಕೋಪಯೋಗಿ ಇಲಾಖೆಯ ಬಹು ಮಹಡಿ ಕಟ್ಟಡದಲ್ಲಿರುವ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಇಂಜಿನಿಯರ್‍‌ಗಳಿಗೆ ಗುತ್ತಿಗೆದಾರರಿಬ್ಬರು ಬೆದರಿಕೆ ಒಡ್ಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ.

 

ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ನಡೆಸುತ್ತಿರುವ ಗುತ್ತಿಗೆದಾರರಿಬ್ಬರು, ಅಸಭ್ಯ, ವಿಚಿತ್ರ ನಡವಳಿಕೆ ಪ್ರದರ್ಶಿಸಿದ್ದಾರೆ ಮತ್ತು ಅವರನ್ನು ಪ್ರಶ್ನಿಸಿದ್ದ ಮಹಿಳಾ ಇಂಜಿನಿಯರ್ ಒಬ್ಬರನ್ನು ಎತ್ತಂಗಡಿ ಮಾಡಿಸಲಾಗುವುದು ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಲಿಖಿತ ದೂರನ್ನೂ ನೀಡಿದ್ದಾರೆ.

 

ಈ ಕುರಿತು ಇಬ್ಬರು ಮಹಿಳಾ ಇಂಜಿನಿಯರ್‍‌ಗಳಿಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಮತ್ತು ವಿಧಾನಸೌಧ ಪೊಲೀಸ್‌ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಆಪಾದಿತ ಗುತ್ತಿಗೆದಾರೊಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‍‌ ದಾಖಲಿಸಲಾಗಿದೆ.

 

ಮಹಿಳಾ ಇಂಜಿನಿಯರ್‍‌ಗಳಿಬ್ಬರು ಸಲ್ಲಿಸಿರುವ ಲಿಖಿತ ದೂರು ಮತ್ತು ಎಫ್‌ಐಆರ್ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

 

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‍‌ ಅಶ್ವಿನಿ ಲಕ್ಷ್ಮಯ್ಯ ಮತ್ತು ಪೂರ್ಣಿಮಾ ಎಂಬುವರು ಪ್ರತ್ಯೇಕವಾದ ದೂರುಗಳನ್ನು ಸಲ್ಲಿಸಿದ್ದರು. ಹಿರಿಯ ಅಧಿಕಾರಿಗಳು ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಈ ಪ್ರಕರಣದ ಕುರಿತು  ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಅಶ್ವಿನಿ ಲಕ್ಷ್ಮಯ್ಯ ಎಂಬುವರು ಸಲ್ಲಿಸಿದ್ದ ದೂರಿನ ಮೇಲೆಯೇ ‘ಇಬ್ಬರು ಕಂಟ್ರಾಕ್ಟರ್‍‌ಗಳ ಮೇಲೆ ಕಾನೂನಿನಂತೆ ತುರ್ತು ಕ್ರಮ ಕೈಗೊಂಡು ಇನ್ನು ಮುಂದೆ ಮಹಿಳಾ ಸಿಬ್ಬಂದಿಗಳಿಗೆ ಭದ್ರತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಂಡು ವರದಿ ನೀಡಬೇಕು,’ ಎಂದು ಖುದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್‌ ಅವರು ಸೂಚಿಸಿದ್ದಾರೆ.

 

 

 

ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ ಲಕ್ಷ್ಮಯ್ಯ ಎಂಬುವರು 2024ರ ಆಗಸ್ಟ್‌ 27ರಂದು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಂಜಪ್ಪ ಮತ್ತು ಸಂಗಮೇಶ್‌ ಎಂಬ ಇಬ್ಬರು ಪಿಡಬ್ಲ್ಯೂಡಿ ಗುತ್ತಿಗೆದಾರರು ಅವಾಚ್ಯ ಪದಗಳಿಂದ ಜೋರಾಗಿ ಮಾತನಾಡಿದ್ದರು. ಇದನ್ನು ಪ್ರಶ್ನಿಸಿದ್ದ ಅಶ್ವಿನಿ ಲಕ್ಷ್ಮಯ್ಯ ಅವರು ಸೌಜನ್ಯದಿಂದ ವರ್ತಿಸಲು ಕೋರಿದ್ದರು. ಆದರೆ ಗುತ್ತಿಗೆದಾರರು ‘ಲೇಡಿಸ್ ತರಹ ಬಿಹೇವ್‌ ಮಾಡುವುದನ್ನು ಕಲಿಯಿರಿ,’ ಎಂದು ಏರು ದನಿಯಲ್ಲಿ ಹೇಳಿದ್ದರು ಎಂದು ದೂರಿನಲ್ಲಿ ಘಟನೆಯನ್ನು ವಿವರಿಸಿರುವುದು ಗೊತ್ತಾಗಿದೆ.

 

ಗುತ್ತಿಗೆದಾರರ ಏರು ದನಿಗೆ ಪ್ರತ್ಯುತ್ತರ ನೀಡಿದ್ದ ಮಹಿಳಾ ಇಂಜಿನಿಯರ್ ‘ ಸ್ವಾಮಿ ಯಾವುದೇ ಮಹಿಳಾ ಅಧಿಕಾರಿಗಳು ಹೇಗೆ ಲೇಡೀಸ್ ತರಹ ಬಿಹೇವ್‌ ಮಾಡಬೇಕು ಎಂದು ಯಾವುದೇ ಕಾನೂನಿನಲ್ಲಿ ಹೇಳಲಾಗಿಲ್ಲ,’ ಎಂದು ಉತ್ತರಿಸಿದ್ದರು. ಈ ಸಂಬಂಧ ಮಾತಿಗೆ ಮಾತು ಬೆಳೆಸಿದ್ದ ಗುತ್ತಿಗೆದಾರರಿಬ್ಬರು ‘ ನಿಮ್ಮನ್ನು ಈ ಕಾರ್ಯಸ್ಥಳದಿಂದ ಹೇಗೆ ಎತ್ತಂಗಡಿ ಮಾಡಿಸಬೇಕು ಎಂಬುದು ನಮಗೆ ತಿಳಿದಿದೆ,’ ಎಂದು ಬೈಯುತ್ತಾ ವಿಚಿತ್ರವಾದ ಹಾಗೂ ಅಸಭ್ಯವಾಗಿ ನಡೆದುಕೊಂಡಿದ್ದರು ಎಂದು ದೂರಿನಲ್ಲಿ ವಿವರಿಸಿಲಾಗಿದೆ.

 

ಅಲ್ಲದೇ ಟೆಂಡರ್ ನೋಟಿಫಿಕೇಷನ್ ಪ್ರತಿಯನ್ನು ನೀಡಬೇಕು ಎಂದು ಎಕ್ಸಿಕ್ಯೂಟಿವ್‌ ಇಂಜಿನಿಯರ್‍‌ ಜತೆ ಮಾತನಾಡಬೇಕು ಎಂದು ಬಲವಂತ ಮಾಡಿದ್ದರು ಎಂದೂ ದೂರಿನಲ್ಲಿ ಹೇಳಲಾಗಿದೆ.

 

‘ನಾವುಗಳು ಸಂಸ್ಕಾರವಂತ ಹಾಗೂ ಸದ್ಗಹೃಸ್ಥ ಕುಟುಂಬದಿಂದ ಬಂದವರಾಗಿದ್ದು ಈ ಕಚೇರಿ ಕರ್ತವ್ಯದ ಒತ್ತಡದಡಿಯಲ್ಲಿ ದಿನನಿತ್ಯ ಸರಿ ಸುಮಾರು 7ರಿಂದ 8 ಗಂಟೆ ರಾತ್ರಿವರೆಗೂ ಕಚೇರಿಯಲ್ಲಿ ಒಬ್ಬೊಬ್ಬರೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಇಂತಹ ಸನ್ನಿವೇಶಗಳು ನಮ್ಮ ಸುರಕ್ಷತೆ ಮತ್ತು ಕೆಲಸ ಕಾರ್ಯಗಳಿಗೆ ಅಡಚಣೆಯಾಗಿರುತ್ತದೆ. ಇಂತಹವರುಗಳ ವರ್ತನೆಯಿಂದ ತಡವಾದ ಸಮಯದವರೆಗೂ ಕೆಲಸ ಮಾಡುವುದು ಕಷ್ಟ ಸಾಧ್ಯವಾಗಿದೆ. ಇದರಿಂದ ಮುಂದೆ ಯಾವುದಾದರೂ ಅನಾಹುತಗಳು ಆಗಬಹುದೆಂಬ ಭಯವೂ ನಮ್ಮಲ್ಲಿ ಉಂಟಾಗಿದೆ,’ ಎಂದು ದೂರಿನಲ್ಲಿ ಅಳಲು ತೋಡಿಕೊಂಡಿರುವುದು ಗೊತ್ತಾಗಿದೆ.

 

 

ಗುತ್ತಿಗೆದಾರರಾದ ನಂಜಪ್ಪ ಮತ್ತು ಸಂಗಮೇಶ್‌ ಅವರ ವಿರುದ್ಧ ಸೂಕ್ತ ಶಿಸ್ತಿನ ಕ್ರಮ ಕೈಗೊಳ್ಳಬೇಕು ಮತ್ತು ಮಹಿಳಾ ಅಧಿಕಾರಿಗಳು ಮತ್ತು ನೌಕರರು ನಿರ್ಭೀತಿಯಿಂದ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದೂ ದೂರಿನಲ್ಲಿ ಕೋರಿರುವುದು ತಿಳಿದು ಬಂದಿದೆ.

 

ಅದೇ ರೀತಿ ಇದೇ ಸಂಗಮೇಶ್‌ ಎಂಬ ಗುತ್ತಿಗೆದಾರ, ಹೈಕೋರ್ಟ್‌ ಸ್ಪೆಷಲ್‌ ಬಿಲ್ಡಿಂಗ್‌ನ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪೂರ್ಣಿಮಾ ನೆಲಗಳಿ ಎಂಬುವರ ಬಳಿಯೂ ಮಹಿಳೆಯ ಘನತೆಗೆ ಕುಂದು ಬರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಪೂರ್ಣಿಮಾ ಅವರು ವಿಧಾನಸೌಧ ಪೊಲೀಸ್‌ ಠಾಣೆಗೆ 2025ರ ಜನ ಜನವರಿ 10ರಂದು ದೂರು ಸಲ್ಲಿಸಿದ್ದಾರೆ.

 

ಪೂರ್ಣಿಮಾ ಅವರ ದೂರಿನಲ್ಲೇನಿದೆ?

 

2025ರ ಜನವರಿ 4ರಂದು ಪೂರ್ಣಿಮಾ ಅವರು ಕಚೇರಿಯಲ್ಲಿ ನಡೆಯುತ್ತಿದ್ದ ಆನ್‌ಲೈನ್‌ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆಯಲ್ಲಿ ಸಂಗಮೇಶ್ ಎಂಬುವರು ಕಚೇರಿಗೆ ಸುಮಾರು ಮಧ್ಯಾಹ್ನ 12 ಗಂಟೆಗೆ ಬಂದಿದ್ದರು. ಬೈಯಪ್ಪನಹಳ್ಳಿ ಜ್ಯುಡಿಷಿಯಲ್‌ ಕ್ವಾಟ್ರರ್ಸ್‌ ವರ್ಕ್‌ಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದ್ದರು. ಆನ್‌ಲೈನ್‌ ಮೀಟಿಂಗ್‌ ಮುಗಿದ ಮೇಲೆ ಚರ್ಚಿಸೋಣ ಎಂದು ಪೂರ್ಣಿಮಾ ಅವರು ಹೇಳಿದ್ದರು.

 

 

ಆದರೆ ಸಂಗಮೇಶ್‌ ಅವರು ‘ ನನ್ನ ಕಡೆ ಬೆರಳು ತೋರಿಸುತ್ತಾ ನನ್ನ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಇದರಿಂದ ನನ್ನ ಕಚೇರಿಯ ಕರ್ತವ್ಯಕ್ಕೆ ಅಡ್ಡಿಯುಂಟಾಗಿರುತ್ತದೆ. ಅಲ್ಲದೇ ನನ್ನನ್ನು ಒಬ್ಬ ಮಹಿಳೆ ಎಂಬುದನ್ನೂ ಅರಿಯದೇ ನನಗೆ ಕುಂದು ಬರುವ ರೀತಿಯಲ್ಲಿ ಏಕವಚನದಲ್ಲಿ ಮಾತನಾಡಿದ್ದಾರೆ. ಇದರಿಂದ ನನ್ನ ಘನತೆಗೆ ಧಕ್ಕೆಯುಂಟಾಗಿದೆ,’ ಎಂದು ಪೂರ್ಣಿಮಾ ಅವರು ದೂರಿನಲ್ಲಿ ಘಟನೆಯನ್ನು ವಿವರಿಸಿರುವುದು ತಿಳಿದು ಬಂದಿದೆ.

 

 

ಅಲ್ಲದೇ ‘ಕಚೇರಿ ಕರ್ತವ್ಯದ ಒತ್ತಡದಡಿಯಲ್ಲಿ ದಿನನಿತ್ಯ ಸುಮಾರು ರಾತ್ರಿ 8 ಗಮಟೆವರೆಗ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಇಂತಹ ಸನ್ನಿವೇಶಗಳು ನಮ್ಮ ಸರಕ್ಷತೆ ಮತ್ತು ಕೆಲಸ ಕಾರ್ಯಗಳಿಗೆ ಅಡಚಣೆ ಮಾಡುತ್ತಿವೆ. ಅವರುಗಳ ವರ್ತನೆಯಿಂದ ತಡವಾದ ಸಮಯದವರೆಗೂ ಕೆಲಸ ಮಾಡುವುದು ಕಷ್ಟಸಾಧ್ಯವಾಗಿದೆ. ಇದರಿಂದ ಮುಂದೆ ಯಾವುದಾದರೂ ಅನಾಹುತಗಳು ಆಗಬಹುದು ಎಂಬ ಭಯವೂ ನನ್ನಲ್ಲಿ ಉಂಟಾಗಿದೆ,’ ಎಂದು ವಿಧಾನಸೌಧ ಪೊಲೀಸ್‌ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ಅಳಲು ತೋಡಿಕೊಂಡಿರುವುದು ಗೊತ್ತಾಗಿದೆ.

 

 

ಇದನ್ನಾಧರಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಸಂಗಮೇಶ್‌ ಎಂಬ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‍‌ ದಾಖಲಿಸಿದ್ದಾರೆ.

 

 

ಸಂಗಮೇಶ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್‌ 132 ಮತ್ತು 7ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img