Monday | September 14, 2026 |

ಕೋವಿಡ್‌; ಡೀಸೆಲ್‌ ದರ ಹೆಚ್ಚಳ ನೆಪವಾಗಿರಿಸಿ ಸಾರಿಗೆ ನೌಕರರಿಗೆ ಪರಿಹಾರ ಕಷ್ಟಸಾಧ್ಯವೆಂದ ಸರ್ಕಾರ

Support THE-FILE

spot_img

ಬೆಂಗಳೂರು; ಡೀಸೆಲ್‌ ದರದಲ್ಲಿ ಹೆಚ್ಚಳಗೊಂಡಿರುವುದನ್ನು ನೆಪವಾಗಿರಿಸಿಕೊಂಡಿರುವ ಸಾರಿಗೆ ಇಲಾಖೆಯು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮೃತಪಟ್ಟಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯ ಎಂದು  ಕೈಎತ್ತಿದೆ.

 

ಪರಿಹಾರ ಮೊತ್ತಕ್ಕಾಗಿ ಎದುರು ನೋಡುತ್ತಿದ್ದ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿದ್ದ ಕೆಎಸ್‌ಆರ್‌ಟಿಸಿ ನಾಲ್ಕು ನಿಗಮಗಳ ನೌಕರರ ಅವಲಂಬಿತರಿಗೆ ಸರ್ಕಾರದ ಈ ನಿರ್ಧಾರದಿಂದ ಆಘಾತವಾದಂತಾಗಿದೆ.
ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಮಂಜುನಾಥ್‌ ಆರ್‌ ಅವರು ಕೇಳಿದ್ದ ಚುಕ್ಕೆಗುರುತಿಲ್ಲದ ಪ್ರಶ್ನೆ(623)ಗೆ ಉತ್ತರಿಸಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸರ್ಕಾರದ ನಿಲುವನ್ನು ಬಹಿರಂಗಪಡಿಸಿದ್ದಾರೆ.

 

‘ಕೋವಿಡ್‌ 19ರ ಹಿನ್ನೆಲೆಯಲ್ಲಿ ಹಾಗೂ ಡೀಸೆಲ್‌ ದರದ ಹೆಚ್ಚಳದ ಕಾರಣದಿಂದಾಗಿ ನಾಲ್ಕು ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಯು ಗಣನೀಐವಾಗಿ ಕುಂಠಿತವಾಗಿದೆ. ಈ ಪರಿಸ್ಥಿತಿಯಲಲಿ ಕೋವಿಡ್‌ 19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಮೃತಪಟ್ಟ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯವಾಗಿರುತ್ತದೆ,’ ಎಂದು ಲಿಖಿತ ಉತ್ತರ ನೀಡಿದ್ದಾರೆ.

 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಒಟ್ಟು ನೌಕರರಲ್ಲಿ ಮೊದಲ ಅಲೆಯಲ್ಲಿ 39, ಎರಡನೇ ಅಲೆಯಲ್ಲಿ 71 ಮಂದಿ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮರಣ ಹೊಂದಿದ್ದರು. ಆದರೆ ಇದುವರೆಗೆ ಕೇವಲ 4 ಕುಟುಂಬದವರಿಗೆ ಮಾತ್ರ ತಲಾ 30 ಲಕ್ಷ ರು.ಗಳನ್ನು ಮಾತ್ರ ಪರಿಹಾರ ಧನ ನೀಡಿರುವುದು ಉತ್ತರದಿಂದ ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img