Monday | September 14, 2026 |

ಸೌಭಾಗ್ಯ ವಿದ್ಯುತ್‌ ಯೋಜನೆ ಕಾಮಗಾರಿಗೆ ಅನುಮೋದನೆ ಇರದಿದ್ದರೂ ಅನುಷ್ಠಾನ;ಗುತ್ತಿಗೆದಾರರಿಗೆ ಅಧಿಕ ಪಾವತಿ

Support THE-FILE

spot_img

ಬೆಂಗಳೂರು; ಸೌಭಾಗ್ಯ ಯೋಜನೆಯಡಿ 4.75 ಕೋಟಿ ರು ಮೊತ್ತದ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳನ್ನು ಅನುಮೋದನೆ ಇಲ್ಲದೆಯೇ ಕಾರ್ಯಗತಗೊಳಿಸಿದ್ದ ಇಂಧನ ಇಲಾಖೆಯು ಲೆಕ್ಕಪತ್ರಗಳ ಕೈಪಿಡಿಯನ್ನು ಉಲ್ಲಂಘಿಸಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

 

ಪೂರ್ವಭಾವಿ ಯೋಜನೆ ಹಾಗೂ ಅಂದಾಜುಗಳನ್ನು ಸಕ್ಷಮ ಪ್ರಾಧಿಕಾರವು ಅನುಮೋದಿಸಬೇಕು. ಅನುಮೋದಿಸದ ಹೊರತು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಅನುಮೋದಿತ ಅಂದಾಜಿನಲ್ಲಿ ನಿರ್ದಿಷ್ಟವಾಗಿ ಅನುವು ಮಾಡದಿರುವ ಕಾಮಗಾರಿಗಳ ಐಟಂಗಳನ್ನು ಪರಿಷ್ಕೃತ ಅಂದಾಜು ಅಥವಾ ಪೂರಕ ಅಂದಾಜನ್ನು ಅನುಮೋದಿಸದ ಹೊರತು ಕೈಗೆತ್ತಿಕೊಳ್ಳಬಾರದು ಎಂದು ಲೆಕ್ಕಪತ್ರಗಳ ಕೈಪಿಡಿ ಸಂಪುಟ 2ರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಆದರೆ ಇದನ್ನು ಇಂಧನ ಇಲಾಖೆಯು ನೇರಾನೇರ ಉಲ್ಲಂಘಿಸಿದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

‘ರಾಯಚೂರು ಜಿಲ್ಲೆಯ ಮಾನ್ವಿ, ರಾಯಚೂರು, ದೇವದುರ್ಗ, ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಸೌಭಾಗ್ಯ ಯೋಜನೆ ಅಡಿಯಲ್ಲಿ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ 4.75 ಕೋಟಿ ರು ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಇಂಜಿನಿಯರ್‌, ಅಧೀಕ್ಷಕ ಇಂಜಿನಿಯರ್‌ ಮತ್ತು ಮುಖ್ಯ ಇಂಜಿನಿಯರ್‌ರಿಂದ ಅಂದಾಜುಗಳಿಗೆ ಪೂರ್ವಾನುಮೋದನೆ ಪಡೆದುಕೊಳ್ಳದೆಯೇ ಕಾರ್ಯಗತಗೊಳಿಸಲಾಗಿತ್ತು,’ ಎಂಬುದು ಲೆಕ್ಕಪರಿಶೋಧನೆ ವೇಳೆ ಪತ್ತೆಯಾಗಿದೆ.

 

ಅದೇ ರೀತಿ ಬೀದರ್‌ ಜಿಲ್ಲೆಯಲ್ಲಿಯೂ ಸೌಭಾಗ್ಯ ಯೋಜನೆಯಡಿಯಲ್ಲಿ 9,432 ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿದ್ಯುದ್ದೀಕರಣಗೊಳಿಸಲು 17.17 ಕೋಟಿ ರು. ಮೌಲ್ಯಕ್ಕೆ ಮಹದೇವ್‌ ಪ್ರೀಸ್ಪೆಸ್ಸ್‌ಡ್‌ ಪ್ರಾಡಕ್ಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಗುತ್ತಿಗೆ ನೀಡಲಾಗಿತ್ತು. ಕಾಮಗಾರಿ ಆದೇಶ ಪಡೆದ ಮೂರು ತಿಂಗಳ ಒಳಗೇ ಈ ಕುಟುಂಬಗಳಿಗೆ ಅಂದರೆ 2019ರ ಫೆಬ್ರುವರಿ ಅಂತ್ಯಕ್ಕೆ ವಿದ್ಯುದ್ದೀಕರಣ ಸೌಲಭ್ಯವನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಈ ಕಾಮಗಾರಿಗಳು ವಿಳಂಬವಾಗಿದ್ದರಿಂದ 2020ರ ಮಾರ್ಚ್‌ನಲ್ಲಿ 9.78 ಕೋಟಿ ರು.ವೆಚ್ಚದಲ್ಲಿ ಪೂರ್ಣಗೊಂಡಿದ್ದವು.

 

ಆದರೆ ಗುತ್ತಿಗೆದಾರರು ಮತ್ತು ಸಂಬಂಧಿತ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಹಿ ಮಾಡಿದ್ದ ಜಂಟಿ ಸರಕು ಸಾಮಗ್ರಿಗಳು ಮತ್ತು ಮುಖ್ಯ ಇಂಜಿನಿಯರ್‌ ಅವರು ಅನುಮೋದಿಸಿದ್ದಂತಹ (ಜನವರಿ 2021) ದಾಖಲೆಗಳಲ್ಲಿ ವ್ಯತ್ಯಯವಾಗಿದ್ದವು. ಇದು ಗುತ್ತಿಗೆದಾರರಿಗೆ ಅಧಿಕ ಪ್ರಮಾಣದಲ್ಲಿ ಪಾವತಿಗೆ ಕಾರಣವಾಗಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

242 ಕುಟುಂಬಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ 23,34,993 ರು. ಮೊತ್ತವನ್ನು ಅಧಿಕವಾಗಿ ಪಾವತಿಸಲಾಗಿತ್ತು. ಅಲ್ಲದೆ ಪ್ರಮಾಣೀಕರಿಸಿದ್ದ 9,426 ಕುಟುಂಬಗಳಿಗೆ ಪ್ರತಿಯಾಗಿ 9,668 ಕುಟುಂಬಗಳು ಎಂದು ನಮೂದಿಸಲಾಗಿತ್ತು. ಆದರೆ ಮುಖ್ಯ ಇಂಜನಿಯರ್‌ ಅವರು ಯಾವುದೇ ಅಧಿಕ ಪ್ರಮಾಣದಲ್ಲಿ ಪಾವತಿಯಾಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದರೂ ಸಹ ಲೆಕ್ಕಪರಿಶೋಧನೆಯಲ್ಲಿ ಗಮನಿಸಿದ್ದ ಅಂಶಗಳಿಗೆ ಯಾವುದೇ ಉತ್ತರಗಳನ್ನು ನೀಡಿರಲಿಲ್ಲ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img