Saturday | June 20, 2026 |

ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ 8.96 ಕೋಟಿ ವೆಚ್ಚದ ಪ್ರಸ್ತಾವನೆ;ಸರ್ಕಾರದ ಹಣದಿಂದ ಬಿಜೆಪಿ ಶಕ್ತಿ ಪ್ರದರ್ಶನ

Support THE-FILE

spot_img

ಬೆಂಗಳೂರು; ಹಕ್ಕುಪತ್ರ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ನಗದು, ಪ್ರಮಾಣ ಪತ್ರ ವಿತರಣೆ ಮಾಡುವ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಮತಬ್ಯಾಂಕ್‌ ಆಗಿ ಮತ್ತು ಬಲಪ್ರದರ್ಶನಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದಿರುವ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರವು ಇದಕ್ಕಾಗಿ ಆಯೋಜಿಸುತ್ತಿರುವ ಒಂದು ದಿನದ ಕಾರ್ಯಕ್ರಮ, ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ ಸರ್ಕಾರಿ ಬೊಕ್ಕಸದಿಂದ ಕೋಟ್ಯಂತರ ರುಪಾಯಿಗಳನ್ನು ವ್ಯಯಿಸುತ್ತಿದೆ.

 

ಯಾದಗಿರಿ ಜಿಲ್ಲೆಯ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ವಾಸದ ಹಕ್ಕು ದಾಖಲೆ ವಿತರಿಸುವ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರವು 8.96 ಕೋಟಿ ವೆಚ್ಚ ಮಾಡಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2022ರ ಅಕ್ಟೋಬರ್‌ 28ರಂದು ಯಾದಗಿರಿ ಜಿಲ್ಲಾಧಿಕಾರಿ ಪ್ರಸ್ತಾವನೆ (ಸಂ/ಕಂ/ಭೂಮಂ/01/2021-22) ಸಲ್ಲಿಸಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ಮೋದಿ ಅವರು ಭಾಗವಹಿಸಿದ್ದ ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ ಅಂದಾಜು 48 ಕೋಟಿ ರು. ಖರ್ಚಾಗಿದ್ದರ ಬೆನ್ನಲ್ಲೇ ಯಾದಗಿರಿ ಜಿಲ್ಲೆಯಲ್ಲಿಯೂ ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ 8.96 ಕೋಟಿ ರು. ಖರ್ಚು ಮಾಡಲು ಮುಂದಾಗಿರುವುದು ತೆರಿಗೆದಾರರ ಹಣವು  ದುಂದುವೆಚ್ಚಕ್ಕೆ ಕಾರಣವಾದಂತಿದೆ.  ಸದ್ಯ ಈ ಕಡತವನ್ನು ಕಂದಾಯ ಇಲಾಖೆಯು ಆರ್ಥಿಕ ಇಲಾಖೆಗೆ  ರವಾನಿಸಿದೆ. ಅಲ್ಲದೇ ಇದಕ್ಕೆ ಕೆಟಿಪಿಪಿ ಕಾಯ್ದೆ 4(ಜಿ)  ವಿನಾಯಿತಿ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಡಿಸಲಾಗಿದೆ ಎಂದು ತಿಳಿದು ಬಂದಿದೆ.

 

ಇದೇ ನವೆಂಬರ್‌ (2022) ಕೊನೆಯಲ್ಲಿ ಯಾದಗಿರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯಾದಗಿರಿ, ಬೀದರ್‌, ಕಲ್ಬುರ್ಗಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಗುರುತಿಸಿರುವ ಜನವಸತಿ ಪ್ರದೇಶದಲ್ಲಿನ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಸರ್ಕಾರವು ತೀರ್ಮಾನಿಸಿದೆ.

 

‘ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮಕ್ಕೆ ಐದು ಜಿಲ್ಲೆಗಳಿಂದ ಸುಮಾರು 1.30 ಲಕ್ಷಕ್ಕೂ ಹೆಚ್ಚು ಜನ ಸೇರುವುದಾಗಿ ನಿರೀಕ್ಷಿಸಲಾಗಿದೆ. ಈ ಕಾರ್ಯಕ್ರಮವನ್ನು ಅತೀ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ಆಯೋಜಿಸಲು ಕಂದಾಯ ಸಚಿವರು ಸೂಚಿಸಿರುತ್ತಾರೆ. ಈ ಕಾರ್ಯಕ್ರಮಕ್ಕೆ 8.96 ಕೋಟಿ ರು. ವೆಚ್ಚವಾಗಲಿದೆ. ಈ ಅನುದಾನವನ್ನು ಬಿಡುಗಡೆಗೊಳಿಸಬೇಕು,’ ಎಂದು ಯಾದಗಿರಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಿದ್ದಾರೆ.

 

ವೇದಿಕೆ, ಪೈಪ್‌ ಪೆಂಡಾಲ್‌, ಸ್ಟೇಜ್‌ ಕಾರ್ಪೆಟ್‌, ಎಕ್ಸಿಕ್ಯೂಟಿವ್‌ ಚೇರ್ಸ್‌, ಬ್ಯಾರಿಕೇಡ್‌, ವಿಐಪಿ ಚೇರ್ಸ್‌, ವಿಐಪಿಗಳಿಗೆ ಕಾರ್ಪೆಟ್‌, ಮಾಧ್ಯಮ ವಿಭಾಗ, ಎಲೆಕ್ಟ್ರಾನಿಕ್‌ ಮೀಡಿಯಾ ವಿಭಾಗ, ವಿಐಪಿಗಳಿಗೆ ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ, ಎಲ್‌ಇಡಿ ವಾಲ್‌, ಸಭಿಕರಿಗೆ ಎಲ್‌ಇಡಿ, ಫೈಬರ್‌ ಚೇರ್ಸ್‌, ಸಾರ್ವಜನಿಕರಿಗೆ ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ, ಪೋಡಿಯಂ, ಹೂವಿನ ಅಲಂಕಾರ, ಟೀ ಕಪ್ಪುಗಳು ಸೇರಿದಂತೆ ಒಟ್ಟು 23 ಉಪಕರಣಗಳಿಗೆ 3 ಕೋಟಿ ರು. ವೆಚ್ಚವಾಗಲಿದೆ.

 

ಬೀದರ್‌, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಸುತ್ತಮುತ್ತ 10,064 ಕಿ ಮೀ ಗಳಿಂದ ಫಲಾನುಭವಿಗಳನ್ನು ಕರೆತರಲು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸುಮಾರು 2,900 ಬಸ್‌ ವ್ಯವಸ್ಥೆ ಮಾಡಬೇಕಿದೆ. ಇದಕ್ಕಾಗಿ 300 ಕಿ ಮೀ ಗೆ 12,650 ರು. ಲೆಕ್ಕದಲ್ಲಿ ಒಟ್ಟು 3,66,85,000 ರು., ಸಾರ್ವಜನಿಕರಿಗೆ ತಿಂಡಿ ಮತ್ತು ನೀರಿನ ವ್ಯವಸ್ಥೆಗೆ 30,00,000 ರು. ಖರ್ಚಾಗಲಿದೆ. ಅದೇ ರೀತಿ 1.35 ಲಕ್ಷ ಮಂದಿಗೆ ಊಟೋಪಚಾರ, ರಸ್ತೆ ಕಾಮಗಾರಿ, ಪಾರ್ಕಿಂಗ್‌, ಸಿಸಿಟಿವಿ,ಹೆಲ್ಪ್‌ ಸೆಂಟರ್‌, ವಾಹನಗಳಿಗೆ ಡೀಸೆಲ್‌ ಸೇರಿದಂತೆ ಒಟ್ಟು 2.00 ಕೋಟಿ ರು. ವೆಚ್ಚವಾಗಲಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಅಂದಾಜು ಪಟ್ಟಿಯನ್ನು ಒದಗಿಸಿರುವುದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img