Sunday | June 21, 2026 |

ಮೂಳೆ ಇಲ್ಲದ ಗಂಡು ಕುರಿ ಮಾಂಸ, ತ್ಯಾಜ್ಯ ಮಿಶ್ರಿತ ಕೋಳಿ, ನೀರು ಮಜ್ಜಿಗೆ; ಖೈದಿಗಳಿಗೆ ಕಳಪೆ ಆಹಾರ ಆರೋಪ

Support THE-FILE

spot_img

ಬೆಂಗಳೂರು; ಮೂಳೆ ಇಲ್ಲದ ಗಂಡು ಕುರಿ ಮಾಂಸ ಮತ್ತು ಕೋಳಿ ಮಾಂಸವನ್ನು ನೀಡದೇ ಕಾರಾಗೃಹ ನಿಯಮವನ್ನು ಉಲ್ಲಂಘಿಸಿದೆ ಮತ್ತು ತ್ಯಾಜ್ಯಮಿಶ್ರಿತ ಕಳಪೆ ಗುಣಮಟ್ಟದ ಕೋಳಿ ಮಾಂಸವನ್ನು ನೀಡಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಕಾರಾಗೃಹ ಖೈದಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

 

ಕಾರಾಗೃಹ ಅಧೀಕ್ಷಕರು ಶೋಷಣೆ, ದೌರ್ಜನ್ಯ ಮತ್ತು ಲಂಚಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಸಲ್ಲಿಕೆಯಾಗಿರುವ ದೂರಿನಲ್ಲಿಯೇ ಕಳಪೆ ಆಹಾರ ನೀಡುತ್ತಿರುವುದನ್ನು ಖೈದಿಗಳು ದೂರಿನ ಮೂಲಕ ಬಹಿರಂಗಗೊಳಿಸಿದ್ದಾರೆ. ಖೈದಿಗಳು ಸಲ್ಲಿಸಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಕಾರಾಗೃಹದ ನಿಯಮದಂತೆ ಒಂದು ತಿಂಗಳಿನ ನಾಲ್ಕು ವಾರಗಳ ಪೈಕಿ ಎರಡು ವಾರಗಳಲ್ಲಿ ಮೂಳೆ ಇಲ್ಲದ ಗಂಡು ಕುರಿ ಮಾಂಸವನ್ನು ನೀಡಬೇಕು. ಇನ್ನುಳಿದ ಎರಡು ವಾರ ಕೋಳಿ ಮಾಂಸ ನೀಡಬೇಕು. ಆದರೆ ಸುಮಾರು ಮೂರೂವರೆ ವರ್ಷಗಳಿಂದ ಗಂಡು ಕುರಿ ಮಾಂಸ ನೀಡದೇ ಎಲ್ಲಾ ವಾರಗಳಲ್ಲಿಯೂ ಕೂಡ ಕೋಳಿ ಮಾಂಸವನ್ನೇ ನೀಡುತ್ತಿದ್ದಾರೆ. ಇವರು ನೀಡುವ ಕೋಳಿ ಮಾಂಸವು ಸೇವಿಸಲು ಯೋಗ್ಯವಲ್ಲದ ತ್ಯಾಜ್ಯ ಮಿಶ್ರಿತ ಕಳಪೆ ಗುಣಮಟ್ಟದ ಕೋಳಿ ಮಾಂಸವಾಗಿರುತ್ತದೆ.’ ಎಂದ ದೂರಿನಲ್ಲಿ ವಿವರಿಸಿದ್ದಾರೆ.

 

ಅದೇ ರೀತಿ ‘ಕರ್ನಾಟಕ ಸರ್ಕಾರವು ಬಂಧಿವಾಸಿಗಳಿಗಾಗಿ ಸರಬರಾಜು ಮಾಡುವ ಹಾಲು, ತರಕಾರಿಗಳು, ದಿನಸಿ ಪದಾರ್ಥಗಳು, ಸೊಪ್ಪುಗಳು, ಅಡುಗೆ ಅನಿಲ, ಮಾಂಸ, ಮೊಟ್ಟೆ ಮತ್ತು ಕಾರಾಗೃಹದ ಗ್ರಂಥಾಲಯಕ್ಕೆ ಬಂಧಿಗಳ ಜ್ಞಾನಾರ್ಜನೆಗಾಗಿ ನೀಡುತ್ತಿರುವ ದಿನಪತ್ರಿಕೆಗಳು, ವಾರಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಬಂಧಿಗಳಿಗೆ ನೀಡದೇ ತಮ್ಮ ಮನೆಗೆ (ಅಧೀಕ್ಷಕರ ಮನೆಗೆ) ತರಿಸಿಕೊಂಡು ತಮ್ಮ ಸ್ವಂತ ಬಳಕೆಗಾಗಿ ಬಳಸಿಕೊಳ್ಳುತ್ತಾರೆ,’ ಎಂದೂ ಖೈದಿಗಳು ದೂರಿನಲ್ಲಿ ಆರೋಪಿಸಿದ್ದಾರೆ.

 

ಕಾರಾಗೃಹದಲ್ಲಿ ದಿನನಿತ್ಯ ನೀಡುತ್ತಿರುವ ಆಹಾರವು ಕಳಪೆಯಾಗಿರುತ್ತದೆ ಎಂದು ದೂರಿರುವ ಖೈದಿಗಳು ಮಾಂಸಹಾರದ ಸಂದರ್ಭದಲ್ಲಿ ಸಸ್ಯಹಾರ ಸೇವಿಸುವ ಬಂಧಿಗಳಿಗೆ ಪ್ರತ್ಯೇಕ ಸಸ್ಯಹಾರ ಊಟವನ್ನು ನೀಡುತ್ತಿಲ್ಲ. ಸಾಂಬಾರು ಬದಲಾಗಿ ನೀರು ಮಜ್ಜಿಗೆ ನೀಡುತ್ತಾರೆ. ಕಾರಾಗೃಹದ ಕೈತೋಟದಲ್ಲಿ ಬೆಳೆಯುವಂತಹ ಹಣ್ಣುಗಳು, ತರಕಾರಿ, ಸೊಪ್ಪುಗಳನ್ನು ಬಂಧಿಗಳಿಗೆ ನೀಡದೇ ಮಾರುಕಟ್ಟೆಗೆ ಮಾರಿ ಹಣ ಗಳಿಸುತ್ತಾರೆ ಎಂದು ಆಪಾದಿಸಿದ್ದಾರೆ.

 

ಕಾರಾಗೃಹದ ನಿಯಮದಂತೆ ಬಂಧಿಗಳಿಗೆ ನೀಡುವ ಆಹಾರ ಪದಾರ್ಥಗಳ ಪ್ರಮಾಣವು ಅಲ್ಪ ಪ್ರಮಾಣದಲ್ಲಿವೆ. ಹಬ್ಬಗಳಲ್ಲಿ ನೀಡಬೇಕಾಗಿರುವ ವಿಶೇಷ ಭತ್ಯೆಗಳನ್ನು ನೀಡುತ್ತಿಲಲ್. ಪ್ರತಿ ವಾರ ನೀಡುವ ಕೋಳಿ ಮಾಂಸವನ್ನು ಕಾರಾಗೃಹದ ನಿಯಮಕ್ಕಿಂತ ಅಲ್ಪ ಪ್ರಮಾಣದಲ್ಲಿ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

 

ಕಾರಾಗೃಹದ ಬಂಧಿಗಳಿಗಾಗಿ ವಾರದಲ್ಲಿ ಒಮ್ಮೆ ಕೋಳಿ ಮೊಟ್ಟೆಯನ್ನು ನೀಡಬೇಕು. ಆದರೆ ಮೂರೂವರೆ ವರ್ಷಗಳ ಅಂತರದಲ್ಲಿ ಒಟ್ಟಾರೆಯಾಗಿ ಕೇವಲ 10ರಿಂದ 14 ವಾರಗಳಲ್ಲಿ ಮಾತ್ರ ಕೋಳಿ ಮೊಟ್ಟೆಯ್ನು ನೀಡಿ ಉಳಿದ ಯಾವುದೇ ವಾರಗಳಲ್ಲಿಯೂ ಕೋಳಿ ಮೊಟ್ಟೆ ನೀಡಿಲ್ಲ ಎಂಬ ಸಂಗತಿಯು ದೂರಿನಿಂದ ತಿಳಿದು ಬಂದಿದೆ.

 

‘ಕಾರಾಗೃಹದ ಅಧೀಕ್ಷಕರು ವಿಚಾರಣಾಧೀನ ಬಂಧಿಗಳನ್ನು ಸ್ವತಃ ತಮ್ಮ ಮನೆಯ ಕೆಲಸಗಳಾದ ಬಟ್ಟೆ ಒಗೆಯುವುದಕ್ಕೆ, ಪಾತ್ರೆ ತೊಳೆಯುವುದನ್ನು ನೆಲ ಒರೆಸಲು ಶೌಚಾಲಯ ತೊಳೆಯುವುದಕ್ಕೆ ಹಾಗೂ ಇನ್ನು ಹಲವಾರು ಅವರ ವೈಯಕ್ತಿಕ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ,’ ಎಂದು ಆಪಾದಿಸಿದ್ದಾರೆ.

 

ಕಾರಾಗೃಹದ ಬಂಧಿಗಳು ತಮ್ಮ ವಕೀಲರು ಹಾಗೂ ಕುಟುಂಬ ವರ್ಗದವರನ್ನು ಸಂಪರ್ಕಿಸಲು ಇಲಾಖೆ ವತಿಯಿಂದ ಉಚಿತ ದೂರ ಸಂಪರ್ಕ ವ್ಯವಸ್ಥೆಯಿಂದ ಪಿಸಿಎಸ್‌ಯನ್ನು ಉಚಿತವಾಗಿ ಕಲ್ಪಿಸಬೇಕು. ಆದರೆ ಒಬ್ಬ ಬಂಧಿಯು ಒಂದು ಐ ಡಿಯನ್ನು ಮಾಡಿಸಿಕೊಳ್ಳಲು 120 ರು ಗಳನ್ನು ಮತ್ತು ರೀ ಚಾರ್ಜ್‌ ಮಾಡಿಸಿಕೊಳ್ಳಲು ಪ್ರತ್ಯೇಕವಾಗಿ 120 ರು.ಗಳನ್ನು ಹಾಗೂ ನಂಬರ ಬದಲಾವಣೆ ಹಾಗೂ ದೂರವಾಣಿ ಸಂಖ್ಯೆ ಬದಲಾಯಿಸಲು 40 ರು.ಗಳನ್ನು ಶುಲ್ಕವೆಂದು ವಸೂಲು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img