Sunday | September 13, 2026 |

ರಾಷ್ಟ್ರೋತ್ಥಾನ, ಜನಸೇವಾ ಟ್ರಸ್ಟ್‌, ಗುರುಪೀಠಕ್ಕೆ 167 ಎಕರೆ ಗೋಮಾಳ ಮಂಜೂರು; 152.09 ಕೋಟಿಗೂ ಅಧಿಕ ನಷ್ಟ

Support THE-FILE

spot_img

ಬೆಂಗಳೂರು; ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕಾನೂನು ಮತ್ತು ಆರ್ಥಿ ಇಲಾಖೆ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಸಂಘ ಪರಿವಾರದ ಅಂಗ ಸಂಸ್ಥೆಗಳಲ್ಲೊಂದಾದ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌, ವಿಶ್ವ ಹಿಂದೂ ಪರಿಷತ್‌ ಸಂಸ್ಥೆಗಳಿಗೆ ಗೋಮಾಳ, ಸಿ ಎ ನಿವೇಶನ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ 152.09 ಕೋಟಿ ರು. ಗೂ ಅಧಿಕ ಮೊತ್ತ ನಷ್ಟವನ್ನುಂಟು ಮಾಡಿರುವ ಪ್ರಕರಣಗಳು ಇದೀಗ ಮುನ್ನೆಲೆಗೆ ಬಂದಿವೆ.

 

ಹಿಂದಿನ ಸರ್ಕಾರವು 6 ತಿಂಗಳಿನಿಂದ ಈಚೆಗೆ ಮಾಡಿರುವ ಭೂ ಮಂಜೂರಾತಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿರುವ ಬೆನ್ನಲ್ಲೇ 2019-20ರಿಂದ 2023ರ ಮಾರ್ಚ್‌ವರೆಗೂ ಅಂದಾಜು 86 ಎಕರೆ ಮತ್ತು ಮಾದಾರ ಚೆನ್ನಯ್ಯ ಗುರು ಪೀಠಕ್ಕೆ 81.23 ಎಕರೆ ವಿಸ್ತೀರ್ಣದ ಗೋಮಾಳ ಸೇರಿದಂತೆ ಒಟ್ಟಾರೆಯಾಗಿ 147.23 ಎಕರೆ ಮಂಜೂರು ಮಾಡಿರುವ ಪ್ರಕರಣಗಳು ಮಹತ್ವ ಪಡೆದುಕೊಂಡಿವೆ.

 

ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹೊಸಪೇಟೆ, ಮಂಡ್ಯ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅಂದಾಜು 20 ಎಕರೆ ವಿಸ್ತೀರ್ಣದ ಗೋಮಾಳವನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡಿರುವುದು ತಿಳಿದು ಬಂದಿದೆ.

 

ಶಾಲಾ ಶುಲ್ಕದಿಂದ ಸಂಗ್ರಹವಾದ ಆದಾಯವೂ ಸೇರಿದಂತೆ ಇನ್ನಿತರೆ ಮೂಲಗಳಿಂದ ಕಳೆದ 5 ವರ್ಷಗಳಲ್ಲಿ 401.86 ಕೋಟಿ ರು. ಆದಾಯ ಮತ್ತು ಇದೇ ಅವಧಿಯಲ್ಲಿ 63.64 ಕೋಟಿ ರು. ಲಾಭಾಂಶ ಹೊಂದುವ ಮೂಲಕ ಮುಕ್ತ ಮಾರುಕಟ್ಟೆಯಲ್ಲಿ ಜಮೀನು ಖರೀದಿಸುವ ಆರ್ಥಿಕ ಸಾಮರ್ಥ್ಯವಿರುವ ರಾಷ್ಟ್ರೋತ್ಥಾನ ಪರಿಷತ್‌ಗೆ ಮಾರುಕಟ್ಟೆ ಶುಲ್ಕದಲ್ಲೇ ಶೇ. 25ರಷ್ಟು ರಿಯಾಯಿತಿ ದರದಲ್ಲಿ ಗೋಮಾಳ ಮಂಜೂರು ಮಾಡಿತ್ತು.

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

ರಾಷ್ಟ್ರೋತ್ಥಾನ ಪರಿಷತ್‌ ಈಗಾಗಲೇ 74-00 ಎಕರೆ ಹೊಂದಿದ್ದರೂ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಪ್ರಚಲಿತ ಮಾರುಕಟ್ಟೆಯಲ್ಲಿ 7.45 ಕೋಟಿ ರು. ಬೆಲೆ ಬಾಳುವ ಗೋಮಾಳ ಜಮೀನನ್ನು ರಾಜ್ಯ ಬಿಜೆಪಿ ಸರ್ಕಾರವು ಕೇವಲ 1.86 ಕೋಟಿ ರು.ಗೆ ಮಂಜೂರು ಮಾಡಿದೆ. ಈ ಪರಿಷತ್‌ಗೆ ಜಮೀನನ್ನು ಮಂಜೂರು ಮಾಡುವ ಉದ್ದೇಶದಿಂದಲೇ ಗೋಮಾಳ ಶೀರ್ಷಿಕೆಯಿಂದಲೇ ತಗ್ಗಿಸಿ ತನ್ನ ಸಂಘ ನಿಷ್ಠೆ ಮೆರೆದಿರುವ ಸರ್ಕಾರವು 5.59 ಕೋಟಿ ರು. ನಷ್ಟಕ್ಕೆ ದಾರಿಮಾಡಿಕೊಟ್ಟಿತ್ತು.

 

ಅದೇ ರೀತಿ ಕರ್ನಾಟಕ ವಿಧಾನಸಭೆಗೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಗಳಿಗೆಯಲ್ಲಿಯೇ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ 35.33 ಎಕರೆ ವಿಸ್ತೀರ್ಣದ ಜಮೀನಿಗೆ ಪ್ರಚಲಿತ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ದರವನ್ನು ಮರು ನಿಗದಿಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಬೊಕ್ಕಸಕ್ಕೆ ಅಂದಾಜು 139.21 ಕೋಟಿ ರು. ನಷ್ಟವನ್ನು ಹೊರಿಸಿತ್ತು.

 

ಜನಸೇವಾ ಟ್ರಸ್ಟ್‌ಗೆ 2022ರ ಸೆ.13 ಮತ್ತು 2023ರ ಮಾರ್ಚ್‌ 16ರಂದು ಕ್ರಮವಾಗಿ 25 ಎಕರೆ ಗೋಮಾಳವನ್ನು ಪ್ರಚಲಿತ ಮಾರ್ಗಸೂಚಿ ಮೌಲ್ಯದ ಶೇ. 25ರಷ್ಟು ಮತ್ತು 10.33 ಎಕರೆ ಗೋಮಾಳವನ್ನು ಪ್ರಚಲಿತ ಮಾರುಕಟ್ಟೆ ಮೌಲ್ಯ ವಿಧಿಸಿ ಆದೇಶ ಹೊರಡಿಸಿತ್ತು. ಆದರೆ ಈ ದರವನ್ನು ಭರಿಸಲು ಕಷ್ಟಸಾಧ್ಯ ಎಂದು ಜನಸೇವಾ ಟ್ರಸ್ಟ್‌ ಕೋರಿಕೆ ಸಲ್ಲಿಸಿದ್ದ ಕೆಲವೇ ಕೆಲವು ದಿನಗಳಲ್ಲಿ ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಎಂದು ಪರಿಷ್ಕರಿಸಿ ಚಿಕ್ಕಾಸು ದರವನ್ನು ನಿಗದಿಗೊಳಿಸಿ ಆದೇಶ ಹೊರಡಿಸಿತ್ತು.

ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ; ಎಕರೆಗೆ ಶೇ. 5ರಷ್ಟು ದರ ನಿಗದಿ, 139.21 ಕೋಟಿ ನಷ್ಟದ ಹೊರೆ

ಕೋಟ್ಯಂತರ ರುಪಾಯಿ ಬೆಲೆಬಾಳುವ ಜಮೀನು ಮತ್ತು ನಿವೇಶನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಶೇ.25ರ ದರಕ್ಕೆ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಸಂಘ ಪರಿವಾರದ ಅಂಗ ಸಂಸ್ಥೆಗಳು ಮಂಜೂರು ಮಾಡಿಸಿಕೊಂಡಿದ್ದರ ಬೆನ್ನಲ್ಲೆ ಶಿವಮೊಗ್ಗ ಘಟಕದ ವಿಶ್ವ ಹಿಂದೂ ಪರಿಷದ್‌ ಕೂಡ ನಿವೇಶನಕ್ಕೆ ಬಾಕಿ ಪಾವತಿಸಬೇಕಿರುವ ಮೊತ್ತಕ್ಕೆ ಸಂಪೂರ್ಣ ವಿನಾಯಿತಿ ನೀಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿತ್ತು.
ನಿವೇಶನದ ಗುತ್ತಿಗೆ ಮೊಬಲಗು  ಚದರಮೀಟರ್‌ ಒಂದಕ್ಕೆ 7,800 ರು. ಇದೆ. ನಿವೇಶನದ ಅಳತೆ ಎ1567.95 ಚ.ಮೀ ಅನುಗುಣವಾಗಿ 17,00,000 ರು.ಗಳನ್ನು ಪ್ರಾರಂಭಿಕ ಠೇವಣಿ ರೂಪದಲ್ಲಿ ಶುಲ್ಕವನ್ನು ಪಾವತಿಸಿದೆ. ಇದೀಗ ಬಾಕಿ ಪಾವತಿಸಬೇಕಿರುವ ಮೊತ್ತಕ್ಕೆ ಸಂಪೂರ್ಣ ವಿನಾಯಿತಿಯನ್ನು ಕೋರಿತ್ತು.

 

ನಿಯಮ ಉಲ್ಲಂಘಿಸಿ ರಾಷ್ಟ್ರೋತ್ಥಾನ ಪರಿಷತ್‌ಗೆ ಸಿ ಎ ನಿವೇಶನ ; ಬೊಕ್ಕಸಕ್ಕೆ 7.50 ಕೋಟಿ ನಷ್ಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ಗೆ 6 ಎಕರೆ ಜಮೀನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಆರಂಭದಲ್ಲಿ ತಕರಾರು ವ್ಯಕ್ತಪಡಿಸಿದ್ದ ಆರ್ಥಿಕ ಇಲಾಖೆಯು ಕೆಲವೇ ದಿನಗಳಲ್ಲಿ ಸಹಮತಿ ವ್ಯಕ್ತಪಡಿಸಿತ್ತು.

ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?

ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಸರಿನಲ್ಲಿರುವ 20. 17 ಎಕರೆ ಜಮೀನಿನ ಪೈಕಿ 5 ಎಕರೆ ವಿಸ್ತೀರ್ಣದ ಜಮೀನನ್ನು ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‌ ಹೆಸರಿಗೆ ಮಂಜೂರು ಮಾಡಿದೆ ಎಂದು ಗೊತ್ತಾಗಿದೆ.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಮೀನಿನ ಮೇಲೆ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

ಈ ಎಲ್ಲಾ ಪ್ರಕರಣಗಳ ಕುರಿತು ದಾಖಲೆ ಸಹಿತ ‘ದಿ ಫೈಲ್‌’ ಮತ್ತು ‘ವಾರ್ತಾಭಾರತಿ’ಯು ಸರಣಿ ರೂಪದಲ್ಲಿ ವರದಿಗಳನ್ನು ಪ್ರಕಟಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img