Sunday | June 14, 2026 |

2 ವರ್ಷದಲ್ಲಿ 1.42 ಲಕ್ಷ ಕೋಟಿ ರು. ಟೆಂಡರ್‍‌ ಅಂತಿಮ; ಜಲಸಂಪನ್ಮೂಲ, ಗ್ರಾಮೀಣ, ನಗರಾಭಿವೃದ್ಧಿ ಸಿಂಹಪಾಲು

Support THE-FILE

spot_img

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಕಳೆದ 2 ವರ್ಷದಲ್ಲಿ ಜಲಸಂಪನ್ಮೂಲ ಇಲಾಖೆ ಸೇರಿದಂತೆ ಒಟ್ಟು 30 ಇಲಾಖೆಗಳಲ್ಲಿ 1,42,005.92 ಕೋಟಿ ಮೊತ್ತದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್‌ ಅಂತಿಮಗೊಳಿಸಿರುವುದು ಇದೀಗ ಬಹಿರಂಗವಾಗಿದೆ.

 

ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಕಾಂಗ್ರೆಸ್‌ ಸರ್ಕಾರವು ಲೆಕ್ಕಾಚಾರ ನಡೆಸುತ್ತಿರುವ ಬೆನ್ನಲ್ಲೇ ಹಿಂದಿನ ಬಿಜೆಪಿ ಸರ್ಕಾರವು 1,42,005.92 ಕೋಟಿ ರು. ಮೊತ್ತದ  ಟೆಂಡರ್‌ನ್ನು ಅಂತಿಮಗೊಳಿಸಿರುವುದು ಮುನ್ನೆಲೆಗೆ ಬಂದಿದೆ.

 

ಅದೇ ರೀತಿ ಜಲಸಂಪನ್ಮೂಲ ಇಲಾಖೆಯೊಂದರಲ್ಲೇ 25,000 ಕೋಟಿ ಗೂ ಅಧಿಕ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ಇದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಹೇಳಿಕೆ ನೀಡಿರುವ ನಡುವೆಯೇ ಜಲ ಸಂಪನ್ಮೂಲ ಇಲಾಖೆಯೊಂದರಲ್ಲಿಯೇ  21,309.04 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಟೆಂಡರ್‍‌ ಅಂತಿಮಗೊಂಡಿರುವುದು ಸಹ ಮಹತ್ವ ಪಡೆದುಕೊಂಡಿದೆ.

 

ಈಗಾಗಲೇ ಅಂತಿಮಗೊಂಡಿರುವ 1,42,005.92 ಕೋಟಿ ರುಪಾಯಿ ಮೊತ್ತದ ಟೆಂಡರ್‍‌ ನ ಕಾರ್ಯಾದೇಶವನ್ನು ಗುತ್ತಿಗೆದಾರರಿಗೆ ನೀಡಬೇಕೇ, ಬೇಡವೇ ಅಥವಾ ಮುಂದೂಡಬೇಕೇ ಎಂಬ ಬಗ್ಗೆ ಇಲಾಖೆಗಳು ಗೊಂದಲದಲ್ಲಿವೆ. ಈ ಸಂಬಂಧ ಇಲಾಖೆ ಸಚಿವರುಗಳಾದ ಪ್ರಿಯಾಂಕ್‌ ಖರ್ಗೆ, ಬೈರತಿ ಸುರೇಶ್‌ ಅವರು ಸಹ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಅಲ್ಲದೇ ಈ ಹಿಂದಿನ 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 36,784 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ. ಈ ಪೈಕಿ ಸಿವಿಲ್ ಗುತ್ತಿಗೆದಾರರಿಗೇ 25 ಸಾವಿರ ಕೋಟಿ ರೂ. , ವಿದ್ಯುತ್ ಸರಬರಾಜು ಕಂಪನಿಗಳಿಗೆ 8,584 ಕೋಟಿ ರೂ. ಬಿಲ್ ಬಾಕಿ ಮರು ಪಾವತಿ ಮಾಡಬೇಕು. ಹೀಗಿರುವಾಗ 1,42,005.92 ಕೋಟಿ ರು. ಮೊತ್ತದ ಟೆಂಡರ್‍‌ನ್ನು ಅಂತಿಮಗೊಳಿಸಿರುವುದರಿಂದ ಬಿಡ್‌ನಲ್ಲಿ ಯಶಸ್ವಿಯಾಗಿರುವ ಟೆಂಡರ್‍‌ದಾರರಿಗೆ ಕಾಮಗಾರಿ ಚಾಲನೆಗೊಳಿಸಲು ಹಣ ಬಿಡುಗಡೆಯೂ ಸವಾಲು ಕೂಡ ಎದುರಾಗಿದೆ.

 

ವಿವಿಧ ಇಲಾಖೆಗಳು ಟೆಂಡರ್‌ಗೆ ಸಂಬಂಧಿಸಿದಂತೆ ಇ-ಪ್ರೊಕ್ಯೂರ್‌ಮೆಂಟ್‌ ಜಾಲತಾಣದಲ್ಲಿ ಅಂಕಿ ಅಂಶಗಳನ್ನು ಅಳವಡಿಸಿದೆ. ಇಲಾಖಾವಾರು ಅಂಕಿ ಅಂಶಗಳ ವಿವರಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆಯಲ್ಲಿಯೇ ಅತಿ ಹೆಚ್ಚು ಮೊತ್ತದ ಟೆಂಡರ್‌ನ್ನು ಅಂತಿಮಗೊಳಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯು 32,790.01 ಕೋಟಿ ರು., ನಗರಾಭಿವೃದ್ಧಿ ಇಲಾಖೆಯು 25,172.17 ಕೋಟಿ ರು., ಜಲಸಂಪನ್ಮೂಲ ಇಲಾಖೆಯು 27,958.41 ಕೋಟಿ ರು. ಮೊತ್ತದ ಟೆಂಡರ್‌ನ್ನು ಅಂತಿಮಗೊಳಿಸಿರುವುದು ಇ-ಪ್ರೊಕ್ಯೂರ್‌ಮೆಂಟ್‌ ಜಾಲತಾಣದಿಂದ ತಿಳಿದು ಬಂದಿದೆ.

 

100 ಕೋಟಿ ಗಿಂತ ಹೆಚ್ಚು ಕಾಮಗಾರಿ

 

100 ಕೋಟಿ ರು.ಗಿಂತ ಹೆಚ್ಚು ಕಾಮಗಾರಿಗಳ ಸಂಬಂಧ 64,435.65 ಕೋಟಿ ರು. ಮೊತ್ತದ ಟೆಂಡರ್‍‌ ಅಂತಿಮಗೊಳಿಸಿದೆ. ಇದರಲ್ಲಿ ಜಲಸಂಪನ್ಮೂಲ ಇಲಾಖೆಯು 53  ಯೋಜನೆಗಳಿಗೆ 21,309.04 ಕೋಟಿ ರು., ಗ್ರಾಮೀಣಾಭಿವೃದ್ಧಿ ಇಲಾಖೆಯು 48 ಯೋಜನೆಗಳಿಗೆ 21,681.87 ಕೋಟಿ ರು., ನಗರಾಭಿವೃದ್ಧಿ ಇಲಾಖೆ 33 ಯೋಜನೆಗಳಿಗೆ 8,285.3 ಕೋಟಿ ರು., ಇಂಧನ ಇಲಾಖೆಯು 18 ಯೋಜನೆಗಳಿಗೆ 5,151.49 ಕೋಟಿ, ಸಣ್ಣ ನೀರಾವರಿಯಲ್ಲಿ 11 ಯೋಜನೆಗಳಿಗೆ 2,147.17 ಕೋಟಿ ರು., ಆರೋಗ್ಯ ಇಲಾಖೆಯು 7 ಯೋಜನೆಗಳಿಗೆ 1,662.64 ಕೋಟಿ ರು., ಟೆಂಡರ್‍‌ ಅಂತಿಮಗೊಂಡಿದೆ.

 

ವಸತಿ ಇಲಾಖೆಯು 6 ಯೋಜನೆಗಳಿಗೆ 800.44 ಕೋಟಿ ರು., ವಾಣಿಜ್ಯ ಕೈಗಾರಿಕೆ 3 ಯೋಜನೆಗಳಿಗೆ 1,591.29 ಕೋಟಿ, ಲೋಕೋಪಯೋಗಿ ಇಲಾಖೆಯಲ್ಲಿ 1 ಯೋಜನೆಗೆ 157.86 ಕೋಟಿ ರು., ಸಹಕಾರ ಇಲಾಖೆಯಲ್ಲಿ 1 ಯೋಜನೆಗೆ  289.93 ಕೋಟಿ ರು., ಮೂಲಭೂತ ಸೌಕರ್ಯದಲ್ಲಿ 1 ಯೋಜನೆಗೆ 849.97 ಕೋಟಿ ರು., ಕಂದಾಯ ದಲ್ಲಿ 1 ಯೋಜನೆಗೆ  508.66 ಕೋಟಿ ರು. ಸೇರಿ ಒಟ್ಟಾರೆ 183 ಯೋಜನೆಗಳಿಗೆ 64,435.65 ಕೋಟಿ ರು. ಮೊತ್ತದ ಟೆಂಡರ್‍‌ ಅಂತಿಮಗೊಂಡಿರುವುದು ಪಿಪಿಎಂಎಸ್‌ ತಂತ್ರಾಂಶದಿಂದ ಗೊತ್ತಾಗಿದೆ.

 

ಅದೇ ರೀತಿ 50 ರಿಂದ 100 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ 30 ಇಲಾಖೆಗಳು 8,616.14 ಕೋಟಿ ರು., 25ರಿಂದ 50 ಕೋಟಿ ರು ಮೊತ್ತದ ಕಾಮಗಾರಿಗಳಿಗೆ 12,958.61 ಕೋಟಿ ರು., 10 ರಿಂದ 50 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ 14,205.48 ಕೋಟಿ ರು., 1ರಿಂದ 10 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ 41,388.19 ಕೋಟಿ ರು. ಮೊತ್ತದ ಟೆಂಡರ್‍‌ಗಳನ್ನು ಅಂತಿಮಗೊಳಿಸಿದೆ. ಒಟ್ಟಾರೆಯಾಗಿ 16,988 ಯೋಜನೆಗಳಿಗೆ 1,42,005.92 ಕೋಟಿ ರು. ಮೊತ್ತದಲ್ಲ ಟೆಂಡರ್‍‌ಗಳನ್ನು ಅಂತಿಮಗೊಳಿಸಿರುವುದು ತಿಳಿದು ಬಂದಿದೆ.

 

ಇದಲ್ಲದೇ ಪ್ರಮುಖ ಯೋಜನೆಗಳ ಕಾರ್ಯನಿರ್ವಹಣೆ ವ್ಯವಸ್ಥೆಯಡಿಯಲ್ಲಿ 15,225.69 ಕೋಟಿ ರು. ಟೆಂಡರ್‍‌ ಅಂತಿಮಗೊಂಡಿದೆ. ಈ ಪೈಕಿ 947.29 ಕೋಟಿ ರು. ಬಿಡುಗಡೆಯಾಗಿದೆ. ಇದರಲ್ಲಿ ಗುತ್ತಿಗೆದಾರರಿಗೆ 787.40 ಕೋಟಿ ರು. ಸಂದಾಯವಾಗಿದ್ದರೇ ಇನ್ನೂ 159.90 ಕೋಟಿ ರು. ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img