Wednesday | September 16, 2026 |

‘ಚನ್ನಮ್ಮನ ಕಿತ್ತೂರು ತಾಲೂಕು’; ಮರು ನಾಮಕರಣಗೊಳಿಸಲು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

Support THE-FILE

spot_img

ಬೆಂಗಳೂರು; ತಾಲೂಕುಗಳ ಮರುನಾಮಕರಣಕ್ಕೆ ಮುಂದಡಿಯಿಟ್ಟಿರುವ ಈಗಿನ ಕಾಂಗ್ರೆಸ್‌ ಸರ್ಕಾರವು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕನ್ನು ಚನ್ನಮ್ಮನ ಕಿತ್ತೂರು ತಾಲೂಕು ಎಂದು ಮರು ನಾಮಕರಣ ಮಾಡಲು ಮುಂದಾಗಿದೆ.

 

ಕಿತ್ತೂರು ತಾಲೂಕನ್ನು ಚನ್ನಮ್ಮನ ಕಿತ್ತೂರು ತಾಲೂಕು ಎಂದು ಮರು ನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯವೂ ಸಹ 2023ರ ಡಿಸೆಂಬರ್‍‌ 22ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಚನ್ನಮ್ಮನ ಕಿತ್ತೂರು ತಾಲೂಕು ಎಂದು ಬದಲಾವಣೆ ಮಾಡಲು ಯಾವುದೇ ಅಭ್ಯಂತರವಿಲ್ಲವೆಂದು ಹೇಳಿದೆ.

 

ಇದರ ಬೆನ್ನಲ್ಲೇ ಕಂದಾಯ ಇಲಾಖೆಯು ಸಹ ಮರುನಾಮಕರಣಗೊಳಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಮಂಡಿಸಿದೆ. ಇದಕ್ಕೆ ಸಚಿವ ಕೃಷ್ಣಬೈರೇಗೌಡ ಅವರು ಅನುಮೋದನೆ ನೀಡಿರುವುದು ಗೊತ್ತಾಗಿದೆ.

 

ಮುಂಬೈ ಕರ್ನಾಟಕ ಎಂದು ಕರೆಯಲಾಗುತ್ತಿರುವ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ‘ಕಿತ್ತೂರು ಕರ್ನಾಟಕ’ ಪ್ರದೇಶ ಎಂದು ಮರು ನಾಮಕರಣ ಮಾಡಲು ಹಿಂದಿನ ಬಿಜೆಪಿ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು.

 

ಈಗಿನ ಕಾಂಗ್ರೆಸ್‌ ಸರ್ಕಾರವು ಕಿತ್ತೂರು ತಾಲೂಕನ್ನು ಮಾತ್ರ ಚನ್ನಮ್ಮನ ಕಿತ್ತೂರು ತಾಲೂಕು ಎಂದು ಮರು ನಾಮಕರಣಗೊಳಿಸಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸದ್ಯದಲ್ಲೇ ನಡೆಯಲಿರುವ ಸಚಿವ ಸಂಪುಟಕ್ಕೆ ಕಂದಾಯ ಇಲಾಖೆಯು ತನ್ನ ವಿಸ್ತೃತ ಪ್ರಸ್ತಾವನೆ (ಕಂಇ88 ಆರ್‍‌ಇಹೆಚ್‌ 2021) ಸಲ್ಲಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇಲಾಖೆಯ ಸಮರ್ಥನೆ

 

18ನೇ ಶತಮಾನದ ಅವಧಿಯಲ್ಲಿ ಕಿತ್ತೂರು ಸಂಸ್ಥಾನವನ್ನು ರಾಣಿ ಚನ್ನಮ್ಮ ಆಳ್ವಿಕೆ ನಡೆಸಿದ್ದರು. ಕಿತ್ತೂರು ಸಂಸ್ಥಾನದ ಸ್ವಾತಂತ್ರಕ್ಕಾಗಿ ಬ್ರಿಟಿಷರೊಂದಿಗೆ ಹೋರಾಡಿ ವೀರ ಮರಣ ಹೊಂದಿದ್ದರು. ಈ ಘಠನೆಯು ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಅಂದಿನಿಂದ ಕಿತ್ತೂರನ್ನು ರಾಣಿ ಚನ್ನಮ್ಮರೊಂದಿಗೆ ಗುರುತಿಸಲಾಗಿರುವ ಐತಿಹಾಸಿಕ ಕಾರಣಗಳಿಂದಾಗಿ ಕಿತ್ತೂರನ್ನು ಚನ್ನಮ್ಮನ ಕಿತ್ತೂರು ಎಂದು ರೂಢಿಯಲ್ಲಿ ಕರೆಯಲಾಗುತ್ತಿದೆ ಎಂದು ವಿವರಿಸಲಾಗಿದೆ.

 

ಕಿತ್ತೂರು ಎಂದು ಕರೆಯಲ್ಪಡುತ್ತಿರುವ ಹಲವು ಗ್ರಾಮ, ಪಟ್ಟಣಗಳೂ ಇವೆ. ಚೆನ್ನಮ್ಮನ್ನ ಕಿತ್ತೂರು ಎಂದು ನಾಮಕರಣ ಮಾಡಿದರೆ ಕಿತ್ತೂರು ತಾಲೂಕನ್ನು ಗುರುತಿಸಲು ಅನುಕೂಲವಾಗಲಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕನ್ನು ಚನ್ನಮ್ಮನ ಕಿತ್ತೂರು ತಾಲೂಕು ಎಂದು ಮರು ನಾಮಕರಣ ಮಾಡಲು ಉದ್ದೇಶಿಸಿದೆ ಎಂದು ಕಂದಾಯ ಇಲಾಖೆಯು ಸಮರ್ಥಿಸಿಕೊಂಡಿದೆ.

 

ಕಿತ್ತೂರು ತಾಲೂಕನ್ನು ಚನ್ನಮ್ಮನ ಕಿತ್ತೂರು ತಾಲೂಕು ಎಂದು ಮರು ನಾಮಕರಣ ಮಾಡುವ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ಅವರು 20022ರ ಜುಲೈ 30ರಂದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

 

ಚನ್ನಮ್ಮನ ಕಿತ್ತೂರು ತಾಲೂಕು ಘೋಷಣೆಯ ಗೆಜೆಟ್‌ ಅಧಿಸೂಚನೆ ಪ್ರಕಟವಾಗಿ 10 ವರ್ಷಗಳ ಕಳೆದಿದೆ. ತಹಶೀಲ್ದಾರ್‍‌ ಹುದ್ದೆ ಸೃಜನೆಯಾಗಿ ಏಳು ವರ್ಷ ಆಗಿದೆ. ಆದರೆ ಹಲವು ಇಲಾಖೆಗಳ ಕಚೇರಿಗಳು ಇನ್ನೂ ಕಿತ್ತೂರಿನತ್ತ ಮುಖ ಮಾಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಡಿ ಬಿ ಇನಾಮದಾರ ಶಾಸಕರಿದ್ದಾಗ ಕಿತ್ತೂರಿಗೆ ಆಡಳಿತ ಸೌಧ ಮಂಜೂರಾಗಿತ್ತು. 10 ಕೋಟಿ ರು. ವೆಚ್ಚದಲ್ಲಿ ಆಡಳಿತ ಸೌಧ ನಿರ್ಮಾಣವಾಗಿದೆ.

 

ಕಿತ್ತೂರು ಉತ್ಸವದ ಕೊಡುಗೆಯಾಗಿ ವೀರರಾಣಿ ಕಿತ್ತೂರು ಚೆನ್ನಮ್ಮಳ ಐತಿಹಾಸಿಕ ಕಿತ್ತೂರನ್ನು ತಾಲೂಕು ಕೇಂದ್ರವೆಂದು ಹಿಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ ಘೋಷಿಸಿದ್ದರು. ತಾಲೂಕು ಸ್ಥಾನಮಾನವನ್ನು ಪಡೆಯುವ ಮೂಲಕ ಕಿತ್ತೂರು, ರಾಜ್ಯದ 177ನೇ ಹಾಗೂ ಬೆಳಗಾವಿ ಜಿಲ್ಲೆಯ 11 ನೇ ತಾಲೂಕ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕಿತ್ತೂರನ್ನು ಐತಿಹಾಸಿಕ ಹಿನ್ನೆಲೆಯ ಆಧಾರದ ಮೇಲೆ ತಾಲೂಕು ಎಂದು ಗುರುತಿಸಲಾಗಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img