Monday | September 14, 2026 |

ಯೋಗೇಶ್‌ಗೌಡ ಕೊಲೆ ಪ್ರಕರಣ; ಸಿಬಿಐನಿಂದ ಹಂತಕರ ಬಂಧನ

Support THE-FILE

spot_img

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮಿಳುನಾಡು ಮೂಲದ ಹಂತಕರನ್ನು ಬಂಧಿಸಿದ್ದಾರೆ.
ಅಶ್ವತ್ಥ್‌, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವರೆಲ್ಲಾ ಬೆಂಗಳೂರು ಮೂಲದ ಸುಪಾರಿ ಹಂತಕರು ಎನ್ನಲಾಗಿದ್ದು, ಬಸವರಾಜ್‌ ಮುತ್ತಗಿ ಕಡೆಯಿಂದ ಯೋಗೀಶ್‌ಗೌಡ ಕೊಲೆಗೆ ಸುಫಾರಿ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಬಂಧನ ಭೀತಿಯಲ್ಲಿದ್ದ ಆರೋಪಿಗಳು ತಮಿಳುನಾಡಿಗೆ ಪರಾರಿಯಾಗುತ್ತಿದ್ದ ವೇಳೆಯಲ್ಲಿ ಅವರನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ರಾತ್ರಿ ವೇಳೆಗೆ ಧಾರವಾಡ ನಾಲ್ಕನೇ ಹೆಚ್ಚುವರಿ ನ್ಯಾಯಾಧೀಶರ ನಿವಾಸಕ್ಕೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕರೆತರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2016, ಜೂನ್ 15 ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸಪ್ತಾಪುರದ ಉದಯ್ ಜಿಮ್ ಬಳಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಜಿಮ್‌ನಲ್ಲಿ ಯೋಗೇಶ ಗೌಡ ಪೇಪರ್ ಓದುತ್ತಾ ಕುಳಿತುಕೊಂಡ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಯೋಗೇಶ್‌ಗೌಡ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಹಂತಕರು ಬಲಗೈಗೆ ಮಚ್ಚಿನಿಂದ ಕೊಚ್ಚಿದ್ದರು. ನಂತರ ಬೆನ್ನತ್ತಿದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ, ಭೀಕರವಾಗಿ ಕೊಲೆಗೈದಿದ್ದರು. ಈ ಪ್ರಕರಣ ಧಾರವಾಡದಲ್ಲಿ ಸಂಚಲನ ಸೃಷ್ಟಿಸಿತ್ತು. ಹತ್ಯೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೂಡಾ ಪ್ರಕರಣದಲ್ಲಿ ತಳಕು ಹಾಕಿಕೊಂಡಿದ್ದನ್ನು ಸ್ಮರಿಸಬಹುದು.
ಪ್ರಕರಣದ ಕುರಿತಾಗಿ ಆರು ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡು ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಇದಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿತ್ತು.
ಸಿಬಿಐ ತನಿಖೆಗೆ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠದಿಂದ ಬಸವರಾಜ್‌ ಮುತ್ತಗಿ ಎಂಬುವವರು ತಡೆ ತಂದಿದ್ದರು. ಈ ಆದೇಶದ ವಿರುದ್ಧ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾ.ದೀಪಕ್‌ ಹೂಡಾ ನೇತೃತ್ವದ ದ್ವಿಸದಸ್ಯ ಪೀಠ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img