Saturday | June 13, 2026 |

1,400 ಕೋಟಿ ಟಿಡಿಆರ್; ರಾಜ್ಯದ ಹಿತಾಸಕ್ತಿಯಿಲ್ಲ, ಸಮರ್ಥನೀಯವಲ್ಲವೆಂಬ ಅಭಿಪ್ರಾಯ ಬದಿಗೊತ್ತಲಿದೆಯೇ?

Support THE-FILE

spot_img

ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಉತ್ತರಾಧಿಕಾರತ್ವ ಹಕ್ಕುಗಳನ್ನು ಹೊಂದಿರುವವರಿಗೆ ಟಿಡಿಆರ್‍‌ ರೂಪದಲ್ಲಿ ಅಗಾಧ ಮೊತ್ತದ ಪರಿಹಾರ ಪಾವತಿಸುವುದು  ರಾಜ್ಯದ ಹಿತಾಸಕ್ತಿಯಾಗುವುದಿಲ್ಲ  ಎಂದು ಮುಖ್ಯಮಂತ್ರಿಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರು ನೀಡಿದ್ದ ಅಭಿಪ್ರಾಯವನ್ನೇ ಬದಿಗೊತ್ತಲು ಮುಂದಾಗಿದೆ.

 

ಬೆಂಗಳೂರು ಅರಮನೆ ರಸ್ತೆ ಅಗಲೀಕರಣಕ್ಕಾಗಿ 15.39 ಎಕರೆ ವಿಸ್ತೀರ್ಣದ ಜಮೀನಿಗೆ ಸುಮಾರು 1,400 ಕೋಟಿ ವೆಚ್ಚದಲ್ಲಿ ಟಿಡಿಆರ್‍‌ ನೀಡುವುದು ಸಮರ್ಥನೀಯವೂ ಅಲ್ಲ ಎಂದು ಸ್ಪಷ್ಟವಾಗಿ ಅಭಿಪ್ರಾಯ ನೀಡಿದ್ದರು. ಆದರೀಗ  ಈ  ಅಭಿಪ್ರಾಯವನ್ನು  ಸರ್ಕಾರವು ಕಾಲ ಕಸವನ್ನಾಗಿಸಿಕೊಂಡಿದೆ.  ವಿಶೇಷವೆಂದರೇ ಈ ಮೊತ್ತವನ್ನು ಪರಿಷ್ಕರಿಸಿರುವ ಬಿಬಿಎಂಪಿಯು, ಇದೀಗ  3,011.66 ಕೋಟಿ ರು ಗೇರಿಸಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ಸಮಗ್ರ ಕಡತವನ್ನು ಪಡೆದುಕೊಂಡಿದೆ.

 

ಬೆಂಗಳೂರು ಅರಮನೆ ರಸ್ತೆ ಅಗಲೀಕರಣ, ವಿಸ್ತರಣೆ ಪ್ರಕರಣದಲ್ಲಿ ಟಿಡಿಆರ್‍‌ ನೀಡುವ ಸಂಬಂಧ ಸುಪ್ರೀಂ ಕೋರ್ಟ್‌ ಅಂತಿಮ ತೀರ್ಮಾನವನ್ನು ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್ ಅವರು ನೀಡಿರುವ ಅಭಿಪ್ರಾಯವು ಮುನ್ನೆಲೆಗೆ ಬಂದಿದೆ.

 

ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8ರಲ್ಲಿ ಪ್ರಮಾಣನುಪಾತದ ಅನ್ವಯ ಮೂಲ ಬೆಲೆಯನ್ನು ( ರು 11 ಕೋಟಿಗಳು 472 ಎಕರೆ 16 ಗುಂಟೆ ಜಾಗಕ್ಕೆ ) ಹಾಗೂ ಸರ್ವೋಚ್ಛ ನ್ಯಾಯಾಲಯವು (ಐ ಎ ಸಂಖ್ಯೆ; 2 ಮತ್ತು 11ರಲ್ಲಿ) ಆದೇಶಿಸಿತ್ತು. ಇದರ ಪ್ರಕಾರ ಪ್ರಸ್ತುತ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 39 ಗುಂಟೆ ಅಥವಾ ಯಾವುದೇ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಮೂಲ ಬೆಲೆಯ (ರು 11 ಕೋಟಿಗಳು ಮಾತ್ರ 472 ಎಕರೆ 16 ಗುಂಟೆಗಳ ಜಾಗಕ್ಕೆ ) ಪ್ರಮಾಣಾನುಪಾತದಲ್ಲಿಯೇ ಮೌಲ್ಯಮಾಪನ ಮಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಭಿಪ್ರಾಯಿಸಿತ್ತು.

 

ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್‌ ಅವರು ಸರ್ಕಾರಕ್ಕೆ ಅಭಿಪ್ರಾಯ ನೀಡಿದ್ದರು.

 

ಅಭಿಪ್ರಾಯದಲ್ಲೇನಿದೆ?

 

ಈ ವಿಷಯವು ಸುಪ್ರೀಂ ಕೋರ್ಟ್‌ ಮುಂದೆ ಬಾಕಿ ಇದೆ. ಬೆಂಗಳೂರು ಅರಮನೆ ಜಮೀನಿನ ಮಾಲೀಕತ್ವದ ವಿಚಾರ ವಿವಾದದಲ್ಲಿದೆ. ಈ ಸಮಯದಲ್ಲಿ, ಸುಮಾರು 1,400 ಕೋಟಿ ವೆಚ್ಚದಲ್ಲಿ 15 ಎಕರೆಗೆ ಟಿಡಿಆರ್ ನೀಡುವುದು ಸಮರ್ಥನೀಯವೆಂದು ತೋರುತ್ತಿಲ್ಲ. ಮೇಖ್ರಿ ವೃತ್ತದಿಂದ ಬಿಡಿಎ ಜಂಕ್ಷನ್‌ನ ನಡುವಿನ ರಸ್ತೆಯ ಭಾಗವನ್ನು ಅಗಲಗೊಳಿಸುವುದು, ಟ್ರಾಫಿಕ್ ದಟ್ಟಣೆಯನ್ನು ಬಿಡಿಎ ಜಂಕ್ಷನ್‌ಗೆ ಬದಲಾಯಿಸಿದಂತಾಗುತ್ತದೆ.

 

 

ಬಿಬಿಎಂಪಿ ಆ ಪ್ರದೇಶದಲ್ಲಿ ಸಂಚಾರ ನಿರ್ವಹಣೆಯ ಪರ್ಯಾಯ ವಿಧಾನಗಳನ್ನು ಸಂಪೂರ್ಣ ವೈಜ್ಞಾನಿಕ ಅಧ್ಯಯನದ ಮೂಲಕ  ಖಚಿತಪಡಿಸಿಕೊಳ್ಳಬೇಕು. ಸರ್ಕಾರದಿಂದ ಸ್ವಾಧೀನಪಡಿಸಿಕೊಂಡಿರುವ (ಭೂ ಮಾಲೀಕರಿಂದ ವಿವಾದಕ್ಕೊಳಗಾದ) ಭೂಮಿಗೆ ಇಷ್ಟು ದೊಡ್ಡ ವೆಚ್ಚದಲ್ಲಿ ಟಿಡಿಆರ್ ರೂಪದಲ್ಲಿ ಪರಿಹಾರವನ್ನು ಪಾವತಿಸುವುದು ರಾಜ್ಯದ ಹಿತಾಸಕ್ತಿಗೆ ಅನುಗುಣವಾಗುವುದಿಲ್ಲ.

 

‘ಆದ್ದರಿಂದ ನಗರಾಭಿವೃದ್ಧಿ ಇಲಾಖೆಯು ಅಗಾಧ ವೆಚ್ಚದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದುವರಿಯುವ ಬದಲು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ನಿಭಾಯಿಸುವ ಪರಿಣಾಮಕಾರಿ ಮಾರ್ಗಗಳನ್ನು ಅನ್ವೇಷಿಸಬಹುದು,’ ಎಂದು ಎಲ್‌ ಕೆ ಅತೀಕ್ ಅವರು ಸ್ಪಷ್ಟವಾಗಿ ಅಭಿಪ್ರಾಯ ನೀಡಿದ್ದರು.

 

 

ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಕರ್ನಾಟಕ ಸ್ಟಾಂಪ್ ಕಾಯ್ದೆಯ ಪ್ರಕಾರ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಒಟ್ಟು ಮೊತ್ತವು ಬರೋಬ್ಬರಿ 3,011.66 ಕೋಟಿ ರು ಆಗಲಿದೆ.

 

ಮೈಸೂರು ರಾಜ ಮನೆತನಕ್ಕೆ 3,011.66 ಕೋಟಿ ರು ಮೊತ್ತದ ಟಿಡಿಆರ್; ಬೊಕ್ಕಸಕ್ಕೆ ಹೊರೆಯಾಗಲಿದೆಯೇ?

 

ಜಯಮಹಲ್‌ ಹಾಗೂ ಬಳ್ಳಾರಿ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಬೆಂಗಳೂರು ಅರಮನೆ ಮೈದಾನದ ಭೂಮಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಪ್ರಕಾರ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್‍‌) ನೀಡಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿರುವ ಬೆನ್ನಲ್ಲೇ ಬಿಬಿಎಂಪಿಯು ಈ ಲೆಕ್ಕಾಚಾರ ಮಾಡಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img