Sunday | June 14, 2026 |

ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು

Support THE-FILE

spot_img

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ  ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌, ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿರುವ ಸಾಲವನ್ನು ತೀರಿಸದೇ ಅನುತ್ಪಾದಕ ಸಾಲಗಾರರ ಪಟ್ಟಿಗೆ ಸೇರ್ಪಡೆಯಾಗಿದೆ. ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳ ಪೈಕಿ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ನಲ್ಲೇ ವಸೂಲಾಗದ ಆಸ್ತಿ ಪ್ರಮಾಣ ಹೆಚ್ಚಿದೆ. 

ಈ ಕಾರ್ಖಾನೆ ವಿವಿಧ ಉದ್ದೇಶಗಳ ಹೆಸರಿನಲ್ಲಿ ಪಡೆದಿರುವ  ಸಾಲಗಳಲ್ಲಿ  2019ರ ಮಾರ್ಚ್‌ 31ರ ಅಂತ್ಯಕ್ಕೆ ಅಸಲು ಒಟ್ಟು 74.48 ಕೋಟಿ ರು., 29.05 ಕೋಟಿ ರು. ಬಡ್ಡಿ ಸೇರಿ ಒಟ್ಟು 103.54 ಕೋಟಿ ರು.ಬಾಕಿ ಇದೆ. ಆದರೆ ಈ ಸಾಲ ಸುಸ್ತಿಯಾಗಿದೆಯಲ್ಲದೆ 2017ರ ಏಪ್ರಿಲ್‌ 16ರಂದೇ ಇದು ವಸೂಲಾಗದ ಆಸ್ತಿ(ಎನ್‌ಪಿಎ)  ಎಂದು ಬ್ಯಾಂಕ್‌ ಪರಿಗಣಿಸಿದೆ. 

ಕೇವಲ ರಮೇಶ್‌ ಜಾರಕಿಹೊಳಿ ಮಾತ್ರವಲ್ಲ ಕಾಂಗ್ರೆಸ್‌ನ ಪ್ರಭಾವಿ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳೂ ಇದೇ ಪಟ್ಟಿಗೆ ಸೇರಿವೆ. ಇವರ  ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳು ಅಪೆಕ್ಸ್‌ ಬ್ಯಾಂಕ್‌ನಿಂದ ವಿವಿಧ ಉದ್ದೇಶಗಳಿಗಾಗಿ ಪಡೆದಿದ್ದ ಸಾಲ ಮರುಪಾವತಿಯಾಗದ ಕಾರಣ ವಸೂಲಾದ ಆಸ್ತಿ ಎಂದು ಪರಿಗಣಿಸಿದೆ ಎಂದು  ಸಹಕಾರ ಸಂಘಗಳ ಜಂಟಿ ನಿಬಂಧಕ ಎಂ ಡಿ ನರಸಿಂಹಮೂರ್ತಿ ನೇತೃತ್ವದ ತನಿಖಾ ತಂಡ ಬಯಲು ಮಾಡಿದೆ. 

ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ಗೆ ಸಕ್ಕರೆ ದಾಸ್ತಾನು ಆಧಾರದ ಮೇಲೆ ದುಡಿಯುವ ಬಂಡವಾಳವಾಗಿ ಸಾಲ ಮಂಜೂರಾಗಿತ್ತು. ಆದರೆ ಮಂಜೂರಾತಿ ಮಾಡುವ ಮುನ್ನ ಅಥವಾ ಆ ನಂತರವಾಗಲಿ ಸಕ್ಕರೆ ದಾಸ್ತಾನು ಇರುವ ಬಗ್ಗೆ ಯಾವುದೇ ದಾಖಲೆಗಳು ಬ್ಯಾಂಕ್ ಅಧಿಕಾರಿಗಳ  ಬಳಿ ಇರಲಿಲ್ಲ ಎಂಬುದನ್ನು ತನಿಖಾ ತಂಡ ಹೊರಗೆಡವಿದೆ. 

ರಮೇಶ್‌ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ಗೆ ಅಪೆಕ್ಸ್‌ ಬ್ಯಾಂಕ್‌ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಒಟ್ಟು 122.38 ಕೋಟಿ ರು.ಸಾಲ ನೀಡಿತ್ತು. ಇದರಲ್ಲಿ ಅವಧಿ ಸಾಲದ ರೂಪದಲ್ಲಿ 10.00 ಕೋಟಿ ರು.(2014ರ ಏಪ್ರಿಲ್‌  15), 2014ರ ನವೆಂಬರ್‌ 12ರಂದು 35 ಕೋಟಿ ರು.,  2013ರ ಜುಲೈ 12ರಂದು ದುಡಿಯುವ ಬಂಡವಾಳ ರೂಪದಲ್ಲಿ 60.00 ಕೋಟಿ ರು., 2017ರ ಮಾರ್ಚ್‌ 2017ರಂದು 9.50 ಕೋಟಿ ರು., 2016ರ ಮಾರ್ಚ್‌ 31ರಂದು ಬ್ರಿಡ್ಜ್‌ ಲೋನ್‌ ರೂಪದಲ್ಲಿ 7.88 ಕೋಟಿ ರು., ಸಾಲ ಮಂಜೂರಾಗಿತ್ತು ಎಂಬ ವಿಚಾರ ತನಿಖಾ ವರದಿಯಿಂದ ತಿಳಿದು ಬಂದಿದೆ. 

ಈ ಪೈಕಿ ಕಾರ್ಖಾನೆ ವಿಸ್ತರಣೆಗೆಂದು  10.00 ಕೋಟಿ ರು., ಎಥೆನಾಲ್‌ ಘಟಕ ಸ್ಥಾಪಿಸಲು 35.00 ಕೋಟಿ ರು., ಮತ್ತು ಬಾಕಿ ಇರುವ ಎಥೆನಾಲ್‌ ಘಟಕಕ ಹಾಕಲು 7.88 ಕೋಟಿ ರು ಬಿಡುಗಡೆಯಾಗಿತ್ತು. ಆದರೆ ಈ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಬ್ಯಾಂಕ್‌ನ ಅಧಿಕಾರಿಗಳು ಕಾರ್ಖಾನೆಯಿಂದ ದೃಢೀಕರಣ ಪತ್ರವನ್ನು ಪಡೆದಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ದಾಖಲಾತಿಗಳು ಲಭ್ಯವಿರಲಿಲ್ಲ  ಎಂಬುದನ್ನು ತನಿಖಾ ತಂಡ ಬಹಿರಂಗಗೊಳಿಸಿದೆ. 

ಮತ್ತೊಂದು ವಿಶೇಷವೆಂದರೆ ಕಾರ್ಖಾನೆ ಹೊಂದಿರುವ 16.00 ಕೋಟಿ ರು ಮತ್ತು 21.10 ಕೋಟಿ ರು. ಮೌಲ್ಯದ  ಸ್ಥಿರಾಸ್ತಿಯನ್ನು ಬ್ಯಾಂಕ್‌ ಅಡಮಾನ ಇರಿಸಿಕೊಂಡಿತ್ತಾದರೂ ಸ್ಥಿರಾಸ್ತಿಯ ಮೌಲ್ಯವು ನೀಡಿರುವ ಸಾಲದ ಮೊತ್ತಕ್ಕಿಂತ ಕಡಿಮೆ ಇತ್ತು.  ಅದೇ  ರೀತಿ ಸಕ್ಕರೆ ದಾಸ್ತಾನು ಆಧಾರದ ಮೇಲೆ ದುಡಿಯುವ ಬಂಡವಾಳ  60.00 ಕೋಟಿ ಮತ್ತು 9.50 ಕೋಟಿ ರು. ಬಿಡುಗಡೆ ಮಾಡಿದ್ದ ಅಪೆಕ್ಸ್‌ ಬ್ಯಾಂಕ್‌, ಹಣ ಬಿಡುಗಡೆ ಸಂದರ್ಭದಲ್ಲಿ ಸಕ್ಕರೆ ದಾಸ್ತಾನು ಇರುವ ಬಗ್ಗೆ  ಖಾತರಿಪಡಿಸಿಕೊಂಡಿರಲಿಲ್ಲ ಎಂಬ ಸಂಗತಿ ತನಿಖಾ ವರದಿಯಿಂದ ತಿಳಿದು ಬಂದಿದೆ. 

ಒಟ್ಟು 103.54 ಕೋಟಿ ರು.ವಸೂಲಾಗದ ಆಸ್ತಿ ಎಂದು ಪರಿಗಣಿಸಿರುವ ಅಪೆಕ್ಸ್ ಬ್ಯಾಂಕ್‌, ಸುಸ್ತಿ ಸಾಲದ ವಸೂಲಾತಿಗಾಗಿ ಸರ್‌ಫೇಸಿಯಾ ಕಾಯ್ದೆ 2002ರ ರೀತಿ ವಸೂಲಾತಿಗೆ ನೋಟಿಸ್‌ ನೀಡಿರುವುದು ವರದಿಯಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img