Monday | June 15, 2026 |

ಎಐಸಿಟಿಇ ಅಧಿಸೂಚನೆ ಅಳವಡಿಸಿಕೊಳ್ಳದ ರಾಜ್ಯ ಸರ್ಕಾರ; ಡಿಪ್ಲೋಮಾ ಉಪನ್ಯಾಸಕರ ವೇತನಕ್ಕೂ ಕೊಕ್ಕೆ

Support THE-FILE

spot_img

ಬೆಂಗಳೂರು; ರಾಜ್ಯ ಸರ್ಕಾರ ಈವರೆವಿಗೂ ಎಐಸಿಟಿಇ ಅಧಿಸೂಚನೆಗಳನ್ನು ಅಳವಡಿಸಿಕೊಳ್ಳದ ಕಾರಣ ರಾಜ್ಯದ ಡಿಪ್ಲೋಮಾ ಕಾಲೇಜಿನ ಉಪನ್ಯಾಸಕರು 6, 7 ನೇ ವೇತನ ಶ್ರೇಣಿ ಮತ್ತು ಬಡ್ತಿಯಲ್ಲಿ ವಂಚಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರ ಡಿಪ್ಲೋಮಾ ಕಾಲೇಜಿನ ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ ಎಂಬುದು ದಾಖಲೆಯಿಂದ  ತಿಳಿದು ಬಂದಿದೆ. 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಆರ್‌ಟಿಐ ಅಡಿ ದಾಖಲೆಗಳು ಲಭ್ಯವಾಗಿವೆ. ದಾಖಲೆಗಳ ಪ್ರಕಾರ ವೇತನ ಶ್ರೇಣಿಯಲ್ಲಾಗಿರುವ ವಂಚನೆಯನ್ನು ಸರಿಪಡಿಸಲು ಡಿಪ್ಲೋಮಾ ಕಾಲೇಜಿನ ಉಪನ್ಯಾಸಕರು ಸರ್ಕಾರದ ಮೆಟ್ಟಿಲೇರಿದ್ದರೂ ಪ್ರಕರಣವನ್ನು ಈವರೆವಿಗೂ ಇತ್ಯರ್ಥಗೊಳಿಸದಿರುವುದು ಬೆಳಕಿಗೆ ಬಂದಿದೆ.

ಸರ್ಕಾರಿ ಮತ್ತು ಅನುದಾನಿತ ಡಿಪ್ಲೋಮಾ ಕಾಲೇಜು ಉಪನ್ಯಾಸಕರಿಗೆ 2011ರ ಏಪ್ರಿಲ್ 1ರಿಂದ ಜಾರಿಯಾಗುವಂತೆ 6ನೇ ಎಐಸಿಟಿಇ ವೇತನ ಶ್ರೇಣಿ ಮತ್ತು ಬಡ್ತಿಯನ್ನು ವಿಸ್ತರಿಸಿತ್ತು.

ಈ ನಡುವೆ 2012ರ ನವೆಂಬರ್ 8 ಮತ್ತು 2016ರ ಜನವರಿ 4ರ ಎಐಸಿಟಿಇ ಅಧಿಸೂಚನೆಗಳನ್ನು ಹೊರಡಿಸಿ ಉಪನ್ಯಾಸಕರ ಬಡ್ತಿಗೆ ಸಂಬಂಧಿಸಿದಂತೆ ಎಪಿಐ/ಪಿಬಿಎಎಸ್ ಆಧರಿತ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ ಈ ಯಾವ ಮಾರ್ಗಸೂಚಿಗಳನ್ನು ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಸರ್ಕಾರ ಇದನ್ನು ಜಾರಿಗೊಳಿಸಿರಲಿಲ್ಲ. ಸರ್ಕಾರದ ಹೊಣೆಗೇಡಿತನದಿಂದಾಗಿ ಡಿಪ್ಲೋಮಾ ಕಾಲೇಜಿನ ನೂರಾರು ಉಪನ್ಯಾಸಕರು ವೇತನ ಶ್ರೇಣಿ ಮತ್ತು ಬಡ್ತಿಯಿಂದ ವಂಚಿತರಾಗಿದ್ದಾರೆ.

ಅಲ್ಲದೆ 2016ರ ಜನವರಿ 4ರಂದು ಎ ಐ ಸಿ ಟಿ ಇ ಈ ಸಂಬಂಧ ಭಾರತೀಯ ಗೆಜೆಟ್‍ನಲ್ಲಿ ಪ್ರಕಟಿಸಿದ್ದ ಅಧಿಸೂಚನೆ ಪ್ರಕಾರ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜು ಬೋಧಕ ವೃಂದವರಿಗೆ ಎ ಪಿ ಐ ಆಧರಿತ ಹೊಸ ಸಿಎಎಸ್ ನಿಯಮಗಳನ್ನು ರೂಪಿಸಿತ್ತು. 

ಅಲ್ಲದೆ 2015ರ ನವೆಂಬರ್ 7ರವರಗೆ ಅನುಷ್ಠಾನಗೊಳಿಸುವುದರಿಂದ ವಿನಾಯಿತಿ ನೀಡಲಾಗಿತ್ತು ಆದರೆ ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಈವರೆವಿಗೂ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಮತ್ತು ಪ್ರಕರಣವನ್ನು ಇನ್ನೂ ಇತ್ಯರ್ಥಗೊಳಿಸಿಲ್ಲ ಎಂಬುದು ದಾಖಲೆಯಿಂದ ತಿಳಿದು ಬಂದಿದೆ. 

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img