Tuesday | September 15, 2026 |

1,861 ಕೋಟಿ ರು ಹಳೇ ಬಾಕಿಗಷ್ಟೇ ಸೀಮಿತ; ನರೇಗಾ ಕೂಲಿಕಾರರ ಭವಿಷ್ಯದ ವೇತನಕ್ಕೆಲ್ಲಿದೆ ಹಣ?

Support THE-FILE

spot_img

ಬೆಂಗಳೂರು; ರಾಜ್ಯದ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕಡೆಗೂ ಅನುದಾನ  ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡಿರುವ ಹಣದ ಬಹುತೇಕ ಭಾಗ ಹಿಂದಿನಿಂದ ಉಳಿಸಿಕೊಂಡು ಬಂದಿರುವ ಕೂಲಿ ಕಾರ್ಮಿಕರ ಬಾಕಿ ಹಣಕ್ಕೆ  ಸರಿದೂಗಿಸಬಹುದೇ ಹೊರತು, ಕೊರೊನಾ ಹಿನ್ನೆಲೆಯಲ್ಲಿ ನಿರುದ್ಯೋಗಿಗಳಾಗಿರುವ ಕೂಲಿ ಕಾರ್ಮಿಕರಿಗೆ ಮುಂದಿನ ದಿನದ  ಕೂಲಿ ಹಣವನ್ನು ಹೇಗೆ ಹೊಂದಿಸಲಿದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ರಾಜ್ಯದ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ₹ 1,861 ಕೋಟಿ ಬಿಡುಗಡೆ ಮಾಡಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ₹ 1,039 ಕೋಟಿ ಬಾಕಿ ಪಾವತಿಸಿದಲ್ಲಿ ₹ 822 ಕೋಟಿ ಉಳಿಯಲಿದೆಯಷ್ಟೆ. ಈ ಮೊತ್ತಕ್ಕೆ ರಾಜ್ಯ ಸರ್ಕಾರ 257 ಕೋಟಿ ರು.ಗಳ ಅನುದಾನವನ್ನು ಸೇರಿಸಿದರೆ 1,079 ಕೋಟಿ ರು. ಆಗಲಿದೆ. ಇದು ಸಚಿವ ಈಶ್ವರಪ್ಪ ಅವರ ಲೆಕ್ಕಾಚಾರ. 

ಆದರೆ ಈ ವಿಚಾರದಲ್ಲಿ ಕೇರಳ  ಸರ್ಕಾರದ  ಮಾದರಿಯನ್ನು ರಾಜ್ಯ ಸರ್ಕಾರ ಅನುಸರಿಸಿಲ್ಲ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 2000 ಕೋಟಿ ರೂ.ಗಳನ್ನು ವಿತರಿಸಲು ಕೇರಳ ಸರ್ಕಾರ ತೀರ್ಮಾನಿಸಿದ್ದನ್ನು ಸ್ಮರಿಸಬಹುದು.  

ಇನ್ನು, ಕೇಂದ್ರ ಸರ್ಕಾರ ಇದೀಗ ಬಿಡುಗಡೆ ಮಾಡಿರುವ ಹಣ ಪ್ರಸಕ್ತ ಸಾಲಿನದ್ದೇ ಅಥವಾ ಬಾಕಿ ಹಣವೇ ಎಂಬುದು ಸ್ಪಷ್ಟವಾಗಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಹಣದ ಪೈಕಿ ಕೇಂದ್ರ ಸರ್ಕಾರ 1,744.33 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು 2020ರ ಮಾರ್ಚ್ 18ರಂದು ನಡೆದ ಅಧಿವೇಶನದಲ್ಲಿ ಸಿ ಎನ್ ಬಾಲಕೃಷ್ಣ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವ  ಈಶ್ವರಪ್ಪ ಅವರು ಉತ್ತರಿಸಿದ್ದರು. 

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹ 1,861 ಕೋಟಿ, ಹಳೆಯ ಬಾಕಿ ತೀರಿಸಿದರೂ ಉಳಿದ ಹಣವನ್ನು ಹೊಂದಿಸುವುದು ಅಷ್ಟು ಸುಲಭದ ಮಾತಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ.  ಇಂತಹ ಪರಿಸ್ಥಿತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸಲು ಬೇರೆ ಯಾವ ಸಂಪನ್ಮೂಲಗಳಿವೆ?

ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರದ ಪರವಾಗಿ 2015-16ರಿಂದ 2019-20ವರೆಗೆ  ಒಟ್ಟು 351332.095 ಲಕ್ಷ ರು.ಗಳನ್ನು ಪಾವತಿಸಿದೆ. ಇದರಲ್ಲಿ 41612.00 ಲಕ್ಷ ರು.ಗಳು ಇನ್ನೂ ಬಾಕಿ ಇದೆ ಎಂಬ ಅಂಶ ದಾಖಲೆಯಿಂದ ತಿಳಿದು ಬಂದಿದೆ. 

ಇದಲ್ಲದೆ ರಾಜ್ಯ ಸರ್ಕಾರವೂ 755.39 ಕೋಟಿ ರು. ಮೊತ್ತದಲ್ಲಿ ಕೂಲಿ ಪಾವತಿಸದೇ ಬಾಕಿ ಉಳಿಸಿಕೊಂಡಿದೆ. 2018-19ರಲ್ಲಿ ಕೂಲಿ ಪಾವತಿಸಲು 32.81 ಕೋಟಿ ರು., 2019-20ರಲ್ಲಿ 53.60 ಕೋಟಿ ರು., ಬಾಕಿ ಇದೆಯಲ್ಲದೆ, ಸಾಮಗ್ರಿ ಮೊತ್ತ ಪೈಕಿ 2018-19ರಲ್ಲಿ 119.17 ಕೋಟಿ ರು., 2019-20ರಲ್ಲಿ 549.81 ಕೋಟಿ ರು. ಬಾಕಿ ಉಳಿಸಿಕೊಂಡಿದೆ ಎಂದು ‘ದಿ ಫೈಲ್‌’ 2020ರ ಮಾರ್ಚ್ 26ರಂದು ದಾಖಲೆ ಸಮೇತ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು. 

ಯೋಜನೆಯಡಿಯಲ್ಲಿ ನೀಡುವ ಕೂಲಿ ಹಣವನ್ನೇ ನೆಚ್ಚಿಕೊಂಡಿರುವ ಗ್ರಾಮೀಣ ನಿರುದ್ಯೋಗಿಗಳು, ಹಳೆಯ ಕೂಲಿಯನ್ನೇ ನೀಡದ  ಸರ್ಕಾರ ಮುಂಗಡವಾಗಿ ಹಣ ನೀಡುವುದೇ ಎಂದು ಪ್ರಶ್ನಿಸಲಾರಂಭಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img