Tuesday | September 15, 2026 |

ಮುಗ್ಗುರಿಸಿ ಬಿದ್ದ ಬೆಳೆ ವಿಮೆ ಯೋಜನೆ; ತಪ್ಪಿಲ್ಲ ರೈತರ ಯಾತನೆ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕಿದ್ದ ಬೆಳೆ ವಿಮೆ ಯೋಜನೆ ಮುಗ್ಗರಿಸಿ ಬಿದ್ದಿದೆ. ಅರ್ಹ ರೈತರಿಗೆ ವಿಮಾ ಪರಿಹಾರ ಮೊತ್ತವು ವಿಮಾ ಸಂಸ್ಥೆಯಿಂದ ನೇರವಾಗಿ ಆಧಾರ್‌ ಸಂಖ್ಯೆ ಜೋಡಣೆಯಾದ ರೈತರ ಖಾತೆಗೆ ಜಮೆ ಮಾಡುವಲ್ಲಿ ಬ್ಯಾಂಕ್‌ಗಳ ಹಲವು ಶಾಖೆಗಳು ಹಿಂದೆ ಬಿದ್ದಿವೆ. 

ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ವಿಮೆ ಮೊತ್ತ ಪಡೆಯಲು ಸಾವಿರಾರು ರೈತರ ಪರದಾಟಕ್ಕೆ ಕೊನೆಯಿಲ್ಲದಂತಾಗಿದೆ. ರೈತರು ಪಡುತ್ತಿರುವ ಬವಣೆಗೆ  ಬ್ಯಾಂಕ್‌ಗಳ ಮಟ್ಟದಲ್ಲಾಗಿರುವ ಪ್ರಮಾದವೇ ಮೂಲ  ಕಾರಣ.

ಕೊರೊನಾ ಹಿನ್ನೆಲೆಯಲ್ಲಿ  ಬ್ಯಾಂಕ್‌ಗಳು ಕೂಡ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಬೆಳೆ ವಿಮೆ ಯೋಜನೆ ನೆನೆಗುದಿಗೆ ಬಿದ್ದಿದೆ. ಕೃಷಿ ಸಚಿವ ಬಿ ಸಿ  ಪಾಟೀಲ್‌ ಅವರು ಈ ಕುರಿತು ಇನ್ನೂ ಗಂಭೀರವಾಗಿ ಯೋಚಿಸಿಲ್ಲ. ಅಲ್ಲದೆ ವಿಧಾನಮಂಡಲದಲ್ಲಿ ಕಳೆದ ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿಯೂ ಈ ಬಗ್ಗೆ ಯಾವೊಬ್ಬ ಸದಸ್ಯರೂ ಚರ್ಚೆಗೆ ಕೈಗೆತ್ತಿಕೊಳ್ಳಲಿಲ್ಲ. 

ಬೆಳೆ ವಿಮೆ ಮೊತ್ತವನ್ನು  ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡುವ ಸಂಬಂಧ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ ಈಚೆಗೆ ನಡೆಸಿದ ಸಭೆಯಲ್ಲಿ ಬ್ಯಾಂಕ್‌ಗಳ ಶಾಖೆಗಳಲ್ಲಾಗುತ್ತಿರುವ ವಿಳಂಬ ಅನಾವರಣಗೊಂಡಿದೆ. 

ಬೆಳೆ  ಸಮೀಕ್ಷೆಯ  ದತ್ತಾಂಶಗಳನ್ನು ಬೆಳೆ ವಿಮೆ ಅರ್ಜಿಗಳೊಂದಿಗೆ  ಪರಿಶೀಲಿಸಿ  ವಿಮಾ ಪರಿಹಾರ ವಿತರಣೆಯಲ್ಲಿ ಕಾರ್ಯಕ್ಷಮತೆ ಹೊಂದಬೇಕಿದ್ದ  ಬ್ಯಾಂಕ್‌ಗಳ ಹಲವು ಶಾಖೆಗಳಿಗೆ ತಿಳಿವಳಿಕೆ ಇಲ್ಲವಾಗಿದೆ. ಹೀಗಾಗಿ ಸಾವಿರಾರು ರೈತರು  ಬೆಳೆ ವಿಮೆ  ಯೋಜನೆ ಲಾಭ ಪಡೆದಿಲ್ಲದಿರುವುದು ಸಮಿತಿ ಸಭೆಯಿಂದ ಗೊತ್ತಾಗಿದೆ.

ಬಹುತೇಕ ಬ್ಯಾಂಕ್‌ಗಳ ಶಾಖೆಗಳಿಗೆ ಬೆಳೆ ವಿಮೆಯ ಕಟ್‌ ಆಫ್‌ ದಿನಾಂಕವೂ ಗೊತ್ತಿಲ್ಲದ  ಕಾರಣ ರೈತರು ಬೆಳೆ ವಿಮಾ ಹಣವನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಂಡು ಬಂದಿರುವ ಇಂತಹ ಹಲವು ಪ್ರಕರಣಗಳು ಬ್ಯಾಂಕ್‌ಗಳ ಗಮನಕ್ಕೆ ಬಂದಿದೆಯಾದರೂ ಸಕಾಲದಲ್ಲಿ ರೈತರ ಖಾತೆಗೆ ಜಮೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿವೆ.

ತುಮಕೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಯಥೇಚ್ಛವಾಗಿ ಕಂಡು ಬಂದಿದೆ.ಈ ಎರಡೂ ಜಿಲ್ಲೆಗಳಲ್ಲಿನ ಬ್ಯಾಂಕ್‌ಗಳು ಎಸಗಿರುವ  ತಪ್ಪಿನಿಂದಾಗಿ ಅಂದಾಜು 14,000 ರೈತರು ಬೆಳೆ  ವಿಮೆ  ಹಣವನ್ನು ಪಡೆಯಲು ಸಾಧ್ಯವಾಗಿಲ್ಲ ಎಂಬ ಅಂಶ  ಸಮಿತಿ ಸಭೆ ನಡವಳಿಯಿಂದ ತಿಳಿದು ಬಂದಿದೆ. 

ಬೆಳೆ ವಿಮೆ  ಯೋಜನೆ  ಅನುಷ್ಠಾನ ಸಲುವಾಗಿ ಪ್ರತಿ ವರ್ಷ ಕೇಂದ್ರ ಸರ್ಕಾರದ ಪಟ್ಟಿಯಲ್ಲಿರುವ ವಿಮಾಸಂಸ್ಥೆಗಳಿಗೆ ಸಂಬಂಧಪಟ್ಟ ಜಿಲ್ಲೆಗಳನ್ನು ನಿಗದಿಪಡಿಸಿದೆ. ಆಯಾ ಜಿಲ್ಲೆಗಳ ವಿಮೆ ಹೊಂದಿದ  ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ  ನೇರವಾಗಿ  ವಿತರಿಸಲಾಗುತ್ತದೆ.

ಬ್ಯಾಂಕಿಂಗ್‌  ವ್ಯವಸ್ಥೆಯು ಆನ್‌ಲೈನ್‌ ಆಗಿರುವ  ಕಾರಣ  ಅರ್ಹ  ರೈತರಿಗೆ ವಿಮಾ ಪರಿಹಾರ ಮೊತ್ತವು ವಿಮಾ ಸಂಸ್ಥೆಯಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾದ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತದೆ. ಹೀಗಾಗಿ  ಬೆಳೆ ವಿಮೆ ಪರಿಹಾರ ವಿತರಣೆ  ಕೇಂದ್ರಗಳನ್ನು ಪ್ರತ್ಯೇಕವಾಗಿ ತೆರೆದಿಲ್ಲ  ಎಂದು  ಸರ್ಕಾರ  ಹೇಳುತ್ತಿದೆ. 

ಹಾವೇರಿ ಜಿಲ್ಲೆಯಲ್ಲಿ 2018-19ನೇ ಸಾಲಿಗೆ ಸಂಬಂಧಿಸಿದಂತೆ  ಮುಂಗಾರು ಹಂಗಾಮಿನಲ್ಲಿ ಬೆಳೆ  ಸಮೀಕ್ಷೆಯ ದತ್ತಾಂಶವನ್ನು ಪರಿಗಣಿಸಿ ಬೆಳೆ  ವಿಮೆ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗಿದೆ.  ವಿಮಾ  ಸಂಸ್ಥೆಯು ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು  ಬೆಳೆ ವಿಮೆ  ಅರ್ಜಿಗಳೊಂದಿಗೆ ಪರಿಶೀಲಿಸಿ  ವಿಮಾ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುತ್ತಿದ್ದಾರಾದರೂ ಅರ್ಹ ರೈತರಿಗೆ ವಿಮಾ ಪರಿಹಾರ ಮೊತ್ತ  ಅವರ  ಖಾತೆಗೆ ಜಮೆ ಆಗುತ್ತಿಲ್ಲ ಎಂದು  ತಿಳಿದು ಬಂದಿದೆ. 

ಸರ್ಕಾರದ ಬೆಳೆ  ವಿಮೆ ಪರಿಹಾರವನ್ನು ನಿಗದಿತ ಸಮಯದಲ್ಲಿ  ಫಲಾನುಭವಿಗಳಿಗೆ ಪಾವತಿ ಮಾಡದಿದ್ದರೆ ಶೇ.12ರಷ್ಟು ಬಡ್ಡಿ ಮೊತ್ತವನ್ನು ನೀಡಬೇಕು. ಆದರೆ ಇದುವರೆಗೂ  ಈ ಸಂಬಂಧ ಮಾರ್ಗಸೂಚಿ ಪರಿಷ್ಕರಣೆಗೊಂಡಿಲ್ಲ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img