Monday | September 14, 2026 |

ಲಾಕ್‌ಡೌನ್‌ ಅವಧಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಏರಿಕೆಯಾಗಿಲ್ಲ ತಪಾಸಣೆ ಸಂಖ್ಯೆ

Support THE-FILE

spot_img

ಬೆಂಗಳೂರು; ಕೊರೊನಾ ವೈರಸ್‌ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾಗಿ 21 ದಿನಗಳು  ಕಳೆದಿದ್ದರೂ ಸೋಂಕಿತರ ಸಂಖ್ಯೆ  ಕಡಿಮೆಗೊಳ್ಳುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  

ಕೋವಿಡ್‌ 19 ಸಮುದಾಯಕ್ಕೆ ಹರಡುವುದಕ್ಕೆ ಈಗಿನಿಂದಲೇ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಸುತ್ತಿರುವ ತಪಾಸಣೆಗಳ ಸಂಖ್ಯೆ ಇನ್ನೂ ಇಮ್ಮಡಿಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್‌(ಐಸಿಎಂಆರ್‌) ಬೆಳಗ್ಗೆ 9ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಏಪ್ರಿಲ್‌ 12ರ ಅಂತ್ಯಕ್ಕೆ ಒಟ್ಟು 1,81,028 ವ್ಯಕ್ತಿಗಳಿಂದ 1,95,748 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಈವರೆವಿಗೆ ದೇಶದಲ್ಲಿ  ಒಟ್ಟು 8,312 ಪ್ರಕರಣಗಳು ದೃಢಪಟ್ಟಿದ್ದರೆ  308 ಮಂದಿ ಕೋವಿಡ್‌ 19ಗೆ ಬಲಿಯಾಗಿದ್ದಾರೆ. 

ಏಪ್ರಿಲ್‌ 12ರಂದೇ  ಒಟ್ಟು  15,583 ಸಂಖ್ಯೆಯಲ್ಲಿ ತಪಾಸಣೆ ನಡೆಸಲಾಗಿದೆ. ಇದರಲ್ಲಿ 544 ಪ್ರಕರಣಗಳು ದೃಢಪಟ್ಟಿವೆ. ಕರ್ನಾಟಕದಲ್ಲಿ 9,251 ಮಾದರಿಗಳನ್ನು ಸಂಗ್ರಹಿಸಿದ್ದರೆ,  ಈ ಪೈಕಿ 232 ಪ್ರಕರಣಗಳು ದೃಢಪಟ್ಟಿವೆ. 6 ಮಂದಿ ಮೃತಪಟ್ಟಿದ್ದಾರೆ. 54 ಮಂದಿ ಚೇತರಿಸಿಕೊಂಡಿದ್ದಾರೆ. 

ಆಂಧ್ರ ಪ್ರದೇಶದಲ್ಲಿ 7,889 ಮಾದರಿಗಳನ್ನು ಸಂಗ್ರಹಿಸಿದ್ದರೆ, ಈವರೆವಿಗೆ 420 ಪ್ರಕರಣಗಳು ದೃಢಪಟ್ಟಿವೆ.  7 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಚೇತರಿಸಿಕೊಂಡಿದ್ದಾರೆ. 

ಕೇರಳದಲ್ಲಿ 14,989 ಮಾದರಿಗಳನ್ನು ಈವರೆವಿಗೆ  ಸಂಗ್ರಹಿಸಿದ್ದರೆ, ಈ ಪೈಕಿ 376 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.  3  ಮಂದಿ ಮೃತಪಟ್ಟಿದ್ದಾರೆ. 179 ಮಂದಿ  ಚೇತರಿಸಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಒಟ್ಟು 10,665 ಮಾದರಿಗಳನ್ನು ಸಂಗ್ರಹಿಸಿದ್ದರೆ ಇದರಲ್ಲಿ  1,075 ಮಂದಿಯಲ್ಲಿ ಸೋಂಕು  ಖಚಿತಪಟ್ಟಿವೆ.  11  ಮಂದಿ ಮರಣ ಹೊಂದಿದ್ದರೆ 50 ಮಂದಿ ಚೇತರಿಸಿಕೊಂಡಿದ್ದಾರೆ. 

ಆದರೆ ತೆಲಂಗಾಣ ಎಷ್ಟು ಸಂಖ್ಯೆಯಲ್ಲಿ  ಮಾದರಿಗಳನ್ನು ಸಂಗ್ರಹಿಸಿದೆ ಎಂದು ಐಸಿಎಂಆರ್‌ಗೆ ಮಾಹಿತಿ ಒದಗಿಸಿಲ್ಲ. ಇಲ್ಲಿ ಒಟ್ಟು 531 ಪ್ರಕರಣಗಳು  ಖಚಿತಪಟ್ಟಿವೆ. 16 ಮಂದಿ ಮೃತಪಟ್ಟಿದ್ದರೆ,  103 ಮಂದಿ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆವಿಗೆ 41,109 ಮಾದರಿಗಳನ್ನು ಸಂಗ್ರಹಿಸಿದೆ. ಒಟ್ಟು 1,985  ಖಚಿತಪಟ್ಟ ಪ್ರಕರಣಗಳಾಗಿವೆ.  149 ಮಂದಿ ಕೋವಿಡ್‌  19 ಕ್ಕೆ ಬಲಿಯಾಗಿದ್ದರೆ 217 ಮಂದಿ ಚೇತರಿಸಿಕೊಂಡಿರುವುದು ಐಸಿಎಂಆರ್‌ ಬಿಡುಗಡೆಗೊಳಿಸಿರುವ ಮಾಹಿತಿಯಿಂದ ಗೊತ್ತಾಗಿದೆ. ದೆಹಲಿಯಲ್ಲಿ 1,154 ,ತಮಿಳುನಾಡಿನಲ್ಲಿ 1,075, ರಾಜಸ್ಥಾನದಲ್ಲಿ 804, ಮಧ್ಯ ಪ್ರದೇಶದಲ್ಲಿ 532 ಮತ್ತು ಗುಜರಾತ್‌ನಲ್ಲಿ 516 ಪ್ರಕರಣಗಳು ವರದಿಯಾಗಿವೆ. 

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img