Monday | September 14, 2026 |

ಕೆಎಸ್‌ಆರ್‌ಪಿಯಲ್ಲಿ 1.25 ಕೋಟಿ ರು.ದುರುಪಯೋಗ; ವಿಶೇಷ ಲೆಕ್ಕ ಪರಿಶೋಧನೆಯಿಂದ ಸಾಬೀತು

Support THE-FILE

spot_img

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪೇದೆಗಳ ವೇತನ ಮತ್ತು ಭತ್ಯೆಗೆಂದು ಹಂಚಿಕೆಯಾಗಿದ್ದ ಕೋಟಿ ರು.ಅಧಿಕ ಮೊತ್ತ ದುರುಪಯೋಗ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಕೆಎಸ್‌ಆರ್‌ಪಿಯ ಹಾಸನದ 11ನೇ ಪಡೆಯಲ್ಲಿ ಹಣ ದುರುಪಯೋಗವಾಗಿರುವುದನ್ನು ವಿಶೇಷ ಲೆಕ್ಕ ಪರಿಶೋಧನೆ ವರದಿ ದೃಢಪಡಿಸಿದೆ.

ಈ ವರದಿ ಆಧರಿಸಿ ಕೆಎಸ್‌ಆರ್‌ಪಿ ಎಡಿಜಿಪಿ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಸುಮಾ ಜೆ ಆರ್‌ ಅವರು ಹಾಸನದ ಶಾಂತಿಗ್ರಾಮ ಪೊಲೀಸ್‌ ಠಾಣೆಯಲ್ಲಿ 2020ರ ಮೇ 21ರಂದು ದೂರು ದಾಖಲಿಸಿದ್ದಾರೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.
ಹಾಸನದ 11ನೇ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಮಾಡೆಂಟ್‌ ಕೃಷ್ಫಪ್ಪ, ನಿವೃತ್ತ ಸಹಾಯಕ ಆಡಳಿತಾಧಿಕಾರಿ ಮಾದೇಗೌಡ, ದ್ವಿತೀಯ ದರ್ಜೆ ಸಹಾಯಕ ವೈ ಕೆ ಯೋಗೇಶ, ಲತಾಮಣಿ, ವೈಎಚ್‌ ಮನು, ಸತ್ಯಪ್ರಕಾಶ್‌ ಅವರ ವಿರುದ್ಧ ಐಪಿಸಿ 403, 406,409, 465, 468 ಅನ್ವಯ ಮೊಕದ್ದಮೆ ದಾಖಲಾಗಿರುವುದು ತಿಳಿದು ಬಂದಿದೆ.

ಪ್ರಕರಣ ವಿವರ

ಕೆಎಸ್‌ಆರ್‌ಪಿಯ ಹಾಸನದ 11ನೇ ಘಟಕದ ವೇತನ ಶಾಖೆಯಲ್ಲಿ 2015ರ ಜನವರಿ 1ರಿಂದ 2016ರವರೆಗಿನ ಅವಧಿಯಲ್ಲಿ ಕಮಾಡೆಂಟ್‌, ವಿಷಯ ನಿರ್ವಾಹಕರು ಸೇರಿದಂತೆ ಆಡಳಿತ ಕಚೇರಿಯ ಸಿಬ್ಬಂದಿ 1.25 ಕೋಟಿ ರು. ಗಳನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿರುವ ಪ್ರಕರಣ ಇದಾಗಿದೆ.

ಈ ಹಣ ಕರ್ನಾಟಕ ರಾಜ್ಯ ಮೀಸಲು ಪಡೆಯ ಪೇದೆ ಮತ್ತು ಸಿಬ್ಬಂದಿಯ ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿತ್ತು ಎಂಬ ವಿಚಾರ ಗೊತ್ತಾಗಿದೆ. ವೇತನ ಮತ್ತು ಭತ್ಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಹಂಚಿಕೆಯಾಗಿದ್ದ ಅನುದಾನ ಬಳಕೆ ಕುರಿತು 2020ರ ಮಾರ್ಚ್‌ 2ರಿಂದ 31ರವರೆಗೆ ವಿಶೇಷ ಲೆಕ್ಕ ಪರಿಶೋಧನೆ ನಡೆಸಲಾಗಿತ್ತು.

ವೇತನ ಮತ್ತು ಭತ್ಯೆ ನಿಧಿಗೆ ಕನ್ನ ಹಾಕಿದ್ದ ಕಮಾಡೆಂಟ್‌ ಕೃಷ್ಣಪ್ಪ ಸೇರಿದಂತೆ ಇನ್ನಿತರೆ ಸಿಬ್ಬಂದಿ ಕೈ ಚಳಕ ವಿಶೇಷ ಲೆಕ್ಕಪರಿಶೋಧಕರ ತನಿಖೆಯಿಂದ ಬೆಳಕಿಗೆ ಬಂದಿತ್ತು. ಗಣಕ ಯಂತ್ರಗಳ ನಿರ್ವಾಹಕ (ಸಿಸ್ಟಂ ಅನಾಲಿಸ್ಟ್‌) ವೈ ಎಚ್‌ ಮನು ಎಂಬುವರ ಕೈ ಚಳಕವನ್ನೂ ವಿಶೇಷ ಲೆಕ್ಕಪರಿಶೋಧಕರು ಬಹಿರಂಗಗೊಳಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img