Monday | June 15, 2026 |

ಜೂನ್‌ ಅಂತ್ಯಕ್ಕೆ ಕೋವಿಡ್‌ ಪ್ರಕರಣಗಳ ಸಂಖ್ಯೆ 5,000ಕ್ಕೇರಿಕೆ!; ಮಹಾರಾಷ್ಟ್ರದ್ದೇ ಸಿಂಹಪಾಲು

Support THE-FILE

spot_img

ಬೆಂಗಳೂರು; ಲಾಕ್‌ಡೌನ್‌ ಮಾರ್ಗಸೂಚಿಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೋವಿಡ್‌-19 ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಿನವೊಂದಕ್ಕೆ ಕನಿಷ್ಠ 100 ಪ್ರಕರಣಗಳು ವರದಿಯಾಗುತ್ತಿದೆಯಲ್ಲದೆ, ಇದರ ವೇಗವನ್ನು ಗಮನಿಸಿದರೆ ಜೂನ್ ಅಂತ್ಯಕ್ಕೆ ಇದರ ಸಂಖ್ಯೆ 5,000ಕ್ಕೆ ತಲುಪಿದರೂ ಅಚ್ಚರಿಯೇನಿಲ್ಲ.

‘ದಿ ಫೈಲ್‌’ನೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರ ಪ್ರಕಾರ ಪ್ರಕಣಗಳ ಸಂಖ್ಯೆ ರಾಜ್ಯದಲ್ಲೀಗ ಇಳಿಮುಖವಾಗುತ್ತಿದೆ. ‘ಹೊರರಾಜ್ಯದಿಂದ ಬಂದವರಿಂದಲೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಟ್ಟು ವರದಿಯಾಗಿರುವ ಪ್ರಕರಣಗಳಲ್ಲಿ ರಾಜ್ಯದೊಳಗೆ 1,000 ಪ್ರಕರಣಗಳಿದ್ದರೆ ಇನ್ನುಳಿದ 1,922 ಪ್ರಕರಣಗಳು ಹೊರರಾಜ್ಯದಿಂದ ಬಂದವರಿಂದ ವರದಿಯಾಗಿವೆ,’ ಎನ್ನುತ್ತಾರೆ ಅಧಿಕಾರಿಯೊಬ್ಬರು.

ಕಳೆದ 7 ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿತ್ತು. ಆ ನಂತರ 3 ವಾರ ಇಳಿಕೆ ಆಗಿತ್ತು. ಮೇ ಅಂತ್ಯಕ್ಕೆ ಇಳಿಮುಖವಾಗಬೇಕಿತ್ತಾದರೂ ಇನ್ನೂ ಏರಿಕೆಯಲ್ಲೇ ಇದೆ. ಇಳಿಮುಖವಾಗಲು ಕನಿಷ್ಠ 5 ವಾರವಾದರೂ ಬೇಕು. ಜೂನ್‌ ತಿಂಗಳ ಅಂತ್ಯಕ್ಕೆ 5,000ಕ್ಕೇರುವ ಅಂದಾಜಿದೆ ಇದೆಯಾದರೂ ವಲಸಿಗರು ಆಗಮನ ಸದ್ಯಕ್ಕೆ ನಿಂತಿರುವ ಕಾರಣ ಜೂನ್‌ನಲ್ಲಿ ಇದೇ ಸಂಖ್ಯೆಯಲ್ಲೇ ತಟಸ್ಥವಾಗಲಿದೆ ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ.

ರಾಜ್ಯದಲ್ಲಿ ವರದಿಯಾಗಿರುವ ಒಟ್ಟು ಸಂಖ್ಯೆಯಲ್ಲಿ ಮಹಾರಾಷ್ಟ್ರ ಪ್ರಯಾಣ ಹಿನ್ನಲೆ ಹೊಂದಿದವರಿಂದ 1,700 ಪ್ರಕರಣಗಳು ವರದಿಯಾಗಿವೆ. ಇನ್ನೇನಿದ್ದರೂ ಪ್ರಾಥಮಿಕ ಸಂಪರ್ಕಕ್ಕಿಂತಲೂ ದ್ವಿತೀಯ ಸಂಪರ್ಕ ಹೆಚ್ಚಾಗಲಿವೆ. ಇದು ಕೂಡ ಆತಂಕಕಾರಿ ವಿಚಾರ ಎನ್ನುತ್ತಾರೆ ಅಧಿಕಾರಿಗಳು.

ಮೇ 30ರ ಅಂತ್ಯಕ್ಕೆ 2,922 ಪ್ರಕರಣಗಳು ವರದಿಯಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ. 50ರಷ್ಟು ಸೋಂಕಿತರು ಮಹಾರಾಷ್ಟ್ರದ ಪ್ರಯಾಣ ಹಿನ್ನಲೆ ಹೊಂದಿದ್ದಾರೆ. ಮುಂಬೈ ಪ್ರಯಾಣ ಹಿನ್ನಲೆ ಹೊಂದಿದ್ದ ಪ್ರಕರಣ ಆರಂಭದಲ್ಲಿ ಮಂಡ್ಯದಲ್ಲಿ ಮಾತ್ರ ಕಾಣಿಸಿಕೊಂಡಿತ್ತು. ಆದರೀಗ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕದ ಪ್ರದೇಶಗಳಲ್ಲಿಯೂ ಅದರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮೇ 29ರ ಅಂತ್ಯಕ್ಕೆ ವರದಿಯಾದ ಒಟ್ಟು 2,781ರ ಪೈಕಿ 1,348 ಸಂಖ್ಯೆಯ ಸೋಂಕಿತರಿಗೆ ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆ ಇದೆ. ಶುಕ್ರವಾರ ಒಟ್ಟು 248 ಮತ್ತು ಶನಿವಾರದ 141 ಒಟ್ಟು ಪ್ರಕರಣಗಳು ವರದಿಯಾಗಿವೆ. ಶನಿವಾರ ದೃಢಪಟ್ಟ 141 ಪ್ರಕರಣಗಳ ಪೈಕಿ 83 ಪ್ರಕರಣಗಳಿಗೆ ಮಹಾರಾಷ್ಟ್ರದ ಪ್ರಯಾಣ ಹಿನ್ನೆಲೆ ಇದೆ. ಇವರೊಂದಿಗಿನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವವರ ಸಂಖ್ಯೆ 815ರಷ್ಟಿದೆ. ಗುಜರಾತ್‌ನಿಂದ ಬಂದವರ ಪೈಕಿ 58, ದೆಹಲಿ 59 ಮತ್ತು ತಮಿಳುನಾಡಿನಿಂದ ಬಂದವರ ಪೈಕಿ 55 ಮಂದಿಗೆ ಸೋಂಕು ದೃಢಪಟ್ಟಿದೆ.

ಸೋಂಕು ನಿಧಾನವಾಗಿ ರಾಜ್ಯದಲ್ಲಿ ಹರಡುತ್ತಿದೆಯಲ್ಲದೆ ಕಳೆದ 15 ದಿನದಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಅದರಲ್ಲೂ ಕಳೆದ 2 ತಿಂಗಳಲ್ಲಿ (ಮಾರ್ಚ್‌ 9 ರಿಂದ ಮೇ 15) 1,000 ಪ್ರಕರಣಗಳು ವರದಿಯಾಗಿವೆ. ಮೇ 15ರ ನಂತರ ಅಂದರೆ ಕೇವಲ ಎರಡೇ ಎರಡು ವಾರದಲ್ಲಿ 1,781 ಪ್ರಕರಣಗಳು ವರದಿಯಾಗಿರುವುದು ಆತಂಕವನ್ನು ಹೆಚ್ಚಿಸಿದೆ.

ಮಂಡ್ಯದಲ್ಲಿ 224, ಯಾದಗಿರಿಯಲ್ಲಿ 207, ಕಲ್ಬುರ್ಗಿಯಲ್ಲಿ 159, ಉಡುಪಿಯಲ್ಲಿ 158 ಪ್ರಕರಣಗಳು ಸಕ್ರಿಯವಾಗಿವೆ. ಇದು ಬೆಂಗಳೂರು ನಗರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿವೆ. ಇದಾದ ನಂತರ ರಾಯಚೂರು (132), ಚಿಕ್ಕಬಳ್ಳಾಪುರ (114) ಮತ್ತು ಹಾಸನದಲ್ಲಿ (114) ಪ್ರಕರಣಗಳು ಸಕ್ರಿಯವಾಗಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img