Monday | June 15, 2026 |

ಕೋವಿಡ್‌-19; ಸಚಿವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಪ್ರಕರಣಗಳ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ?

Support THE-FILE

spot_img

ಬೆಂಗಳೂರು; ಯಾರ ಜಫ್ತಿಗೂ ಸಿಗದಂತೆ ನಾಗಾಲೋಟದಂತೆ ಓಡುತ್ತಿರುವ ಕೋವಿಡ್‌-19 ಸೋಂಕಿತರ ಪ್ರಕರಣಗಳ ಸಂಖ್ಯೆಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಅನುಮಾನಗಳನ್ನು ಬಲಪಡಿಸುವುತ್ತ ಒಂದಷ್ಟು ಪುರಾವೆ ಲಭ್ಯವಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಮತ್ತು ಆರೋಗ್ಯ ಇಲಾಖೆ ಬಿಡುಗಡೆಗೊಳಿಸುವ ಪ್ರಕಟಣೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವುದು ಇದೀಗ ಬಹಿರಂಗವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಟ್ಟು 104 ಪ್ರಕರಣಗಳು ಕೋವಿಡ್‌-19 ಸೋಂಕಿತ ಪ್ರಕರಣಗಳು ಖಚಿತಪಟ್ಟಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದರು. ಆದರೆ ರಾತ್ರಿ 8-30ರ ಸುಮಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೇವಲ 99 ಪ್ರಕರಣಗಳು ಖಚಿತಪಟ್ಟಿವೆ ಎಂದು ತಿಳಿಸಿದೆ.

ಜಿಲ್ಲೆಗಳಿಂದ ಅಂಕಿ ಸಂಖ್ಯೆಗಳನ್ನು ಕ್ರೋಢೀಕರಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂತಿಮವಾಗಿ ಪ್ರಕರಣಗಳ ಒಟ್ಟು ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂಬ ಆರೋಪಕ್ಕೆ ಬಳ್ಳಾರಿ ಜಿಲ್ಲೆಯ ಅಂಕಿ ಸಂಖ್ಯೆಗಳೇ ಪುರಾವೆ ಒದಗಿಸಿದಂತಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಾರ ಇಲ್ಲಿಯವರೆಗೆ ಒಟ್ಟು 3,90,240 ತಪಾಸಣೆಗೊಳಪಡಿಸಲಾಗಿದೆ. ಇಂದು 586 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,272 ಪ್ರಕರಣಗಳು ಖಚಿತಪಟ್ಟಿವೆ. ಹೊಸಪೇಟೆ, ಸಂಡೂರು, ಕೂಡ್ಲಿಗಿ,ಬಳ್ಳಾರಿ, ಹರಪನಹಳ್ಳಿಯಲ್ಲಿ ಖಚಿತ ಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಈ ಪೈಕಿ ಬಳ್ಳಾರಿಯ 4 ಮಂದಿ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಸೋಂಕಿರುವುದು ಖಚಿತಪಟ್ಟಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img