Monday | June 15, 2026 |

ಮಾಸ್ಕ್‌ ಖರೀದಿ; ವಿಧಾನಪರಿಷತ್‌ ಸಚಿವಾಲಯದ ಉನ್ನತ ಅಧಿಕಾರಿಗೆ ಖಾಸಗಿ ಆಸ್ಪತ್ರೆ ನಂಟು?

Support THE-FILE

spot_img

ಬೆಂಗಳೂರು; ಏಪ್ರಿಲ್‌ನಲ್ಲಿ ಮಾಸ್ಕ್‌ ಖರೀದಿಗೆ ಮುಂದಾಗಿದ್ದ ವಿಧಾನಪರಿಷತ್‌ ಸಚಿವಾಲಯದ ಬಳಿ ಹಣವೇ ಇರಲಿಲ್ಲ!. ಹೀಗಾಗಿ ಕ್ರೆಡಿಟ್‌ ಆಧಾರದ ಮೇಲೆ ಮಾಸ್ಕ್‌ ಸರಬರಾಜು ಮಾಡಲು ಹಲವು ಕಂಪನಿಗಳಿಗೆ ಮೊರೆ ಇಟ್ಟಿತ್ತು.

ಆದರೆ ಕ್ರೆಡಿಟ್‌ ಆಧಾರದ ಮೇಲೆ ಯಾವ ಕಂಪನಿಯೂ ಮಾಸ್ಕ್‌ಗಳನ್ನು ಸರಬರಾಜು ಮಾಡಲು ಮುಂದೆ ಬಂದಿರಲಿಲ್ಲ. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಿಂದ 500 ಸಂಖ್ಯೆಯ ಕೆ ಎನ್‌ 95 ಮಾಸ್ಕ್‌ಗಳನ್ನು ಕ್ರೆಡಿಟ್‌ ಆಧಾರದ ಮೇರೆಗೆ ಖರೀದಿಸಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

ಏಪ್ರಿಲ್‌ನಲ್ಲಿ ಮಾಸ್ಕ್‌ಗಳನ್ನು ಸರಬರಾಜು ಮಾಡಿದ್ದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಣ ಮಂಜೂರು ಮಾಡಿದ ಆದೇಶ ಹೊರಬೀಳುತ್ತಿದ್ದಂತೆ ವಿಧಾನಪರಿಷತ್‌ ಸಚಿವಾಲಯದ ಸಮರ್ಥನೆಯೂ ಈಗ ಚರ್ಚೆಗೊಳಗಾಗಿದೆ.

ಔಷಧಾಲಯ ಮತ್ತು ಔಷಧ ಮಳಿಗೆಗಳಲ್ಲೂ ಮಾಸ್ಕ್‌ ನಿಯಮಿತವಾಗಿ ದೊರೆಯದ ಕಾರಣ ವಿಧಾನಪರಿಷತ್‌ ಸಚಿವಾಲಯ, ಮಾರುಕಟ್ಟೆಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಖರೀದಿಸಿರುವುದನ್ನು ವಿಧಾನಪರಿಷತ್‌ ಸಚಿವಾಲಯ ಸಮರ್ಥಿಸಿಕೊಂಡಿದೆ.

ವಿಧಾನಪರಿಷತ್‌ ಸಚಿವಾಲಯಕ್ಕೆ ಮಲ್ಲೇಶ್ವರಂನಲ್ಲಿರುವ ಪ್ರಾಣ ಹೆಲ್ತ್‌ ಸಿಸ್ಟಂ ಸರಬರಾಜು ಮಾಡಿದ್ದ ಮಾಸ್ಕ್‌ಗಳ ಗುಣಮಟ್ಟದ ಬಗ್ಗೆ ಸಮಾಧಾನಕರವಾಗದ ಕಾರಣ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರಿಗೆ ಪರಿಚಿತರು ಎನ್ನಲಾಗಿರುವ ಡಾ ಅರುಣ್‌ ಕುದುವ ಅವರ ಮೂಲಕ ಮಂಗಳೂರಿನ ಅನಂತ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಿಂದ ಮಾಸ್ಕ್‌ಗಳನ್ನು ಖರೀದಿಸಿತ್ತು ಎಂಬುದು ಗೊತ್ತಾಗಿದೆ.

ಕೋವಿಡ್‌ ಸೋಂಕು ಇದೀಗ ವಿಧಾನಸೌಧಕ್ಕೂ ಹಬ್ಬಿದ್ದರೂ ವಿಧಾನಸೌಧದ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ವಿಧಾನಸಭೆ ಮತ್ತು ವಿಧಾನಪರಿಷತ್‌ ಸಚಿವಾಲಯದ ಅಧಿಕಾರಿ, ನೌಕರರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಚಿತವಾಗಿ ಈವರೆವಿಗೂ ಮಾಸ್ಕ್‌, ಸ್ಯಾನಿಟೈಸರ್‌ ವಿತರಿಸಿಲ್ಲ ಎಂಬುದು ತಿಳಿದು ಬಂದಿದೆ.

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯ ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ದುಪ್ಪಟ್ಟು ದರ ತೆತ್ತು ಕೆಎನ್‌ 95 ಮಾಸ್ಕ್‌ಗಳನ್ನು ಖರೀದಿ ಮಾಡಿದ್ದು ವಿವಾದಕ್ಕೆಡೆ ಮಾಡಿಕೊಟ್ಟಿತ್ತು. ಚೀನಾ ತಯಾರಿಸಿರುವ ಕೆಎನ್‌ 95 ಮಾಸ್ಕ್‌ಗಳನ್ನು ದುಪ್ಪಟ್ಟು ದರದಲ್ಲಿ ಖರೀದಿಸಿರುವುದರ ಹಿಂದೆ ಕಮಿಷನ್‌ ವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎ,ಬಿ, ಸಿ ಮತ್ತು ಡಿ ಗುಂಪಿನ ಅಧಿಕಾರಿ, ನೌಕರ ವರ್ಗದವರ ಬಳಕೆಗಾಗಿ ಮಾಸ್ಕ್‌ವೊಂದಕ್ಕೆ ಅಂದಾಜು 200 ರು. ದರದಲ್ಲಿ ಒಟ್ಟು 500 ಮಾಸ್ಕ್‌ಗಳಿಗೆ 1,05,000 ರು.ಗಳನ್ನು ಪಾವತಿಸಲು 2020ರ ಮೇ 13ರಂದು ಆಡಳಿತಾತ್ಮಕ ಮಂಜೂರಾತಿ ನೀಡಿತ್ತು. ಇದಕ್ಕೆ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಅನುಮೋದಿಸಿದ್ದರು.

ಮಾರುಕಟ್ಟೆಯಲ್ಲಿ 40 ರು.ನಿಂದ 120 ರು.ವರೆಗೆ ಕೆಎನ್‌ 95 ಮಾಸ್ಕ್‌ಗಳು ದೊರೆಯುತ್ತವೆ. ಇದೇ ಮಾಸ್ಕ್‌ಗೆ ಇಂಡಿಯಾ ಮಾರ್ಟ್‌ನಲ್ಲಿ 100 ರು., ಟ್ರೇಡ್‌ ಇಂಡಿಯಾದಲ್ಲಿ 120 ರು. ದರವಿದೆ. ಸಗಟು ರೂಪದಲ್ಲಿ ಒಂದು ಕೆಎನ್‌ 95 ಮಾಸ್ಕ್‌ಗೆ 20-25 ರು. ದರದಲ್ಲಿ ಖರೀದಿಸಲು ಸಾಧ್ಯವಿದ್ದರೂ ದುಪ್ಪಟ್ಟು ದರದಲ್ಲಿ ಖರೀದಿಸಿದ್ದರ ಹಿಂದೆ ಅವ್ಯವಹಾರ ನಡೆದಿದೆ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು.

ಚೀನಾವು ದೇಣಿಗೆ ರೂಪದಲ್ಲಿ ಮಿಲಿಯನ್‌ ಪ್ರಮಾಣದಲ್ಲಿ ನೀಡಿದ್ದ ಕೆಎನ್‌ 95 ಮಾಸ್ಕ್‌ಗಳನ್ನು ಅಮೇರಿಕದ ಆಹಾರ ಮತ್ತು ಔಷಧ ಆಡಳಿತ ವಿಭಾಗ ನಿಷೇಧಿಸಿತ್ತು ಎಂದು ನ್ಯೂಯಾರ್ಕ್‌ ಟೈಮ್ಸ್‌ ಮೇ 13ರಂದು ವರದಿ ಮಾಡಿದ್ದನ್ನು ಸ್ಮರಿಸಬಹುದು.
ಹಾಗೆಯೇ ಕೆಎನ್‌ 95 ಮಾಸ್ಕ್‌ಗಳು ಪ್ರಯೋಗಾಲಯದಲ್ಲಿ ನಿಗದಿಪಡಿಸಿದ್ದ ಮಾನದಂಡಗಳ ಪ್ರಕಾರ ಇರಲಿಲ್ಲ. ಅಲ್ಲಿನ ದಂತ ವೈದ್ಯರು ಕೂಡ ಈ ಮಾಸ್ಕ್‌ಗಳನ್ನು ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂಬುದು ನ್ಯೂಯಾರ್ಕ್‌ ಟೈಮ್ಸ್‌ ವರದಿಯಿಂದ ತಿಳಿದು ಬಂದಿತ್ತು. ಈ ಕುರಿತು ‘ದಿ ಫೈಲ್‌’ ವರದಿ ಮಾಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img