Sunday | September 13, 2026 |

ಸಾಫ್ಟ್‌ವೇರ್‌, ಕೃಷಿ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿ; ವರದಿ ಸಲ್ಲಿಸಲು ಲೋಕಾಯುಕ್ತರ ಸೂಚನೆ

Support THE-FILE

spot_img

ಬೆಂಗಳೂರು; ಸಾಫ್ಟ್‌ವೇರ್‌ ಕಂಪನಿ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿಸಿದ್ದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಸಲ್ಲಿಸಿದ್ದ ದೂರಿನನ್ವಯ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ಸೂಚಿಸಿದೆ.

ದೂರಿನ ವಿಚಾರಣೆ ನಡೆಸುತ್ತಿರುವ ವಿಚಾರಣಾಧಿಕಾರಿ 2020ರ ಆಗಸ್ಟ್‌ 24ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಸ್ವರೂಪದ ಅಕ್ರಮ ಪ್ರಕರಣಗಳ ಕುರಿತು ಸರಣಿ ದೂರು ಸಲ್ಲಿಸುತ್ತಿರುವ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು 2020ರ ಆಗಸ್ಟ್‌ 8ರಂದು ಹೆಚ್ಚುವರಿ ದಾಖಲೆಗಳನ್ನು ಲೋಕಾಯುಕ್ತಕ್ಕೆ ಒದಗಿಸಿರುವುದು ತಿಳಿದು ಬಂದಿದೆ.

ಇದಕ್ಕೂ ಮೊದಲು ಜುಲೈ 8ರಂದು ದೂರಿನಲ್ಲಿ ಸಲ್ಲಿಸಿದ್ದ ದಾಖಲೆಗಳನ್ನು ವಿಚಾರಣಾಧಿಕಾರಿಗಳು ಪ್ರಾಥಮಿಕ ಪರಿಶೀಲನೆಯನ್ನು ಪೂರ್ಣಗೊಳಿಸಿರುವುದು ಗೊತ್ತಾಗಿದೆ.

ಪಿಪಿಇ ಕಿಟ್‌ ಖರೀದಿಗೆ ಸಂಬಂಧಿಸಿದಂತೆ ತಜ್ಞರ ಅಭಿಪ್ರಾಯ ಪಡೆದಿಲ್ಲ ಮತ್ತು ಉನ್ನತ ಮಟ್ಟದ ಸಭೆ ನಡೆಸಿಲ್ಲ. ಕಿಟ್‌ಗಳನ್ನು ತಯಾರಿಸುವ ಸಾಮರ್ಥ್ಯ ಇರುವ ಬಗ್ಗೆ ಮತ್ತು ತಯಾರಿಕೆ ಕಂಪನಿಗೆ ನೀಡಿರುವ ತಯಾರಿಕೆ ಪರವಾನಿಗೆಯನ್ನು ಪರಿಶೀಲಿಸದೇ ಅಧಿಕಾರಿಗಳು ಕಳಪೆ ಕಿಟ್‌ಗಳನ್ನು ಖರೀದಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ದೂರಿನಲ್ಲಿಯೂ ಕೆಎಸ್‌ಡಿಡಬ್ಲ್ಯೂಎಸ್‌ನ ಮುಖ್ಯ ಪರಿವೀಕ್ಷಕ ಡಾ ಮಹೇಶ್‌ಕುಮಾರ್‌, ಆಹಾರ ಸುರಕ್ಷತೆ ನಿರ್ದೇಶನಾಲಯದ ಡಾ ಲತಾ ಪರಿಮಳ, ಡಾ ಪ್ರಿಯಲತಾ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.ಸಾಫ್ಟ್‌ವೇರ್‌ ಕಂಪನಿಯಿಂದ ಕಿಟ್‌ ಖರೀದಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್‌-19ರ ತುರ್ತು ಸಂದರ್ಭದಲ್ಲಿ ಮೂಲತಃ ಸಾಫ್ಟ್‌ವೇರ್‌ ಕಂಪನಿಯಾಗಿರುವ ಎಟೆಕ್‌ ಟ್ರಾನ್‌ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯ ರುದ್ರಾಂಶ್‌ ವಿಗ್‌ ಆಗ್ರೋ ಇಂಡಿಯಾದಿಂದ 2020ರ ಮಾರ್ಚ್‌ 20ರಂದು ಒಟ್ಟು 50,000 ಪಿಪಿಇ ಕಿಟ್‌ಗಳನ್ನು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಖರೀದಿಸಿತ್ತು ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಅದೇ ರೀತಿ ಎಚ್‌ಎಲ್‌ಎಲ್‌ ಲೈಫ್‌ಕೇರ್‌, ಇಂಡಸ್‌ ಬಯೋ ಸೈನ್ಸ್‌, ಡಿಎಚ್‌ಬಿ ಗ್ಲೋಬಲ್‌ ಚೀನಾ, ಬಿಗ್‌ ಫಾರ್ಮಾಸ್ಯುಟಿಕಲ್ಸ್‌ನಿಂದ 133.76 ಕೋಟಿ ರು.ಮೊತ್ತದಲ್ಲಿ ಪಿಪಿಇ ಕಿಟ್‌ಗಳನ್ನು ಖರೀದಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಿಟ್‌ ಸರಬರಾಜಿಗೆ 21.00 ಕೋಟಿ ವೆಚ್ಚ

ಈ ಪೈಕಿ ಚೀನಾದ ಡಿಎಚ್‌ಬಿ ಗ್ಲೋಬಲ್‌ ಮತ್ತು ಬಿಗ್‌ ಫಾರ್ಮಾಸ್ಯುಟಿಕಲ್ಸ್‌ ಹೊರತುಪಡಿಸಿದರೆ ಉಳಿದ 5 ಕಂಪನಿಗಳು ವೈದ್ಯಕೀಯ ಪರಿಕರಗಳನ್ನು ತಯಾರಿಸುವ ಕಂಪನಿಗಳಲ್ಲ. ಡಿಎಚ್‌ಬಿ ಗ್ಲೋಬಲ್‌ ಮತ್ತು ಬಿಗ್‌ ಫಾರ್ಮಾಸ್ಯುಟಿಕಲ್ಸ್‌ ಹೊರತುಪಡಿಸಿ ಉಳಿದ ಕಂಪನಿಗಳು ಸರಬರಾಜು ಮಾಡಿರುವ ಪಿಪಿಇ ಕಿಟ್‌ಗಳು 60-90 ಜಿಎಸ್‌ಎಮ್‌ ಗುಣಮಟ್ಟ ಹೊಂದಿಲ್ಲ. ಚೀನಾ ಮೂಲದಿಂದ ಖರೀದಿಸಿದ ಪಿಪಿಇ ಕಿಟ್‌ಗಳ ಸರಬರಾಜು ಸಂಬಂಧ 21.00 ಕೋಟಿ ರು.ಗಳನ್ನು ಸಾರಿಗೆ ವೆಚ್ಚಕ್ಕಾಗಿ ನೀಡಿದೆ ಎಂದು ವಿವರಿಸಿದ್ದಾರೆ.

ಪ್ಲಾಸ್ಟಿ ಸರ್ಜಿ ಇಂಡಸ್ಟ್ರೀಸ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಖರೀದಿಸಿದ್ದ ಪಿಪಿಇ ಕಿಟ್‌ಗಳು ಉತ್ತಮ ಗುಣಮಟ್ಟದಿಂದ ಕೂಡಿರಲಿಲ್ಲ ಎಂದು ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕರೇ ಆಯುಕ್ತರಿಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದರು. ಅಸಲಿಗೆ ಪಿಪಿಇ ಕಿಟ್‌ ತಯಾರಿಸುವ ತಯಾರಿಕೆಯ ಪರವಾನಿಗೆಯೇ ಈ ಕಂಪನಿಗೆ ಇರಲಿಲ್ಲ ಎಂದು ದಾಖಲೆ ಸಮೇತ ದೂರಿನಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ಸಾಫ್ಟ್‌ವೇರ್ ಕಂಪನಿ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್‌ಗಳನ್ನು ಖರೀದಿಸಿದ್ದನ್ನು ‘ದಿ ಫೈಲ್‌’ ಏಪ್ರಿಲ್‌ 27, 2020ರಂದು ಹೊರಗೆಡವಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img