Monday | June 15, 2026 |

ಕೆಡಿಪಿ; ರಮೇಶ್‌ ಜಾರಕಿಹೊಳಿ ಸೇರಿ 11 ಸಚಿವರ ಅದಕ್ಷತೆ, ಶೂನ್ಯ ಸಂಪಾದನೆ ಬಹಿರಂಗ

Support THE-FILE

spot_img

ಬೆಂಗಳೂರು; ಪ್ರಮುಖ ಖಾತೆ ದೊರೆಯಲಿಲ್ಲ ಮತ್ತು ಸಮರ್ಪಕವಾಗಿ ಅನುದಾನ ಹಂಚಿಕೆ ಆಗುತ್ತಿಲ್ಲ ಎಂಬ ಕಾರಣವವನ್ನು ಮುಂದೊಡ್ಡಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿದವರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ಹೊಂದಿದ್ದರೂ ಆ ಇಲಾಖೆಗಳೇ ‘ಅದಕ್ಷತೆ, ಮೈಗಳ್ಳತನ, ಶೇ.20ಕ್ಕಿಂತಲೂ ಕಡಿಮೆ ಪ್ರಗತಿಯಲ್ಲದೆ ಶೂನ್ಯ ಸಂಪಾದನೆಯನ್ನು ಪ್ರದರ್ಶಿಸಿವೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಮೇಶ್‌ ಜಾರಕಿಹೊಳಿ, ವಿ ಸೋಮಣ್ಣ ಸೇರಿದಂತೆ 11 ಸಚಿವರ ಇಲಾಖೆಗಳು ವಿಶೇಷ ಅಭಿವೃದ್ಧಿ ಯೋಜನೆಯಡಿ ಯೋಜನೆ ಇಲಾಖೆಗೆ ಈವರೆವಿಗೂ ಕ್ರಿಯಾ ಯೋಜನೆಯನ್ನೇ ಸಲ್ಲಿಸಿಲ್ಲ. ಅಲ್ಲದೆ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಗಳಿಗೆ ಸಂಬಂಧಿಸಿದಂತೆ ಬಹುತೇಕ ಇಲಾಖೆಗಳು ಶೂನ್ಯ ಪ್ರಗತಿ ಸಾಧಿಸಿರುವುದು ಇದೀಗ ಬಹಿರಂಗವಾಗಿದೆ.

ಜುಲೈ ಅಂತ್ಯಕ್ಕೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಕುರಿತು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ 2020ರ ಆಗಸ್ಟ್‌ 24ರಂದು ನಡೆಸಿದ್ದ ವಿಡಿಯೋ ಸಂವಾದದಲ್ಲಿ ಇಲಾಖೆ ಮುಖ್ಯಸ್ಥರ ಅದಕ್ಷತೆ ಅನಾವರಣಗೊಂಡಿದೆ. ಸಭೆ ನಡವಳಿಗಳ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯೂ ಸೇರಿದಂತೆ ಬಹುತೇಕ ಇಲಾಖೆಗಳು ಅಲ್ಲದೆ ಆಗಸ್ಟ್‌ ತಿಂಗಳ ಅಂತ್ಯದವರೆಗೂ ಯೋಜನಾ ಇಲಾಖೆಗೆ ಕ್ರಿಯಾ ಯೋಜನೆಯನ್ನೇ ಸಲ್ಲಿಸದ ಹಲವು ಇಲಾಖೆಗಳ ಮುಖ್ಯಸ್ಥರು ಲಾಕ್‌ಡೌನ್‌ ತೆರವಾದರೂ ಮೈಗಳ್ಳತನದಿಂದ ಹೊರಬಂದಿಲ್ಲ.

ಕಳೆದ ಒಂದು ವರ್ಷದಿಂದಲೂ ಯೋಜನೆಗಳ ಅನುಷ್ಠಾನದಲ್ಲಿ ಹಲವು ಇಲಾಖೆಗಳ ಮುಖ್ಯಸ್ಥರು ಮುಗ್ಗುರಿಸಿ ಬೀಳುತ್ತಿದ್ದಾರೆ. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಸಭೆ ನಡೆಯುತ್ತಿದೆಯಾದರೂ ಇಲಾಖೆಗಳ ಮುಖ್ಯಸ್ಥರು ಮಾತ್ರ ನಿದ್ರೆಯಿಂದ ಇನ್ನೂ ಎಚ್ಚೆತ್ತಿಲ್ಲ. ಅಧಿಕಾರಿಶಾಹಿಯ ಈ ಭಂಡ ನಿರ್ಲಕ್ಷ್ಯದಿಂದಾಗಿಯೇ ಮಹತ್ವಾಕಾಂಕ್ಷೆಯ ಯೋಜನೆಗಳು ಜನರಿಗೆ ತಲುಪುತ್ತಿಲ್ಲ.

ವಿಶೇಷ ಅಭಿವೃದ್ಧಿ ಕಥೆ ಇದು

2020-21ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಲಕ್ಷ್ಮಣ ಸವದಿ (ಸಾರಿಗೆ) ಸಚಿವ ಬಸವರಾಜ ಬೊಮ್ಮಾಯಿ (ಒಳಾಡಳಿತ) ಕೆ ಎಸ್‌ ಈಶ್ವರಪ್ಪ (ಗ್ರಾಮೀಣಾಭಿವೃದ್ಧಿ) ರಮೇಶ್‌ ಜಾರಕಿಹೊಳಿ(ಜಲ ಸಂಪನ್ಮೂಲ) ಸೋಮಣ್ಣ(ವಸತಿ), ಬಿ ಶ್ರೀರಾಮುಲು (ಹಿಂದುಳಿದ ವರ್ಗಗಳ ಕಲ್ಯಾಣ) ಶಶಿಕಲಾ ಜೊಲ್ಲೆ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)ಅಲ್ಪಸಂಖ್ಯಾತರ ಕಲ್ಯಾಣ, ವಸತಿ, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಮತ್ತು ಆರೋಗ್ಯ ಇಲಾಖೆಗಳು ಕ್ರಿಯಾ ಯೋಜನೆಯನ್ನೇ ತಯಾರಿಸಿಲ್ಲದಿರುವುದು ನಡವಳಿಯಿಂದ ತಿಳಿದು ಬಂದಿದೆ.

ಶೇ.20ಕ್ಕಿಂತ ಕಡಿಮೆ ಪ್ರಗತಿ

ಪರಿಶಿಷ್ಟ ವರ್ಗಗಳ ಕಲ್ಯಾಣ, ಮಾಹಿತಿ ತಂತ್ರಜ್ಞಾನ, ಮೂಲಭೂತ ಸೌಕರ್ಯ, ವಸತಿ, ಅಲ್ಪಸಂಖ್ಯಾತರ, ಯುವ ಸಬಲೀಕರಣ, ಹಿಂದುಳಿದ ವರ್ಗಗಳು, ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ, ಸಮಾಜ ಕಲ್ಯಾಣ, ಕೃಷಿ, ನಗರಾಭಿವೃದ್ಧಿ ಇಲಾಖೆಗಳೂ ಸೇರಿದಂತೆ ಇತರೆ ಇಲಾಖೆಗಳು ಶೇ.20ಕ್ಕಿಂತಲೂ ಕಡಿಮೆ ಪ್ರಗತಿ ಮಾಡಿದೆ.

ಶೂನ್ಯ ಸಂಪಾದನೆ

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಗಳಿಗೆ ಸಂಬಂಧಿಸಿದಂತೆ ಕಳೆದ 4 ತಿಂಗಳೂ ಕಳೆದರೂ ಬಹುತೇಕ ಇಲಾಖೆಗಳು ಶೂನ್ಯ ಪ್ರಗತಿ ಸಾಧಿಸಿದೆ. ಬಾಹ್ಯ ಅನುದಾನ ಯೋಜನೆಗಳಡಿಯಲ್ಲಿ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಇಯ ಬಿಡಬ್ಲ್ಯೂಎಸ್‌ಎಸ್‌ಬಿ, ಸಮಗ್ರ ಜಲ ನಿರ್ವಹಣೆ, ವಿಶ್ವ ಬ್ಯಾಂಕ್‌ ಮತ್ತು ಇತರೆ ಇಲಾಖೆಯ ಯೋಜನೆಗಳ ಪ್ರಗತಿಯಲ್ಲೂ ಶೂನ್ಯ ಸಂಪಾದನೆ ಆಗಿರುವುದು ನಡವಳಿಯಿಂದ ಗೊತ್ತಾಗಿದೆ.

ಹಾಸ್ಟೆಲ್‌ ಸಿಬ್ಬಂದಿಗೂ ವೇತನವಿಲ್ಲ

ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರು, ಹಾಸ್ಟೆಲ್‌ ಸಿಬ್ಬಂದಿ, ದಿನಗೂಲಿ ನೌಕರರಿಗೂ ವೇತನ ದೊರೆತಿಲ್ಲ. ಕೇಂದ್ರ ಪುರಸ್ಕೃತ ಮತ್ತು ಕೇಂದ್ರ ವಲಯ ಯೋಜನೆಗಳಡಿ ಈವರೆವಿಗೂ ಕೇಂದ್ರ ಸರ್ಕಾರದಿಂದ ಅನುದಾನವನ್ನು ಬಹುತೇಕ ಇಲಾಖೆಗಳು ಬಿಡುಗಡೆ ಮಾಡಿಸಿಕೊಂಡಿಲ್ಲ. ಹೀಗಾಗಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಬಿಡುಗಡೆಯಾಗದಿರುವುದು ತಿಳಿದು ಬಂದಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಭಾಗವಾಗಿದ್ದ ಉಭಯ ಪಕ್ಷಗಳ ಶಾಸಕರು ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಎಸಗುತ್ತಿದ್ದಾರೆ ಎಂದು ಬಲವಾಗಿ ಆರೋಪಿಸಿದ್ದರು. ಅಲ್ಲದೆ ಇದನ್ನೇ ನೆಪವಾಗಿರಿಸಿಕೊಂಡಿದ್ದ ಉಭಯ ಪಕ್ಷಗಳ ಶಾಸಕರು ಸಿಡಿದು ಬಿಜೆಪಿ ಪಾಳೆಯ ಸೇರಿದ್ದರಲ್ಲದೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೂ ಕಾರಣರಾಗಿದ್ದರು.

ಪಕ್ಷಾಂತರ ಮಾಡಿದ ನಂತರ ಪ್ರಭಾವಿ ಖಾತೆಗಳನ್ನು ಪಡೆದು ಸಚಿವರಾಗಿ ಒಂದು ವರ್ಷ ಕಳೆದಿದ್ದಾರೆಯೇ ಹೊರತು ಯೋಜನೆಗಳ ಅನುಷ್ಠಾನದಲ್ಲಿ ಮುಗ್ಗುರಿಸಿ ಬಿದ್ದಿದ್ದಾರೆ. ಇಲಾಖೆಗಳ ಮುಖ್ಯಸ್ಥರ ಮೇಲೆ ಸಚಿವರ ಹಿಡಿತವಾಗಲೀ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರ ಕಾರ್ಯಕ್ಷಮತೆಯೂ ಪರಿಣಾಮಕಾರಿಯಾಗಿಲ್ಲ ಎಂಬುದು ಕೆಡಿಪಿ ಸಭೆಯಲ್ಲಿ ಹೊರಬಿದ್ದ ಫಲಿತಾಂಶಗಳೇ ಕೈಗನ್ನಡಿಯಾಗಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img