Monday | September 14, 2026 |

ಆರ್‌ಎಸ್‌ಎಸ್‌; ತಪ್ಪು ಉತ್ತರ ನೀಡಿ ಸದನವನ್ನು ದಾರಿ ತಪ್ಪಿಸಿದ ಸಚಿವ ಸೋಮಶೇಖರ್‌?

Support THE-FILE

spot_img

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸದನಕ್ಕೆ ತಪ್ಪು ಉತ್ತರ ನೀಡುವ ಮೂಲಕ ದಾರಿ ತಪ್ಪಿಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ.

2 ವರ್ಷದಿಂದಲೂ ಸಾಮಾಜಿಕ ಕಾರ್ಯಕರ್ತರು ಆರ್‌ಎಸ್‌ಎಸ್‌ ವಿರುದ್ಧ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಸಿದ್ದರೂ ಯಾವುದೇ ದೂರುಗಳು ಸಲ್ಲಿಕೆಯಾಗಿಲ್ಲ ಎಂದು ತಪ್ಪು ಉತ್ತರ ನೀಡಿರುವುದು ಇದೀಗ ಬಹಿರಂಗವಾಗಿದೆ. ತಪ್ಪು ಉತ್ತರ ನೀಡುವ ಮೂಲಕ ಸದನವನ್ನು ತಪ್ಪು ದಾರಿಗೆಳೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಶೇಷವೆಂದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಮೈತ್ರಿ ಸರ್ಕಾರದ ಅವಧಿಯಲ್ಲೇ ಆರ್‌ಎಸ್‌ಎಸ್‌ ವ್ಯವಹಾರಗಳ ಕುರಿತು ದೂರು ಸಲ್ಲಿಕೆಯಾಗಿತ್ತು.

2 ವರ್ಷದ ಹಿಂದೆಯೇ ದೂರು ಸಲ್ಲಿಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ ವ್ಯವಹಾರಗಳ ಕುರಿತು ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಅವರು 2018ರಲ್ಲೇ ದೂರು ಸಲ್ಲಿಸಿದ್ದಾರೆ. ಅಲ್ಲದೆ ಸಂಘಟನೆ ಕುರಿತು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದರು. ಈ ದೂರು ಆಧರಿಸಿ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಎನ್‌ ಎಂ ಬೇಗಂ ಅವರು ‘ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿ ಅರ್ಜಿದಾರರ ಮನವಿ ಕುರಿತು ಪರಿಶೀಲಿಸಿ ನಿಯಮಾನುಸಾರವಾಗಿ ಕ್ರಮವಿಡಬೇಕು,’ ಎಂದು 2018ರ ಆಗಸ್ಟ್‌ 25ರಂದು ಸಹಕಾರ ಸಂಘಗಳ ಉಪ ನಿಬಂಧಕರಿಗೆ ಪತ್ರ ಮುಖೇನ ಸೂಚಿಸಿದ್ದರು.

ಡಿಜಿಪಿಗೂ ಸಲ್ಲಿಕೆಯಾಗಿತ್ತು ದೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇನ್ನಿತರೆ ಸಂಘಟನೆಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹನುಮೇಗೌಡ ಅವರು ಪೊಲೀಸ್‌ ಮಹಾನಿರ್ದೇಶಕರಿಗೆ 2018ರ ಜುಲೈ 19ರಂದು ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಡಿಜಿಪಿ ಕಚೇರಿಯ ಎಐಜಿಪಿ ರಾಧಿಕಾ ಜಿ ಅವರು ನಿಯಮಾನುಸಾರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ನಗರದ ಪೊಲೀಸ್‌ ಆಯುಕ್ತರಿಗೆ 2018ರ ಅಕ್ಟೋಬರ್‌ 1ರಂದು ಪತ್ರ ಬರೆದಿದ್ದರು. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಡಿಜಿಪಿ ಕಚೇರಿಯ ಎಐಜಿಪಿ ಅವರ ಪತ್ರಗಳನ್ನಾಧರಿಸಿ ಈವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

ಇನ್ನು, ನೋಂದಣಿ, ವಾರ್ಷಿಕ ಲೆಕ್ಕಪತ್ರಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸೇರಿದಂತೆ ಅಧಿವೇಶನದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರಿಗೆ ತಿಂಗಳಾದರೂ ಉತ್ತರ ನೀಡಿರಲಿಲ್ಲ. ಅಲ್ಲದೆ ವಿಧಾನಪರಿಷತ್‌ನ ಅಧಿಕೃತ ಜಾಲತಾಣದಲ್ಲಿ ಈವರೆವಿಗೂ ಉತ್ತರದ ಪ್ರತಿಯನ್ನು ಅಪ್‌ಲೋಡ್‌ ಮಾಡಿಲ್ಲ. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಸಹಕಾರ ಇಲಾಖೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರು, ಉತ್ತರವನ್ನು ಒದಗಿಸಿದ್ದಾರೆ. ಇದು ‘ದಿ ಫೈಲ್‌’ ವರದಿ ಪರಿಣಾಮ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img