Monday | June 15, 2026 |

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

ವಿಚಾರಣೆಗಳಿಗೆ ಗುರಿಯಾಗಿರುವ ಇಲಾಖೆಗಳ ಪೈಕಿ ನಗರಾಭಿವೃದ್ಧಿ ಇಲಾಖೆ (ಬೈರತಿ ಬಸವರಾಜು) ಮೊದಲ ಸ್ಥಾನದಲ್ಲಿದ್ದರೆ ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌(ಕೆ ಎಸ್‌ ಈಶ್ವರಪ್ಪ) ಮೂರನೇ ಸ್ಥಾನದಲ್ಲಿ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಬಿ ಎಸ್‌ ಯಡಿಯೂರಪ್ಪ) ಇದೆ.

ಹಾಗೆಯೇ ಅಧಿಕಾರ ಮತ್ತು ಹಣಕಾಸು ದುರುಪಯೋಗ, ಕರ್ತವ್ಯಲೋಪ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಸಚಿವಾಲಯದ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರ ವಿರುದ್ಧದ ಇಲಾಖಾ ಪ್ರಕರಣಗಳ ಪೈಕಿ 41 ಪ್ರಕರಣಗಳು ಸಚಿವರ ಹಂತದಲ್ಲೇ ಬಾಕಿ ಇರುವುದು ಗೊತ್ತಾಗಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ದಾಖಲೆಗಳು ಲಭ್ಯವಾಗಿವೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ವಿವಿಧ ಸೇವೆಯಲ್ಲಿರುವ ಅಧಿಕಾರಿಗಳು ತಪ್ಪು ಮಾಡಿದಾಗ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸಂಬಂಧ ಕೆಪಿಎಸ್‌ಸಿಯ ಸಲಹೆ ಪಡೆಯುವ ನಿಯಮವನ್ನು ಕೈಬಿಟ್ಟಿರುವ ಸರ್ಕಾರವು ನೇರ ಕ್ರಮ ಕೈಗೊಳ್ಳಲು ತೀರ್ಮಾನ ಪ್ರಕಟಿಸಿರುವ ಬೆನ್ನಲ್ಲೇ ವಿವಿಧ ಹಂತಗಳ ಅಧಿಕಾರಿ,ನೌಕರರ ವಿರುದ್ಧದ ಇಲಾಖಾ ಪ್ರಕರಣಗಳ ವಿವರಗಳು ಮುನ್ನೆಲೆಗೆ ಬಂದಿವೆ.

ಕೃಷಿ, ವಸತಿ, ಸಹಕಾರ, ಆರ್ಥಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಿಬ್ಬಂದಿ ಆಡಳಿತ ಸುಧಾರಣೆ, ಸಾರಿಗೆ, ರೇಷ್ಮೆ, ಲೋಕೋಪಯೋಗಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಪ್ರಾಥಮಿಕ,ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಸಣ್ಣ ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ ಇಲಾಖೆ ಸೇರಿದಂತೆ ಒಟ್ಟು 35 ಇಲಾಖೆಗಳಲ್ಲಿ 1,174 ಇಲಾಖೆ ಪ್ರಕರಣಗಳು ಜಾರಿಯಲ್ಲಿರುವುದು ದಾಖಲೆಗಳಿಂದ ತಿಳಿದು ಬಂದಿದೆ.

ಒಟ್ಟು ಪ್ರಕರಣಗಳ ಪೈಕಿ 1,000 ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ,ನೌಕರರ ವಿರುದ್ಧ ದೋಷಾರೋಪಣೆ ಪಟ್ಟಿ ಜಾರಿಗೊಳಿಸಿರುವ ಆಯಾ ಇಲಾಖೆಗಳು, ಪ್ರಕರಣಗಳ ಸಂಬಂಧ 712 ವಿಚಾರಣಾಧಿಕಾರಿಗಳನ್ನು ನೇಮಿಸಿವೆ. ಈ ಪೈಕಿ 360 ವಿಚಾರಣಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಬಹುತೇಕ ವಿಚಾರಣಾಧಿಕಾರಿಗಳು ಆರೋಪಿತ ಅಧಿಕಾರಿಗಳ ವಿರುದ್ಧದ ಆರೋಪಗಳನ್ನು ಸಾಬೀತುಗೊಳಿಸಿಲ್ಲ ಎಂದು ತಿಳಿದು ಬಂದಿದೆ.

ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಆರೋಪ ಸಾಬೀತುಪಡಿಸಲಾಗಿದ್ದರೂ ಆಪಾದಿತ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಿಲ್ಲ. ಆಯಾ ಇಲಾಖೆ ಸಚಿವರ ಅನುಮೋದನೆ ದೊರೆಯದ ಕಾರಣ ಬಹುತೇಕ ಪ್ರಕರಣಗಳಲ್ಲಿ ಶಿಸ್ತು ಕ್ರಮ ಜರುಗಿಸಲಾಗಿಲ್ಲ ಎಂದು ಗೊತ್ತಾಗಿದೆ.
ಅದೇ ರೀತಿ 2ನೇ ಕಾರಣ ಕೇಳುವ ನೋಟೀಸ್‌ಗೆ ಆರೋಪಿತ ಅಧಿಕಾರಿ/ನೌಕರರಿಂದ ವಿವರಣೆ ಪಡೆದಿರುವ ಒಟ್ಟು 188 ಪ್ರಕರಣಗಳಲ್ಲಿ ಕೇವಲ 39 ಪ್ರಕರಣಗಳಲ್ಲಿ ಮಾತ್ರ ಅಂತಿಮ ಆದೇಶ ಹೊರಡಿಸಲಾಗಿದೆ. ಜೂನ್‌ 2020ರಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,209ಕ್ಕೆ ತಲುಪಿದ್ದು, ಒಟ್ಟಾರೆ 1,174 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.

ಸಚಿವರ ಹಂತದಲ್ಲಿ ಬಾಕಿ ಇರುವ ಪ್ರಕರಣಗಳು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ 10, ಅಲ್ಪಸಂಖ್ಯಾತರ ಇಲಾಖೆಯಲ್ಲಿನ 14 ಇಲಾಖೆ ಪ್ರಕರಣಗಳು ಸಚಿವರ ಹಂತದಲ್ಲಿ ಬಾಕಿ ಇವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿರುವ 135 ಇಲಾಖೆ ಪ್ರಕರಣಗಳ ಪೈಕಿ 121 ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ, ನೌಕರರಿಂದ ವಿವರಣೆ ಪಡೆಯಲಾಗಿದೆ. ಅಲ್ಲದೆ ಪ್ರಕರಣಗಳನ್ನು ವಿಚಾರಣೆ ನಡೆಸಿರುವ ವಿಚಾರಣಾಧಿಕಾರಿಗಳಿಂದ 50 ವರದಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿರುವುದು ದಾಖಲೆಯಿಂದ ಗೊತ್ತಾಗಿದೆ.

ಇನ್ನು ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯಲ್ಲಿ ಒಟ್ಟು 116 ಇಲಾಖೆ ಪ್ರಕರಣಗಳ ಪೈಕಿ 91 ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ, ನೌಕರರಿಂದ ವಿವರಣೆ ಪಡೆದಿದೆ. 70 ಪ್ರಕರಣಗಳಲ್ಲಿ ವಿಚಾರಣಾಧಿಕಾರಿಗಳನ್ನು ನೇಮಿಸಿದೆ. ಈ ಪೈಕಿ 29 ವಿಚಾರಣಾ ವರದಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ.

ಅದೇ ರೀತಿ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ, ನೌಕರರ ವಿರುದ್ಧ ಒಟ್ಟು 154 ಪ್ರಕರಣಗಳ ಪೈಕಿ 49 ವಿಚಾರಣಾಧಿಕಾರಿಗಳನ್ನು ನೇಮಿಸಲಾಗಿದೆ. ವಿಚಾರಣೆ ಪೂರ್ಣಗೊಳಿಸಿರುವ ವಿಚಾರಣಾಧಿಕಾರಿಗಳು ಜುಲೈ 2020ರವರೆಗೆ 19 ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಹಾಗೆಯೇ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 112 ಇಲಾಖೆ ಪ್ರಕರಣಗಳ ತನಿಖೆಗೆ ನೇಮಿಸಿರುವ 59 ವಿಚಾರಣಾಧಿಕಾರಿಗಳ ಪೈಕಿ 30 ವಿಚಾರಣಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img