Sunday | June 14, 2026 |

ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲು

Support THE-FILE

spot_img

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2019-20 ಸಾಲಿನಲ್ಲಿ ಒಟ್ಟು 908 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಇಳಿಕೆ ಕಂಡಿತ್ತಾದರೂ 2019-20ನೇ ಸಾಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿರುವುದು ಆತಂಕ ಮೂಡಿಸಿದೆ.

ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ಮಡಿಕೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ.

ಆತ್ಮಹತ್ಯೆ ಮಾಡಿಕೊಂಡ 908 ರೈತರ ಪೈಕಿ 122 ಪ್ರಕರಣಗಳನ್ನು ವೈಯಕ್ತಿಕ ಕಾರಣಗಳಿಗಾಗಿನ ಆತ್ಮಹತ್ಯೆ ಎಂದು ತಿರಸ್ಕರಿಸಲಾಗಿದೆ. ಸುಮಾರು 660 ಆತ್ಮಹತ್ಯೆ ಪ್ರಕರಣಗಳನ್ನು ಅರ್ಹ ಪ್ರಕರಣ ಎಂದು ಇದುವರೆಗೆ ದೃಢೀಕರಿಸಲಾಗಿದೆ. ಇನ್ನೂ 127 ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕೃಷಿ ಇಲಾಖೆ ಪರಿಶೀಲನೆ ನಡೆಸುತ್ತಿದೆ.42 ರೈತರ ಆತ್ಮಹತ್ಯೆ ಪ್ರಕರಣಗಳನ್ನು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳಿಸಿದೆ ಎಂದು ತಿಳಿದು ಬಂದಿದೆ.

2016-17ರಲ್ಲಿ ರಾಜ್ಯದಲ್ಲಿ 925 ರೈತರು ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು 2017-18ರಲ್ಲಿ ರೈತರ ಆತ್ಮಹತ್ಯೆ ಪ್ರಮಾಣ 1, 050ಗೆ ಏರಿಕೆಯಾಗಿತ್ತು. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣ 700ಕ್ಕೆ ಇಳಿದಿತ್ತು. ಇದಾಗಿ ಒಂದೇ ವರ್ಷದ ಅಂತರದಲ್ಲಿ 2019-20ರಲ್ಲಿ ಮತ್ತೆ ರೈತರ ಆತ್ಮಹತ್ಯೆ ಪ್ರಕರಣ ಸಂಖ್ಯೆ ಹೆಚ್ಚಳವಾಗಿದೆ. ಆತ್ಮಹತ್ಯೆ ಎಂದು ಈಗಾಗಲೇ ದೃಢೀಕರಿಸುವ ಮತ್ತು ತೀರ್ಮಾನಿಸಲು ಬಾಕಿ ಇರುವ ಪ್ರಕರಣಗಳು ಸೇರಿ ಒಟ್ಟು 787 ಆತ್ಮಹತ್ಯೆ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

ಬೆಳಗಾವಿಯಲ್ಲಿ 94, ವಿಜಯಪುರ- 43, ಬಾಗಲಕೋಟೆ- 28, ಹಾವೇರಿ- 76, ಧಾರವಾಡ- 60, ಗದಗ- 25 ರೈತರು ಸೇರಿದಂತೆ ಮುಂಬೈ-ಕರ್ನಾಟಕ ಭಾಗದಲ್ಲಿ ಒಟ್ಟು 326 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಹಾಗೆಯೇ ಬೀದರ್‌ನಲ್ಲಿ 46, ಕಲಬುರ್ಗಿಯಲ್ಲಿ 58, ರಾಯಚೂರಿನಲ್ಲಿ 22, ಬಳ್ಳಾರಿಯಲ್ಲಿ 35, ಕೊಪ್ಪಳದಲ್ಲಿ 23, ಯಾದಗಿರಿಯಲ್ಲಿ 20 ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 204 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಡ್ಯದಲ್ಲಿ 63, ಮೈಸೂರು- 60, ಹಾಸನ-33, ಚಾಮರಾಜನಗರ-1, ರಾಮನಗರ-5, ಕೊಡಗು ಜಿಲ್ಲೆಯಲ್ಲಿ 9 ರೈತರು ಸೇರಿದಂತೆ ಕಾವೇರಿ ನದಿ ಪಾತ್ರದಲ್ಲಿ ಒಟ್ಟು 171 ರೈತರು ನೇಣಿಗೆ ಕೊರಳೊಡ್ಡಿದ್ದಾರೆ.

ಶಿವಮೊಗ್ಗದಲ್ಲಿ 42, ಚಿಕ್ಕಮಗಳೂರು-41, ಚಿತ್ರದುರ್ಗ-40, ದಾವಣಗೆರೆ-36, ತುಮಕೂರು ಜಿಲ್ಲೆಯಲ್ಲಿ 31 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಅತಿವೃಷ್ಠಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಲೇ ಇದೆ. ಬೆಳೆ ವಿಮೆ, ಪ್ರಧಾನ್‌ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿದ್ದರೂ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ರಾಜ್ಯದಲ್ಲಿಯೂ ಕಡಿವಾಣ ಬಿದ್ದಿಲ್ಲ.

ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಕೃಷಿ ಮಾಡಿಯೂ ಉತ್ತಮ ಬದುಕು ಕಟ್ಟಿಕೊಂಡವರು ಇದ್ದಾರೆ. ಆದರೆ, ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಹಾಗೂ ಮಕ್ಕಳನ್ನು ನೋಡಿಕೊಳ್ಳದ ರೈತ ಹೇಡಿ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img