Sunday | June 14, 2026 |

ಭೂ ಪರಿವರ್ತನೆ; ಪುತ್ರ ಗಣೇಶ್‌ ಪ್ರಸ್ತಾವನೆ ಅನುಮೋದನೆಗೆ ಶಾಮನೂರು ಅಧಿಕಾರ ಬಳಕೆ?

Support THE-FILE

spot_img

ಬೆಂಗಳೂರು; ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಎಸ್‌ ಎಸ್‌ ಮಾಲ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಪುತ್ರ ಎಸ್‌ ಎಸ್‌ ಗಣೇಶ್‌ ಪರವಾಗಿ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಂದಿನ ಅಧ್ಯಕ್ಷರೂ ಆಗಿದ್ದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

ತಮ್ಮ ಪುತ್ರನ ಹೆಸರಿನಲ್ಲಿ ಭೂ ಉಪಯೋಗ ಬದಲಾವಣೆ ಮಾಡುವ ಸಂಬಂಧ ಸ್ವಜನಪಕ್ಷಪಾತ ಎಸಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಶಾಮನೂರು ಶಿವಶಂಕರಪ್ಪ ಅವರು ಇದೇ ಪ್ರಕರಣದಲ್ಲಿ ಹಿತಾಸಕ್ತಿ ಸಂಘರ್ಷಕ್ಕೂ ಕಾರಣರಾಗಿದ್ದರು. ದೂಡಾದ (ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ)ದ ಅಧ್ಯಕ್ಷ ಅಧ್ಯಕ್ಷರಾಗಿದ್ದ ಅಂದಿನ ಜಿಲ್ಲಾಧಿಕಾರಿಗೆ ಶಿವಶಂಕರಪ್ಪ ಅವರು ಟಿಪ್ಪಣಿ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಟಿಪ್ಪಣಿಯಲ್ಲೇನಿದೆ?

ಎಸ್‌ ಎಸ್‌ ಗಣೇಶ್‌ ಇವರು ತಮ್ಮ ಹಕ್ಕು ಸ್ವಾಧೀನದಲ್ಲಿರುವ ದಾವಣಗೆರೆ ತಾಲೂಕು ಶಾಬನೂರು ಗ್ರಾಮದ ಸರ್ವೆ ನಂಬರ್‌ 73/1 (21 ಗುಂಟೆ), ಸರ್ವೆ ನಂಬರ್‌ 76/1 (1 ಎಕರೆ 00 ಗುಂಟೆ), ಸರ್ವೆ ನಂಬರ್‌ 76/2 (30 ಗುಂಟೆ), ರಲ್ಲಿನ ಒಟ್ಟು 2 ಎಕರೆ 11 ಗುಂಟೆ ಜಾಗವನ್ನು ಕೈಗಾರಿಕೆ ಉದ್ದೇಶದಿಂದ ವಾಣಿಜ್ಯ ಉದ್ದೇಶದ ಭೂ ಉಪಯೋಗ ಬದಲಾವಣೆಗೆ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾಋಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆದ್ದರಿಂದ ಸದರಿ ಪ್ರಸ್ತಾವನೆಗೆ ಅನುಮೋದನೆ ನೀಡಿ ನಂತರ ವಿಷಯವನ್ನು ಘಟನೋತ್ತರ ಮಂಜೂರಾತಿಗೆ ಮುಂದಿನ ಪ್ರಾಧಿಕಾರದ ಸಭೆಗೆ ಮಂಡಿಸಿ ಎಂದು 2014ರ ಸೆ.27ರಂದು ಸೂಚಿಸಿರುವುದು ಟಿಪ್ಪಣಿಯಿಂದ ಗೊತ್ತಾಗಿದೆ.

ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವ ಮುನ್ನ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ಆಗಬೇಕು ಮತ್ತು ಈ ಸಂಬಂಧ ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಆ ನಂತರವಷ್ಟೇ ಭೂ ಉಪಯೋಗ ಬದಲಾವಣೆಗೆ ಪ್ರಾಧಿಕಾರ ಅನುಮೋದನೆ ನೀಡಬೇಕು.

ಆದರೆ ಲಭ್ಯವಿರುವ ಟಿಪ್ಪಣಿ ಪ್ರಕಾರ ಪ್ರಾಧಿಕಾರದ ಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆಯೇ ಏಕಾಏಕಿ ಎಸ್‌ ಎಸ್‌ ಗಣೇಶ್‌ ಅವರ ಪ್ರಸ್ತಾವನೆಗೆ ಅನುಮೋದನೆ ದೊರೆತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಚಿವರ ಪುತ್ರ ಎಂಬ ಕಾರಣಕ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದ ಅಂದಿನ ಜಿಲ್ಲಾಧಿಕಾರಿಗಳೂ ಘಟನೋತ್ತರ ಮಂಜೂರಾತಿ ನೀಡಿದ್ದರು ಎಂದು ಗೊತ್ತಾಗಿದೆ.

ಎಸ್‌ ಎಸ್‌ ಗಣೇಶ್ ಅವರು 9 ನಿವೇಶನಗಳನ್ನು ಖರೀದಿಸಿ ಅವುಗಳನ್ನು ಕಾನೂನು ಪ್ರಕಾರ ಏಕ ನಿವೇಶನ ಮಾಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರಾದರೂ ಹೈಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಈ ಸಂಬಂಧ ಎಸ್‌ ಎಸ್‌ ಗಣೇಶ್‌ ಅವರೇ ಕಾಲಾವಕಾಶ ಕೇಳಿದ್ದರು. ಒತ್ತುವರಿ ಆಗಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಅಲ್ಲದೆ ಕಾಲಾವಕಾಶ ಪೂರ್ಣಗೊಂಡ ನಂತರ ಈವರೆವಿಗೂ ಒತ್ತುವರಿಯನ್ನು ತೆರವುಗೊಂಡಿಲ್ಲ.

ರಸ್ತೆಗಳು ಅನುಪಯುಕ್ತವಾಗಿವೆ ಮತ್ತು ಯಾವುದೇ ಅಭಿವೃದ್ಧಿ ಆಗಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ವಸತಿ ವಿನ್ಯಾಸದಲ್ಲಿನ ನಿವೇಶನಗಳನ್ನು ಒಂದುಗೂಡಿಸಲು ದಾವಣಗೆರೆ ಮಹಾನಗರಪಾಲಿಕೆಯ ಹಿಂದಿನ ಆಯಕ್ತರು ಕೈಗಾರಿಕೆ ಉಪಯೋಗಕ್ಕೆ ಪರಿವರ್ತಿಸಲು ಅನುಮತಿ ನೀಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img