Sunday | September 13, 2026 |

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

Support THE-FILE

spot_img

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

ಕ್ರಿಯಾ ಯೋಜನೆ ತಯಾರಾಗದಿದ್ದ ಮೇಲೆ ಅನುದಾನವನ್ನು ಹೇಗೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಇತ್ತ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 65 ಕೋಟಿ ರು.ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದೆ.

ಕಳೆದ ಬಾರಿ ಬಿದ್ದ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಹಾಳಾಗಿವೆ. ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವನ್ನೊಡ್ಡುತ್ತಿರುವ ಸರ್ಕಾರ ರಸ್ತೆ ದುರಸ್ತಿಗೆ ಅನುದಾನ ನೀಡುತ್ತಿಲ್ಲ. ಅಲ್ಲದೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 1,600 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.

ಹೀಗಿರುವಾಗ ಕ್ರಿಯಾ ಯೋಜನೆಯನ್ನೇ ತಯಾರಿಸದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು. ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯವು ತರಾತುರಿಯಿಂದ ಓಡಾಡುತ್ತಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img