Sunday | June 14, 2026 |

ತೆರಿಗೆಯೇತರ ವರಮಾನದಲ್ಲಿ ಭಾರೀ ಇಳಿಕೆ; ಅನ್ಯ ರಾಜ್ಯಗಳಿಗಿಂತ ಕರ್ನಾಟಕದಲ್ಲೆ ಅತ್ಯಂತ ಕಡಿಮೆ

Support THE-FILE

spot_img

ಬೆಂಗಳೂರು; ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಅಭಿವೃದ್ಧಿ ಹರಿಕಾರರಂತೆ ಭಾರೀ ಪ್ರಚಾರಗಿಟ್ಟಿಸಿಕೊಂಡು ಸರ್ಕಾರ ರಚಿಸಿದ್ದ ಯಡಿಯೂರಪ್ಪ ಅವರ ಒಂದು ವರ್ಷದ ಅವಧಿಯಲ್ಲಿ ಆಡಳಿತ ಇಲಾಖೆಗಳಲ್ಲಿ ಅದಕ್ಷತೆ ಮತ್ತು ಅಧಿಕಾರಿಗಳ ಮೈಗಳ್ಳತನವು ಮತ್ತೊಮ್ಮೆ ಬಹಿರಂಗವಾಗಿದೆ. ಹೀಗಾಗಿಯೇ ತೆರಿಗೆಯೇತರ ಆದಾಯದ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸತತವಾಗಿ ತುಂಬಾ ಕಡಿಮೆಯಾಗುತ್ತಿದೆ.

ಆಡಳಿತ ಇಲಾಖೆಗಳಲ್ಲಿ ಮೇಲ್ವಿಚಾರಣೆಯೇ ಇರಲಿಲ್ಲ ಎಂಬ ಸಂಗತಿಯನ್ನು 2020-21ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆಯು ಹೊರಗೆಡವಿದೆ. ರಾಜಸ್ವ ಸ್ವೀಕೃತಿಯಲ್ಲಿ ತೆರಿಗೆಯೇತರ ರಾಜಸ್ವದ ಪಾಲು ಹಿಂದಿನ ಹಲವಾರು ವರ್ಷಗಳಿಂದಲೂ ಇಳಿಮುಖಗೊಂಡಿದೆ. ಪ್ರಮುಖವಾಗಿ ವೆಚ್ಚ ವಸೂಲಾತಿ ದರದಲ್ಲಿನ ಇಳಿಕೆ ಮತ್ತು ಕ್ಷೀಣತೆ ಸಾರ್ವಜನಿಕ ಉದ್ದಿಮೆಗಳ ಕಳಪೆ ಕಾರ್ಯನಿರ್ವಹಣೆ ಹಾಗೂ ಲಾಭಕರವಲ್ಲದ, ದುಬಾರಿ ಸಹಾಯಧನ ಮತ್ತು ಆಡಳಿತ ಇಲಾಖೆಗಳಿಂದ ಕಾಲಕಾಲಕ್ಕೆ ಕ್ರಮಬದ್ಧವಾಗಿ ನಡೆಸಬೇಕಾಗಿದ್ದ ಮೇಲ್ವಿಚಾರಣೆಯ ಕೊರತೆ ಮತ್ತು ಬಳಕೆ ಶುಲ್ಕಗಳನ್ನು ಪರಿಷ್ಕರಿಸಿರುವುದು ತೆರಿಗೆಯೇತರ ರಾಜಸ್ವವು ನಿಶ್ಚಲಗೊಳ್ಳಲು ಕಾರಣಗಳಲ್ಲಿ ಒಂದಾಗಿದೆ.

ತೆರಿಗೆಯೇತರ ರಾಜಸ್ವವು ಸಾಮಾಜಿಕ, ಆರ್ಥಿಕ ಮತ್ತು ಸಾಮಾನ್ಯ ಸೇವೆಗಳು, ಬಡ್ಡಿ ಮತ್ತು ಡಿವಿಡೆಂಡ್‌ಗಳ ಜಮೆಗಳನ್ನು ಒಳಗೊಂಡಿರುತ್ತದೆ. ಈ ಮೂರು ಸೇವೆಗಳ ರಾಜಸ್ವವು 2019-20ರಲ್ಲಿ 7,508 ಕೋಟಿ ರು.ಗಳಾಗಿದ್ದರೆ 2020-21ರಲ್ಲಿ 7,767.24 ಕೋಟಿ ರು.ಗಳಾಗಿತ್ತು. ತೆರಿಗೆಯೇತರ ರಾಜಸ್ವದಲ್ಲಿ ಆಗುತ್ತಿರುವ ಇಳಿಕೆಯು ರಾಜ್ಯವು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲೊಂದಾಗಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆಯು ವಿವರಿಸಿದೆ.

ನಿರ್ದಿಷ್ಟ ಮಟ್ಟದಲ್ಲಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸುವಂತಹ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಒಟ್ಟು ಜಮೆಗೆ ತೆರಿಗೆಯೇತರ ಆದಾಯದ ಪ್ರಮಾಣ ವರ್ಷದಿಂದ ವರ್ಷಕ್ಕೆ ತುಂಬಾ ಕಡಿಮೆಯಾಗುತ್ತಿದೆ ಎಂದು ಆತಂಕವನ್ನೂ ಹೊರಗೆಡವಿದೆ. ಅಲ್ಲದೆ ರಾಜ್ಯದ ತೆರಿಗೆಯೇತರ ವರಮಾನವನ್ನು ರಾಜ್ಯಾದಾಯದ ಪ್ರಮಾಣಕ್ಕೆ ಹೋಲಿಸಿದಾಗ ದೇಶದಲ್ಲಿಯೆ ಇದು ಅತ್ಯಂತ ಕಡಿಮೆಯಾಗಿದೆ ಎಂಬ ಅಂಶವು ಕರ್ನಾಟಕ ಆರ್ಥಿಕ ಸಮೀಕ್ಷೆಯಿಂದ ತಿಳಿದು ಬಂದಿದೆ.

ತೆರಿಗೆಯೇತರ ರಾಜಸ್ವವು ಕಳೆದ 5-6 ವರ್ಷಗಳಿಂದಲೂ ಶೇ.1ರತ್ತಲೇ ಸುಳಿದಾಡುತ್ತಿದೆ. ವೆಚ್ಚಗಳ ಸಂಗ್ರಹಣೆಯಲ್ಲಿ ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಅನೇಕ ಇಲಾಖೆಗಳಲ್ಲಿ ಬಳಕೆದಾರರ ಶುಲ್ಕ, ದಂಡ ಹಾಗೂ ಇತರೆ ತೆರಿಗೆಯೇತರ ಜಮೆಗಳ ಪರಿಷ್ಕರಣೆಯನ್ನು ಅನೇಕ ವರ್ಷಗಳಿಂದ ಕೈಗೆತ್ತಿಕೊಂಡಿರುವುದಿಲ್ಲ ಎಂದು ಸಮೀಕ್ಷೆ ವಿವರಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img