Sunday | September 13, 2026 |

ಭ್ರಷ್ಟಾಚಾರ; 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು

Support THE-FILE

spot_img

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು, ಆರೋಪಿತ ಅಧಿಕಾರಿ, ನೌಕರರ ವಿರುದ್ಧ 16 ಇಲಾಖೆಗಳು ಈವರೆವಿಗೂ ವಿಚಾರಣೆ ಪ್ರಕ್ರಿಯೆಗಳನ್ನೇ ನಡೆಸಿಲ್ಲದಿರುವುದು ಇದೀಗ ಬಹಿರಂಗವಾಗಿದೆ.

ಕಲಂ 12(3) ಅನ್ವಯ ಕಳಿಸಿಕೊಡಲಾಗುವ ವರದಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಇಲಾಖಾ ಮುಖ್ಯಸ್ಥರು 3 ತಿಂಗಳೊಳಗಾಗಿ ಲೋಕಾಯುಕ್ತಕ್ಕೆ ವರದಿಗಳನ್ನೂ ಸಲ್ಲಿಸುತ್ತಿಲ್ಲ ಎಂದು ಲೋಕಾಯುಕ್ತ ರಿಜಿಸ್ಟ್ರಾರ್‌ ಅವರು ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಇಲಾಖೆ ವಿಚಾರಣೆ ನಡೆಸದಿರುವ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ.

ಈ ಪೈಕಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಯೇ ಹೆಚ್ಚಿನ ಸಂಖ್ಯೆಯಲ್ಲಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳುತ್ತಿರುವುದು ಸುಳ್ಳಲ್ಲ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಪಟೂರಿನಲ್ಲಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ, ನೌಕರ ಸಿಬ್ಬಂದಿ ವಿರುದ್ಧ ಲೋಕಾಯುಕ್ತರು ಸಲ್ಲಿಸಿರುವ ವಿಚಾರಣೆ ವರದಿಗಳನ್ನಾಧರಿಸಿ ಇಲಾಖೆ ವಿಚಾರಣೆ ನಡೆಸದಿರುವ ಉನ್ನತ ಅಧಿಕಾರಿಗಳ ಭಂಡ ನಿರ್ಲಕ್ಷ್ಯವೂ ಪ್ರದರ್ಶನವಾಗಿದೆ.

2021ರ ಜನವರಿ 15ರಿಂದ ಫೆ.15ರವರೆಗೆ ಸಚಿವಾಲಯದ ಇಲಾಖೆಗಳಿಗೆ ಲೋಕಾಯುಕ್ತದಿಂದ 12(3) ಅಡಿಯಲ್ಲಿ ಒಟ್ಟು 1,708 ಪ್ರಕರಣಗಳನ್ನು ವಹಿಸಲಾಗಿದೆ. ಈ ಪೈಕಿ ನಿಯಮ 14 (ಎ) ಅಡಿ 1,295 ಪ್ರಕರಣಗಳಿವೆ. ಅಲ್ಲದೆ ನಿಯಮ 14(3) ಅಡಿಯಲ್ಲಿ ವರದಿ ಸ್ವೀಕೃತವಾಗಿರುವ 294 ಮತ್ತು 92 ಪ್ರಕರಣಗಳಿಗಷ್ಟೇ ಅಂತಿಮ ಆದೇಶ ಹೊರಡಿಸಿದೆ. ಈ ಸಂಬಂಧ ‘ದಿ ಫೈಲ್‌’ಗೆ ಅಂಕಿ ಅಂಶಗಳನ್ನೊಳಗೊಂಡ ದಾಖಲೆಗಳು ಲಭ್ಯವಾಗಿವೆ.

ಸಚಿವಾಲಯ ಇಲಾಖೆಗಳಿಗೆ ಲೋಕಾಯುಕ್ತ ಶಿಫಾರಸ್ಸು ಮಾಡಿರುವ 1,708 ಪ್ರಕರಣಗಳ ಪೈಕಿ ಕೇವಲ 191 ಪ್ರಕರಣಗಳಿಗಷ್ಟೇ ಇಲಾಖೆ ವಿಚಾರಣೆ ಆರಂಭಿಸಿದೆ. ಪಶು ಸಂಗೋಪನೆ ಇಲಾಖೆ, ಮೀನುಗಾರಿಕೆ, ಸಹಕಾರ, ಕನ್ನಡ ಸಂಸ್ಕೃತಿ, ಒಳಾಡಳಿತ, ಯೋಜನೆ, ಅಲ್ಪಸಂಖ್ಯಾತರ ಅಭಿವೃದ್ಧಿ, ಆಹಾರ, ನಾಗರಿಕ ಸರಬರಾಜು, ವಸತಿ, ಸಾರಿಗೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪ್ರಾಥಮಿಕ, ಪ್ರೌಢಶಿಕ್ಷಣ, ಆರ್ಥಿಕ, ಜಲ ಸಂಪನ್ಮೂಲ, ವಾಣಿಜ್ಯ, ಕೈಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿನ ಒಟ್ಟು 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆ ಪ್ರಕ್ರಿಯೆಯನ್ನೇ ನಡೆಸದಿರುವುದು ಅಂಕಿ ಅಂಶ ದಾಖಲೆಯಿಂದ ತಿಳಿದು ಬಂದಿದೆ.

ಅಲ್ಲದೆ 1,708 ಪ್ರಕರಣಗಳ ಪೈಕಿ ಸಚಿವಾಲಯದ ಇಲಾಖೆಗಳು ಕೇವಲ 307 ಪ್ರಕರಣಗಳನ್ನಷ್ಟೇ ಪರಿಗಣಿಸಿದೆ. ಇಲಾಖೆ ವಿಚಾರಣೆ ನಡೆಸಿರುವ ಸಂಬಂಧ ಲೋಕಾಯುಕ್ತ ಕಾಯ್ದೆ 14(ಎ) ಅಡಿಯಲ್ಲಿ 294 ವರದಿಗಳನ್ನು ಸಲ್ಲಿಸಿವೆ. ಹಾಗೆಯೇ ಲೋಕಾಯುಕ್ತ ವಿಚಾರಣಾಧಿಕಾರಿಗಳ ಹಂತದಲ್ಲೇ 1,192 ಪ್ರಕರಣಗಳಿವೆ. ಇದರಲ್ಲಿ ಆರೋಪಿತ 260 ಅಧಿಕಾರಿ, ನೌಕರರಿಗೆ 2ನೇ ಶೋಕಾಸ್‌ ನೋಟೀಸ್‌ ನೀಡಲಾಗಿದೆ. ಆರೋಪ ಸಾಬೀತಾಗಿದೆ ಎಂದು ಹೇಳಲಾಗಿರುವ ಕೇವಲ 92 ಅಧಿಕಾರಿ, ನೌಕರರಿಗಷ್ಟೇ ದಂಡ ವಿಧಿಸಿರುವ ಅಂತಿಮ ಆದೇಶ ಹೊರಡಿಸಿದೆ. ಒಟ್ಟಾರೆ ಈ ಎಲ್ಲಾ ಪ್ರಕರಣಗಳಲ್ಲಿ ಶೇ.5.29ರಷ್ಟೇ ಪ್ರಗತಿ ಸಾಧಿಸಿರುವುದು ದಾಖಲೆಯಿಂದ ಗೊತ್ತಾಗಿದೆ.

ವಿಚಾರಣೆಯನ್ನೇ ನಡೆಸದ ಇಲಾಖೆಗಳಿವು

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 499 ಪ್ರಕರಣಗಳಲ್ಲಿ ಒಂದೇ ಒಂದು ಪ್ರಕರಣದಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸಿಲ್ಲ. ಅದೇ ರೀತಿ ಪ್ರಾಥಮಿಕ ಪ್ರೌಢಶಿಕ್ಷಣ 139, ಜಲ ಸಂಪನ್ಮೂಲ 93, ಒಳಾಡಳಿತ 81, ವಾಣಿಜ್ಯ ಕೈಗಾರಿಕೆ 57, ಪಶು ಸಂಗೋಪನೆ ಮತ್ತು ಆಹಾರ ನಾಗರಿಕ ಸರಬರಾಜು 17, ಸಹಕಾರ ಇಲಾಖೆ 16, ಸಾರಿಗೆ 30 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸಿಲ್ಲ.

ಅದೇ ರೀತಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಲೋಕಾಯುಕ್ತ ಶಿಫಾರಸ್ಸು ಮಾಡಿರುವ 73 ಪ್ರಕರಣಗಳ ಪೈಕಿ ಕೇವಲ 5 ಪ್ರಕರಣಗಳಿಗಷ್ಟೇ ಇಲಾಖೆ ವಿಚಾರಣೆಯನ್ನು ಆರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆಯು 43 ಪ್ರಕರಣಗಳ ಪೈಕಿ 1 ಪ್ರಕರಣದಲ್ಲಿ ಮಾತ್ರ ಇಲಾಖೆ ವಿಚಾರಣೆ ಆರಂಭಿಸಿದ್ದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 100 ಪ್ರಕರಣಗಳ ಪೈಕಿ ಕೇವಲ 6 ಪ್ರಕರಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ 169 ಪ್ರಕರಣಗಳ ಪೈಕಿ 8 ಪ್ರಕರಣಗಳಲ್ಲಷ್ಟೇ ಇಲಾಖೆ ವಿಚಾರಣೆಗೆ ಕ್ರಮ ಕೈಗೊಂಡಿದೆ.

ಸಚಿವಾಲಯದ ಇಲಾಖೆಗಳಲ್ಲಿ ಒಟ್ಟು 2010 ಇಲಾಖೆ ಪ್ರಕರಣಗಳ ಪೈಕಿ ನಿಯಮ 11ರ ಅಡಿಯಲ್ಲಿ 883 ಹಾಗೂ ನಿಯಮ 12ರ ಅಡಿಯಲ್ಲಿ 89 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಜಾರಿ ಮಾಡಿದೆ. ದೋಷಾರೋಪಣೆ ಪಟ್ಟಿಗೆ ವಿವರಣೆ ಕೊಟ್ಟಿರುವ 789 ಪ್ರಕರಣಗಳಲ್ಲಿ 632 ಪ್ರಕರಣಗಳಿಗೆ ವಿಚಾರಣಾಧಿಕಾರಿಗಳನ್ನು ನೇಮಿಸಿದೆ. ಹಾಗೆಯೇ 2ನೇ ಕಾರಣ ಕೇಳುವ ನೋಟೀಸ್‌ಗೆ ಆರೋಪಿತ ಅಧಿಕಾರಿ/ನೌಕರರಿಂದ ವಿವರಣೆ ಪಡೆದ ಒಟ್ಟು 157 ಪ್ರಕರಣಗಳಲ್ಲಿ 109 ಪ್ರಕರಣಗಳಲ್ಲಿ ಮಾತ್ರ ಅಂತಿಮ ಆದೇಶ ಹೊರಡಿಸಿರುವುದು ತಿಳಿದು ಬಂದಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಅಧಿಕಾರವನ್ನು ಕಸಿದುಕೊಂಡ ನಂತರ ಲೋಕಾಯುಕ್ತ ಸಂಸ್ಥೆಯು ಹಲ್ಲು ಕಿತ್ತ ಹಾವಿನಂತಾಗಿದೆ. ಲೋಕಾಯುಕ್ತ ಸಂಸ್ಥೆಗೆ ಪೊಲೀಸ್‌ ಅಧಿಕಾರವನ್ನು ಪುನರ್‌ ಸ್ಥಾಪಿಸಬೇಕು ಎಂದು ಲಂಚಮುಕ್ತ ಕರ್ನಾಟಕ ವೇದಿಕೆ ಮತ್ತು ಕರ್ನಾಟಕ ರಾಷ್ಟ್ರಸಮಿತಿ ಪಕ್ಷವೂ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img