Monday | June 15, 2026 |

ವಿವಾದಕ್ಕೆ ದಾರಿಯಾದ ಕೆಪಿಎಸ್‌ಸಿ ಅಧ್ಯಕ್ಷರ ನೇಮಕ; ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಿತೇ ಸರ್ಕಾರ?

Support THE-FILE

spot_img

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ಕ್ಕೆ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಆಯೋಗದ ಅಧ್ಯಕ್ಷ ಅಥವಾ ಸದಸ್ಯ ಭಾರತ ಸರ್ಕಾರದ ಅಧೀನದಲ್ಲಾಗಲಿ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಕನಿಷ್ಠ ಪಕ್ಷ 10 ವರ್ಷಗಳವರೆಗೆ ಪದಧಾರಣೆ ಮಾಡಿರಬೇಕು ಎಂದು ಸಂವಿಧಾನದ 316ನೇ ವಿಧಿಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಬಿಜೆಪಿ ಸರ್ಕಾರವು ಸಹಕಾರಿ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು  ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರು 10 ವರ್ಷದ ಹಿಂದೆ ರಾಷ್ಟ್ರೀಯ ಸಹಕಾರ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದರು. ಇವರ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು ಎಂದು ಹೊರಡಿಸಿದ್ದ ಆದೇಶವು ಇದೀಗ ದಿಢೀರ್‌ ಎಂದು ಮುನ್ನೆಲೆಗೆ ಬಂದಿದೆ. ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರ ಕಾರ್ಯಕ್ಷಮತೆ ಬಗ್ಗೆ ಸಹಕಾರ ಯೂನಿಯನ್‌ ನಕಾರಾತ್ಮಕ ವರದಿ ನೀಡಿತ್ತು. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಂವಿಧಾನ ವಿರೋಧಿ ನಡೆಯೇ?

ಪ್ರತಿಯೊಂದು ಲೋಕಸೇವಾ ಆಯೋಗದ ಸದಸ್ಯರಲ್ಲಿ ಸಾಧ್ಯವಾಗಬಹುದಾದ ಮಟ್ಟಿಗೆ ಅರ್ಧದಷ್ಟು ಸದಸ್ಯರು, ಅವರು ಅನುಕ್ರಮವಾಗಿ ನೇಮಕಗೊಂಡ ದಿನಾಂಕಗಳಂದು ಭಾರತ ಸರ್ಕಾರದ ಅಧೀನದಲ್ಲಾಗಲಿ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಕನಿಷ್ಠ ಪಕ್ಷ 10 ವರ್ಷಗಳವರೆಗೆ ಪದಧಾರಣೆ ಮಾಡಿರಬೇಕು. ಮತ್ತು ಈ 10 ವರ್ಷಗಳ ಅವಧಿಯನ್ನು ಲೆಕ್ಕ ಹಾಕುವಲ್ಲಿ ಈ ಸಂವಿಧಾನವು ಪ್ರಾರಂಭವಾಗುವುದಕ್ಕೆ ಮುಂಚೆ ಭಾರತ ಸಾಮ್ರಾಟನ ಅಧೀನದಲ್ಲಿ ಅಥವಾ ಒಂದು ಭಾರತೀಯ ಸಂಸ್ಥಾನ ಸರ್ಕಾರದ ಅಧೀನದಲ್ಲಿ ಒಬ್ಬ ವ್ಯಕ್ತಿಯು ಪದಧಾರಣೆ ಮಾಡಿದ್ದ ವ್ಯಕ್ತಿಯನ್ನು ಸೇರಿಸಿಕೊಳ್ಳತಕ್ಕದ್ದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು ಅಧ್ಯಕ್ಷನನ್ನಾಗಿಸಿರುವುದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದೇ ಅರ್ಥೈಯಿಸಲಾಗುತ್ತಿದೆ.

ಎನ್‌ಸಿಯುಐನಲ್ಲಿ(ನ್ಯಾಷನಲ್‌ ಕೋ ಆಪರೇಟೀವ್‌ ಯೂನಿಯನ್‌ ಆಫ್‌ ಇಂಡಿಯಾ)ದ ಗುಲ್ಬರ್ಗಾ ಶಾಖೆಯ ಕಾರ್ಯಕ್ಷೇತ್ರದಲ್ಲಿ ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರು ಎಫ್‌ಜಿಐ ಆಗಿ ಗುತ್ತಿಗೆ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆ ಅವಧಿಯಲ್ಲಿ ಅವರ ಕಾರ್ಯನಿರ್ವಹಣೆ ತೃಪ್ತಿಕರವಾಗಿರಲಿಲ್ಲ ಮತ್ತು ಸಮಯ ಪ್ರಜ್ಞೆ ಹೊಂದಿರಲಿಲ್ಲ. ಹೀಗಾಗಿ ಅವರ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಕ ಅನಿತಾ ಮಂಚಾಡ ಅವರು 2010ರ ಮಾರ್ಚ್‌ 18ರಂದು ಆದೇಶ ಹೊರಡಿಸಿದ್ದರು. ಮತ್ತು ಯಾವುದೇ ಪ್ರಭಾರ ಕಾರ್ಯಭಾರವನ್ನೂ ವಹಿಸಬಾರದು ಎಂದು ಸಲಹೆ ನೀಡಿದ್ದರು ಎಂಬುದು ಆದೇಶದಿಂದ ತಿಳಿದು ಬಂದಿದೆ.

ಲೋಕಸೇವಾ ಆಯೋಗವು ಕೆಎಎಸ್‌ ಹುದ್ದೆಯೂ ಸೇರಿದಂತೆ ಸರ್ಕಾರದ ಇತರೆ ಇಲಾಖೆಗಳಿಗೆ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿಗೆ ಅಧಿಕಾರಿ, ನೌಕರರನ್ನು ಆಯ್ಕೆ ಮಾಡುವ ಪ್ರಾಧಿಕಾರ. ಇಂತಹ ಹುದ್ದೆಗಳಿಗೆ ಆಯ್ಕೆ ಮಾಡುವ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಉನ್ನತ ಅರ್ಹತೆಯುಳ್ಳ ಮತ್ತು ಸರ್ಕಾರದ ಉನ್ನತ ಹುದ್ದೆಯಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವವರನ್ನು ನೇಮಿಸಬೇಕಿತ್ತು.

ಆದರೆ ಬಿಜೆಪಿ ಸರ್ಕಾರವು ಸಹಕಾರಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದವರನ್ನು ಆಯೋಗದ ಅಧ್ಯಕ್ಷನ್ನಾಗಿಸಿ ನೇಮಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಹಿಂದಿನ ಸಂಸ್ಥೆಯಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡದ ಮತ್ತು ಸಮಯ ಪ್ರಜ್ಞೆ ಹೊಂದಿಲ್ಲ ಎಂದು ನಕಾರಾತ್ಮಕ ವರದಿ ನೀಡಿದ್ದ ಸಂಸ್ಥೆಯು ಹೊರಡಿಸಿದ್ದ ಆದೇಶ ಮತ್ತು ಅವರ ಸೇವಾ ಹಿನ್ನೆಲೆ ಪರಿಶೀಲಿಸದೆಯೇ ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿ ಬಂದಿವೆ. ವಿಶೇಷವೆಂದರೆ ಶಿವಶಂಕರಪ್ಪ ಸಾಹುಕಾರ್‌ ಅವರು ಕಳೆದ ಒಂದೂವರೆ ವರ್ಷದ ಮೊದಲು ಆಯೋಗಕ್ಕೆ ಸದಸ್ಯರಾಗಿ ನೇಮಕವಾಗಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img