Monday | June 15, 2026 |

ಕೆಎಸ್‌ಆರ್‌ಟಿಸಿಗೆ 220 ಕೋಟಿ ಸಾಲ; 3 ತಿಂಗಳಾದರೂ ನೆರವಿಗೆ ಬಾರದ ಹಣಕಾಸು ಸಂಸ್ಥೆಗಳು

Support THE-FILE

spot_img

ಬೆಂಗಳೂರು; ಕೊರೋನಾ ಮತ್ತು ನೌಕರರ ಮುಷ್ಕರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸಾಲಕ್ಕಾಗಿ ಕೈ ಚಾಚಿದರೂ ಯಾವ ಹಣಕಾಸು ಸಂಸ್ಥೆಯೂ ಸಾಲದ ನೆರವು ನೀಡಲು ಮುಂದೆ ಬಂದಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಎರಡನೇ ಬಾರಿ ಮರು ಟೆಂಡರ್‌ ಆಹ್ವಾನಿಸಿದೆ.

ಕೊರೊನಾ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುವ ಮೊದಲೇ ನೌಕರರು ಕಳೆದ 10 ದಿನಗಳಿಂದ ನಡೆಸುತ್ತಿರುವ ಮುಷ್ಕರದಿಂದಾಗಿ 170 ಕೋಟಿಗೂ ಅಧಿಕ ನಷ್ಟವನ್ನು ಅನುಭವಿಸಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ನಷ್ಟದಿಂದ ಪಾರಾಗಲು 220 ಕೋಟಿ ರು.ಗಳನ್ನು ಸಾಲ ಎತ್ತಲು ಮುಂದಾಗಿದ್ದ ಕೆಎಸ್‌ಆರ್‌ಟಿಸಿ ಇದೀಗ 2021ರ ಏಪ್ರಿಲ್‌ 17ರಂದು ಮರು ಟೆಂಡರ್‌ ಆಹ್ವಾನಿಸಿದೆ.

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹಿಂಬಾಕಿ ಪಾವತಿ ಮಾಡುವ ಸಲುವಾಗಿ 220 ಕೋಟಿ ರು.ಗಳನ್ನು ಅವಧಿ ಸಾಲದ ರೂಪದಲ್ಲಿ ಪಡೆಯುಲು ಉದ್ದೇಶಿಸಿದೆ,’ ಎಂದು ಆಸಕ್ತಿ ವ್ಯಕ್ತಪಡಿಸುವ ಮರು ಟೆಂಡರ್‌ನಲ್ಲಿ ವಿವರಿಸಿದೆ.

ಪ್ರಸ್ತಾಪಿತ ಸಾಲದ ಮೊತ್ತವನ್ನು ಒಂದೇ ಕಂತಿನಲ್ಲಿ ಪಡೆಯುವುದು, ಸಾಲದ ಮರು ಪಾವತಿಯ ಅವಧಿಯನ್ನು 7 ವರ್ಷಗಳಿಗೆ ನಿಗದಿಪಡಿಸುವ ಷರತ್ತನ್ನೂ ವಿಧಿಸಿರುವುದು ಟೆಂಡರ್‌ ದಾಖಲೆಯಿಂದ ತಿಳಿದು ಬಂದಿದೆ.

ಡೀಸೆಲ್‌ ಬೆಲೆ ಏರಿಕೆ, ಸಿಬ್ಬಂದಿ ವೇತನ ಹೆಚ್ಚಳ, ಕೊರೋನಾ ಸೋಂಕಿನ ಕಾರಣದಿಂದ ಪ್ರಯಾಣಿಕರ ಕೊರತೆ ಸೇರಿ ಹಲವು ಕಾರಣಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳನ್ನೂ ನಷ್ಟಕ್ಕೆ ತಳ್ಳಿವೆ. ಇದನ್ನು ಸರಿದೂಗಿಸಲು ಅಧಿಕೃತ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಆಸಕ್ತಿ ವ್ಯಕ್ತಪಡಿಸುವ ಟೆಂಡರ್‌ ಆಹ್ವಾನಿಸುತ್ತಲೇ ಇದೆ. ಆದರೆ ಈವರೆವಿಗೂ ಯಾವ ಹಣಕಾಸು ಸಂಸ್ಥೆಯೂ ಸಾಲ ನೀಡಲು ಮುಂದಾಗಿಲ್ಲ.

ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಮತ್ತು ಮುಂದೊಡ್ಡಿರುವ ಬೇಡಿಕೆಗಳನ್ನು ಬಗೆಹರಿಸುವಲ್ಲಿ ಸಚಿವ ಲಕ್ಷ್ಮಣ ಸವದಿ  ಅವರು ವಿಫಲರಾಗಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ ಹಣಕಾಸು ಸಂಸ್ಥೆಗಳು ಸಾಲ ನೀಡಲು ಮುಂದೆ ಬಾರದಿರುವುದು ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಳ್ಳುವ ಲಕ್ಷಣಗಳು ಗೋಚರಿಸಲಾರಂಭಿಸಿವೆ.

ಕಳೆದ ಎರಡು ತಿಂಗಳ ಹಿಂದೆ ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಎಂಟಿಸಿ ಕೂಡ 230 ಕೋಟಿ ರು. ಸಾಲ ಪಡೆಯಲು ಟೆಂಡರ್‌ ಆಹ್ವಾನಿಸಿತ್ತು. ಅದಕ್ಕಾಗಿ ಬಿಎಂಟಿಸಿ ಒಡೆತನದ ಬಸ್ಸುಗಳು, ಭೂಮಿ ಮತ್ತು ಕಟ್ಟಡಗಳನ್ನು ಅಡಮಾನ ಇಡಲು ಮುಂದಾಗಿದ್ದನ್ನು ಸ್ಮರಿಸಬಹುದು.

ನೌಕರರ ಮುಷ್ಕರದಿಂದ ಜರ್ಜರಿತವಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸಾಲಕ್ಕಾಗಿ ಕಳೆದ 2 ತಿಂಗಳುಗಳಿಂದ ಪರದಾಡುತ್ತಿದ್ದರೂ ಸಾಲದ ನೆರವು ಸಿಗದಿರುವುದು ಇನ್ನಷ್ಟು ಸಂಕಷ್ಟವನ್ನು ಎದುರಿಸುವ ಸಾಧ್ಯತೆಗಳಿವೆ.

ನಾಲ್ಕು ರಸ್ತೆ ಸಾರಿಗೆ ನಿಗಮಗಳು ಡಿಸೇಲ್‌ಗಾಗಿ ವಾರ್ಷಿಕ ಸುಮಾರು 4,821.65 ಕೋಟಿ, ನಿಗಮಗಳ ನೌಕರರ ವೇತನ ಬಾಬ್ತಿಗಾಗಿ 4,536.80 ಕೋಟಿ, ಸಾರಿಗೆ ಆದಾಯ ಮತ್ತು ಹಾಜರಾತಿಯ ಆಧಾರದ ಮೇಲೆ ಚಾಲಕ ನಿರ್ವಾಹಕರಿಗೆ ಪ್ರೋತ್ಸಾಹ ಧನ ನೀಡುವುದು ಮತ್ತು ನಗರ, ಸಬ್‌ಅರ್ಬನ್‌ ಸಾರಿಗೆ ಬಸ್‌ಗಳ ಸಾರಿಗೆ ಆದಾಯದ ಶೇ.3ರಷ್ಟು ಮತ್ತು ಇತರೆ ಎಲ್ಲಾ ಸೇವೆಗಳ ಸಾರಿಗೆ ಆದಾಯದ ಶೇ.2ರಷ್ಟನ್ನು ಪ್ರೋತ್ಸಾಹ ಧನ ರೂಪದಲ್ಲಿ ನೀಡುವುದು ಸೇರಿದಂತೆ ಒಟ್ಟು 4 ನಾಲ್ಕು ನಿಗಮಗಳು ವಾರ್ಷಿಕ 169.78 ಕೋಟಿ ರು.ಗಳನ್ನು ಭರಿಸುತ್ತಿದೆ.

ಇದಲ್ಲದೆ ಹೆಚ್ಚುವರಿ ಕರ್ತವ್ಯಕ್ಕೆ ಹೆಚ್ಚುವರಿ ವೇತನ ನೀಡುವ ಕಾಯ್ದೆಯನ್ವಯ 4 ಸಾರಿಗೆ ನಿಗಮಗಳು ಸೇರಿದಂತೆ ವಾರ್ಷಿಕ 254.80 ಕೋಟಿಗಳನ್ನು ಭರಿಸುತ್ತಿದೆ. ಹಾಗೆಯೇ ನಾಲ್ಕೂ ನಿಗಮಗಳ ವಾರ್ಷಿಕ ಸಾರಿಗೆ ಆದಾಯ ಸುಮಾರು 6,205 ಕೋಟಿ ರು.ಗಳಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img