Sunday | June 14, 2026 |

ಮಾಸ್ಕ್‌ ಧರಿಸದ ಶ್ರೀರಾಮುಲುರಿಂದ ಮಾರ್ಗಸೂಚಿ ಉಲ್ಲಂಘನೆ; ಪುಕ್ಕುಲತನ ಮೆರೆಯಿತೇ ಜಿಲ್ಲಾಡಳಿತ?

Support THE-FILE

spot_img

ಬೆಂಗಳೂರು; ಕೋವಿಡ್‌ 2ನೇ ಅಲೆಯ ತೀವ್ರತೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದ್ದ ಆರೋಗ್ಯ ಇಲಾಖೆಯ ಸಚಿವರಾಗಿದ್ದ ಹಾಲಿ ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಮಾಸ್ಕ್‌ ಧರಿಸದೆಯೇ ಬಳ್ಳಾರಿಯ ಮಹಾನಗರಪಾಲಿಕೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಕೋವಿಡ್‌ ಮಾರ್ಗಸೂಚಿಗಳನ್ನು ಶ್ರೀರಾಮುಲು ಉಲ್ಲಂಘಿಸುತ್ತಿದ್ದರೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಮೌನ ವಹಿಸುವ ಮೂಲಕ ಕರ್ತವ್ಯಲೋಪ ಆರೋಪಕ್ಕೆ ಗುರಿಯಾಗಿದ್ದಾರೆ.

ಮಾಸ್ಕ್‌ ಧರಿಸದೆಯೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವುದು ಅವರ ಅಧಿಕೃತ ಟ್ವಿಟರ್‌ ಖಾತೆಯಿಂದ ತಿಳಿದು ಬಂದಿದೆ. ಮಾಸ್ಕ್‌ ಧರಿಸದ ಸಾಮಾನ್ಯರಿಂದ ದಂಡ ವಸೂಲಿ ಮಾಡುತ್ತಿರುವ ಬಳ್ಳಾರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಸಚಿವ ಶ್ರೀರಾಮುಲು ಅವರು ಮಾಸ್ಕ್‌ ಧರಿಸದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರೂ ಯಾವುದೇ ಕ್ರಮ ವಹಿಸದಿರುವುದು ಹಲವರು ಆಕ್ಷೇಪ ಎತ್ತಿದ್ದಾರೆ.

ಕೋವಿಡ್‌ ಹರಡುವಿಕೆ ಆರಂಭವಾದ ವರ್ಷದಲ್ಲಿ ಶ್ರೀರಾಮುಲು ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ಕೋವಿಡ್‌ ನಿರ್ವಹಣೆಯಲ್ಲಿ ಅಸಮರ್ಥರಾಗಿದ್ದ ಕಾರಣಕ್ಕೆ ಅವರನ್ನು ಆರೋಗ್ಯ ಇಲಾಖೆಯಿಂದ ವಿಮುಕ್ತಗೊಳಿಸಲಾಗಿತ್ತು. ಆದರೂ ತವರು ಜಿಲ್ಲೆಯಲ್ಲಿ ಕೋವಿಡ್‌ ನ ಮಾರ್ಗಸೂಚಿ ಉಲ್ಲಂಘಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತು ಕೋವಿಡ್‌ ಮಾರ್ಗಸೂಚಿಗಳಿಗೆ ಸವಾಲು ಎಸೆದಿದ್ದಾರೆ.

ಕೋವಿಡ್‌-19 ಸೋಂಕಿತ ಪ್ರಕರಣಗಳು ಬಳ್ಳಾರಿ ಜಿಲ್ಲೆಯಲ್ಲಿ 2021ರ ಏಪ್ರಿಲ್‌ 21ರ ಅಂತ್ಯಕ್ಕೆ 792 ಪ್ರಕರಣಗಳು ಒಂದೇ ದಿನದಲ್ಲಿ ದಾಖಲಾಗಿವೆ. ಈ ಪೈಕಿ ಬಳ್ಳಾರಿ ನಗರವೊಂದರಲ್ಲೇ 432 ಪ್ರಕರಣಗಳು ಕೋವಿಡ್‌ ದೃಢಪಟ್ಟಿವೆ. ಅಲ್ಲದೆ ನಗರದಲ್ಲಿ 1,386 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆವಿಗೆ ಒಟ್ಟು 45,537 ಪ್ರಕರಣಗಳು ಕೋವಿಡ್‌ ದೃಢಪಟ್ಟಿವೆ. ಅಲ್ಲದೆ ಇನ್ನು 3,023 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 626 ಮಂದಿ ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ.

ಕೊರೊನಾ ಸೊಂಕು ಕುರಿತು ನಿರ್ಲಕ್ಷ್ಯ ಮನೋಭಾವ ತಾಳಿ ಮಾಸ್ಕ್ ಧರಿಸದೇ ಬಳ್ಳಾರಿ ನಗರದಲ್ಲಿ ಅಡ್ಡಾಡುತ್ತಿದ್ದ ನಾಗರಿಕರಿಗೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ನೇತೃತ್ವದ ತಂಡ ಮೈ ಚಳಿ ಬಿಡಿಸಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಾಸ್ಕ್ ಧರಿಸದವರನ್ನು ಗುರಿಯಾಗಿಸಿಕೊಂಡು ಭೇಟೆಗಿಳಿದ ಪೊಲೀಸ್ ಪಡೆ ನಗರದಲ್ಲಿಯೇ ಸಂಜೆ ಎರಡು ಗಂಟೆಗಳಲ್ಲಿಯೇ 50 ಸಾವಿರ ರೂ. ದಂಡ ವಸೂಲಿ ಮಾಡಿದೆ ಎಂದು ಅಂಕಿಅಂಶಗಳನ್ನು ಒದಗಿಸಿದ್ದಾರೆ. ಆದರೆ ಶ್ರೀರಾಮುಲು ಅವರು ಮಾಸ್ಕ್‌ ಧರಿಸದೇ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂಬ ಪ್ರಶ್ನೆಗಳೂ ಕೇಳಿ ಬಂದಿವೆ.

ಎಲ್ಲಾ ನೀತಿ ನಿಯಮಗಳು ಜನಸಾಮಾನ್ಯರಿಗೆ ಮಾತ್ರ. ಸ್ವಾಯತ್ತ ಚುನಾವಣೆ ಆಯೋಗವಾಗಲಿ, ಡಿಸಿ ಮತ್ತು ಎಸ್ಪಿ ಸೇರಿದಂತೆ ಸರ್ಕಾರದ ಯಾವುದೇ ಅಧಿಕಾರಿಗಳಾಗಲಿ ಸಚಿವ ಶ್ರೀರಾಮುಲು ಸೇರಿದಂತೆ ಯಾವುದೇ ಸಚಿವ, ಶಾಸಕರ ಮೇಲೆ ಕ್ರಮ ಕೈಗೊಳ್ಳಲಾಗದ ಅಸಮರ್ಥರು ಮತ್ತು ಪುಕ್ಕಲರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜಕಾರಣಿಗಳಷ್ಟೇ ಅಲ್ಲ ಅಧಿಕಾರಿಗಳೇ ನೇರ ಕಾರಣ. ಜನ ತಿರುಗಿಬೀಳುವ ದಿನಗಳು ದೂರವಿಲ್ಲ.

ರವಿಕೃಷ್ಣಾರೆಡ್ಡಿ, ರಾಜ್ಯಾಧ್ಯಕ್ಷರು,ಕರ್ನಾಟಕ ರಾಷ್ಟ್ರಸಮಿತಿ

ಜಿಲ್ಲೆಯಲ್ಲಿ ಕೋವಿಡ್ ಸೊಂಕಿನ ಪ್ರಮಾಣ ದಿನೇದಿನೇ‌ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಪಾಲನೆ ಹಾಗೂ ಸ್ಯಾನಿಟೈಸರ್ ಬಳಕೆ ಅತ್ಯಂತ ಅನಿವಾರ್ಯವಾಗಿದೆ. ಆದ್ರೂ ಜನರು ಇದರ ಗಂಭೀರತೆಯನ್ನು ಅರಿವು ಮಾಡಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ‌ವ್ಯಕ್ತಪಡಿಸುತ್ತಿರುವ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮಾಸ್ಕ್‌ ಧರಿಸದ ಸಚಿವ ಶ್ರೀರಾಮುಲು ಅವರಿಗೇಕೆ ದಂಡ ವಿಧಿಸುತ್ತಿಲ್ಲ ಮತ್ತು ಮಾರ್ಗಸೂಚಿ ಉಲ್ಲಂಘಿಸಿದ ಕಾರಣಕ್ಕೆ ಅವರ ವಿರುದ್ಧ ಕ್ರಮವನ್ನೇಕೆ ಜರುಗಿಸುತ್ತಿಲ್ಲ ಎಂದು ಬಳ್ಳಾರಿ ನಾಗರಿಕರು ಪ್ರಶ್ನಿಸುತ್ತಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img