Saturday | June 20, 2026 |

ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ

Support THE-FILE

spot_img

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರಿಗೂ ಸಿ ಡಿ ಭಯ ಕಾಡುತ್ತಿದೆಯೇ…?

ಇಂತಹುದೊಂದು ಗಂಭೀರ ಪ್ರಶ್ನೆ ಸದ್ಯ ರಾಜಕೀಯ ಪಕ್ಷಗಳ ಪಡಸಾಲೆಗಳಲ್ಲಿ ಬಿಸಿ ಬಿಸಿ ಚರ್ಚೆಗೆ ನಾಂದಿ ಹಾಡಿದೆ. ಕಾರಣ, ಮುರುಗೇಶ್ ಆರ್. ನಿರಾಣಿ ಅವರು ಕಳೆದ ವರ್ಷ ಅಂದರೆ 2020ರಲ್ಲಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಗೆ ಒಂದರ ಹಿಂದೆ ಇನ್ನೊಂದರಂತೆ ಎರಡು ಅಸಲು ದಾವೆಗಳನ್ನು ಸಲ್ಲಿಸಿ ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ತಡೆ ಆದೇಶ ಪಡೆದಿರುವುದು ಈಗ ಮುನ್ನೆಲೆಗೆ ಬಂದಿದೆ.

ಸದರಿ ಅಸಲು ದಾವೆಗಳಲ್ಲಿ ಫಿರ್ಯಾದುದಾರರಾದ ನಿರಾಣಿ ಅವರು, “ನನ್ನ ವಿರುದ್ಧ ಅಥವಾ ನನ್ನ ಕುಟುಂಬದ ಸದಸ್ಯರ ವಿರುದ್ಧ ಅಥವಾ ನನಗೆ ಸಂಬಂಧಿಸಿದ ಆಪ್ತರ ವಿರುದ್ಧವಾಗಿ ಯಾವುದೇ ಸುದ್ದಿಗಳನ್ನು ಪ್ರಕಟಿಸುವ, ಹರಿಬಿಡುವ ಮುನ್ನ ಸತ್ಯಶೋಧನೆ ಮಾಡಬೇಕು. ಚಾರಿತ್ರ್ಯವಧೆ ಮಾಡುವಂತಹ ಅಥವಾ ಮಾನಹಾನಿ ಉಂಟಾಗಬಹುದಾದ ಇಲ್ಲವೇ ನಕಾರಾತ್ಮಕ ರೀತಿಯಲ್ಲಿ ಅಥವಾ ಕಟುವಾದ ಅಥವಾ ಪೂರ್ವ ಕಲ್ಪಿತ ಭಾವನೆಗಳಲ್ಲಿ ಬರೆದ ಸುದ್ದಿಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಇಲ್ಲವೇ ಹಬ್ಬಿಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕು” ಎಂದು ನ್ಯಾಯಾಲಯಕ್ಕೆ ಕೋರಿದ್ದರು.

ಈ ಕುರಿತಂತೆ 2020 ರ ಡಿಸೆಂಬರ್ 1ರಂದು ಸಲ್ಲಿಸಲಾಗಿರುವ ಅಸಲು ದಾವೆಗಳ ಸಂಖ್ಯೆ 6056/2020 ಮತ್ತು 3783/2020ರಲ್ಲಿ ಮಾಡಲಾಗಿರುವ ಮಧ್ಯಂತರ ಮನವಿಗಳನ್ನು ಸಿಟಿ ಸಿವಿಲ್ ಕೋರ್ಟ್ ಸೆಷನ್ಸ್ ನ್ಯಾಯಾಧೀಶ ರಾಜೇಶ್ವರ ಅವರು ಮಾನ್ಯ ಮಾಡಿದ್ದಾರೆ.

ಸುದ್ದಿ ಮಾಧ್ಯಮಗಳು ನಿರಾಣಿ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ಈ ಸಂಬಂಧ 2020ರ ಡಿಸೆಂಬರ್ 4ರಂದು ನೀಡಲಾಗಿರುವ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದಲ್ಲಿ “ಟೈಂಸ್ ನೌ, ಸಿ ಎನ್ ಎನ್ – ಐ ಬಿ ಎನ್, ಎ ಎನ್ ಐ, ಸ್ಟಾರ್ ನ್ಯೂಸ್, ಟುಡೇ, ಆಜ್ ತಕ್, ರಿಪಬ್ಲಿಕ್ ಟಿ.ವಿ ಸೇರಿದಂತೆ ನಾಡಿನ ಪ್ರಜಾವಾಣಿ, ಕನ್ನಡಪ್ರಭ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಹಿಂದೂಸ್ಥಾನ್ ಟೈಂಸ್ ನಂತಹ ಪ್ರಮುಖ ದೈನಿಕಗಳನ್ನು ಒಳಗೊಂಡಂತೆ ಒಟ್ಟು 39 ಪ್ರತಿವಾದಿಗಳು ನಿರಾಣಿ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ, ಇಲ್ಲವೇ ಬಿತ್ತರಿಸದಂತೆ ತಾತ್ಕಾಲಿಕ ತಡೆ ಆದೇಶ ನೀಡಲಾಗಿದೆ. ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಲು ಅದೇಶಿಸಲಾಗಿದೆ.

ಅಸಲು ದಾವೆ ಸಂಖ್ಯೆ 6056/2020 ಬಿಜಾಪುರ ಜಿಲ್ಲೆಯ, “ಶ್ರೀ ಮುರುಗೇಶ್ ನಿರಾಣಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್ ಗೆ ಸಂಬಂಧಿಸಿದ್ದಾದರೆ ಮತ್ತೊಂದು ಅಸಲು ದಾವೆ ಸಂಖ್ಯೆ 3783/2020, ಹಿಂದೂ ದೇವತೆಗಳನ್ನು ತುಚ್ಛವಾಗಿ ನಿ‌ಂದಿಸಿದ ಸಂದೇಶವು, “ಮುರುಗೇಶ್ ನಿರಾಣಿ ಗ್ರೂಪ್” ಸದಸ್ಯರಿಗೆ ಫಾರ್ವರ್ಡ್ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

“ಅಸಲಿಗೆ ಈ ಎರಡೂ ದಾವೆಗಳಲ್ಲಿ ವಿವರಿಸಲಾದ ಅಂಶಗಳು ಅತ್ಯಂತ ಸಾಮಾನ್ಯ ಸಂಗತಿಗಳು ಎನಿಸಿದರೂ ಈ ಕಾರಣಗಳನ್ನೇ ಮುಂದು ಮಾಡಿಕೊಂಡಿರುವ ನಿರಾಣಿ ತಮ್ಮ ತೇಜೋವಧೆ ಆಗಬಹುದಾದ ಯಾವುದೇ ಸುದ್ದಿ ಇಲ್ಲವೇ ಸಿ.ಡಿಗಳು ಬಹಿರಂಗವಾಗದಂತೆ ನೋಡಿಕೊಳ್ಳುವ ಕಳ್ಳ ದಾರಿ ತುಳಿದಿದ್ದಾರೆ” ಎಂದು ಅಂದಾಜಿಸಲಾಗಿದೆ.

“ಬದಲಾಗುತ್ತಿರುವ ರಾಜ್ಯ ರಾಜಕೀಯ ಬೆಳವಣಿಗೆಗಳ ನಡುವೆ ತಮ್ಮ ರಾಜಕೀಯ ಭವಿಷ್ಯದ ಉಳಿವಿಗಾಗಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಮುಖ ಸುದ್ದಿ ಮಾಧ್ಯಮಗಳನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ” ಎಂದು ಹೇಳಲಾಗಿದೆ.

“ಮಾಧ್ಯಮಗಳು ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ಜಾಣತನದಲ್ಲಿ ತಡೆ ಆದೇಶ ಪಡೆದುಕೊಂಡಿರುವ ನಿರಾಣಿ, ತಾವು ನ್ಯಾಯಾಲಯದ ಮೆಟ್ಟಿಲೇರಿರುವ ಈ ಸುದ್ದಿ ಹೆಚ್ಚು ಬಹಿರಂಗವಾಗದಂತೆಯೂ ನೋಡಿಕೊಂಡಿದ್ದಾರೆ” ಎಂದೇ ಈಗ ವಿಶ್ಲೇಷಿಸಲಾಗುತ್ತಿದೆ.

ಅಷ್ಟಕ್ಕೂ ನಿರಾಣಿ ಅವರು ಈ ಸಾಧಾರಣ ಪ್ರಕರಣಗಳಲ್ಲಿ ರಾಷ್ಟ್ರೀಯ ಮಟ್ಟದ ಇಂಗ್ಲಿಷ್ ಟಿ.ವಿ ಚಾನೆಲ್ ಗಳು ಹಾಗೂ ಪ್ರಮುಖ ಇಂಗ್ಲಿಷ್ ದೈನಿಕಗಳನ್ನು ಪ್ರತಿವಾದಿಗಳನ್ನಾಗಿ ಮಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಯಾವುದೇ ಮಾನಹಾನಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈಗಾಗಲೇ ಮಾನ್ಯ ಮಾಡಿರುವ ಬೆನ್ನಲ್ಲೇ ಇದೀಗ ನಿರಾಣಿ ಅವರ ನಡೆ ಹಲವು ಸಂದೇಹಗಳಿಗೆ ಎಡೆ ಮಾಡಿಕೊಟ್ಟಿದೆ.

ಸಿ.ಡಿ ಪ್ರಕರಣಗಳ ಸರಮಾಲೆ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎಂದು ಹೇಳಲಾದ ಸಿ.ಡಿ ಬಿಡುಗಡೆ ನಂತರ, ಯಡಿಯೂರಪ್ಪ ಸಂಪುಟದ ಆರು ಸಚಿವರು ತಮಗೆ ಸಂಬಂಧಿಸಿದ ಮಾನಹಾನಿಕರ ಸುದ್ದಿ ಪ್ರಸಾರವಾಗುವ ಭೀತಿಯಿಂದ, ಅಂತಹ ಸುದ್ದಿ ಪ್ರಸಾರವಾಗುವ ಮೊದಲೇ ನಿರ್ಬಂಧ ವಿಧಿಸುವಂತೆ ಕೋರಿ ಅರ್ಜಿ ಸಲ್ಲಿಸಿ ತಡೆ ಆದೇಶ ಪಡೆದುಕೊಂಡಿರುವುದು ಗಮನಾರ್ಹ.

ಅಂತೆಯೇ ಕೇಂದ್ರ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ಅವರೂ ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ‌ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆ ಅದೇಶ ಪಡೆದದ್ದೂ ಮತ್ತು ಅದರ ಸುತ್ತ ಹಬ್ಬಿದ ಹಲವು ಅನುಮಾನಗಳ ಬೆನ್ನಲ್ಲೇ ಸಚಿವ ಸ್ಥಾನದಿಂದ ಕೆಳಗಿಳಿದಿರುವುದೂ ಈಗ ಇತಿಹಾಸ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img