Sunday | September 13, 2026 |

ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?

Support THE-FILE

spot_img

ಬೆಂಗಳೂರು; ಒತ್ತುವರಿ ಪ್ರಕರಣದಲ್ಲಿ ಕಳೆದ 16 ವರ್ಷಗಳ ಹಿಂದೆಯೇ ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಸಂಸ್ಥೆಯ ಕಟ್ಟಡ ಸೇರಿದಂತೆ ಒಟ್ಟು 37 ಕೋಟಿ ಬೆಲೆಬಾಳುವ 3.20 ಎಕರೆ ಭೂಮಿಯನ್ನು ವಶಕ್ಕೆ ಪಡೆದಿದೆ. ಸಂಘ ಪರಿವಾರದ ಒತ್ತಡವೇ ಇದಕ್ಕೆ ಕಾರಣ ಎಂಬ ಮಾತು ಕೇಳಿ ಬಂದಿದೆ.

ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಯಾವುದೇ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ವರದಿ ನೀಡಿತ್ತು. ಆದರೆ ಆ ವರದಿಯನ್ನು ಬದಿಗೆ ಸರಿಸುವ ಮೂಲಕ 3.20 ಎಕರೆಯನ್ನು ವಶಕ್ಕೆ ಪಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಪ್ರಕರಣದ ಬಗ್ಗೆ ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ವಿಧಾನಪರಿಷತ್‌ನ ಸದಸ್ಯ ಎನ್‌ ರವಿಕುಮಾರ್‌ ಅವರು ಕಂದಾಯ ಇಲಾಖೆಯ ಕದ ತಟ್ಟಿದ್ದರು. ಒತ್ತುವರಿ ಆರೋಪದಿಂದ ಮುಕ್ತಗೊಂಡಿರುವ ಬಗ್ಗೆ ಸರ್ಕಾರದಲ್ಲಿಯೇ ದಾಖಲೆ, ವರದಿಗಳಿದ್ದರೂ ಎನ್‌ ರವಿಕುಮಾರ್‌ ಅವರು ವಿಧಾನಪರಿಷತ್‌ ಅಧಿವೇಶನದಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದರು.

ಅಲ್ಲದೆ ‘ಸುಳ್ಳು ದಾಖಲೆ ಹಾಗೂ ತಪ್ಪು ಮಾಹಿತಿ ನೀಡಿ ಪ್ರಾರಂಭಿಸಲಾದ ಕಾಲೇಜಿನ ಅನುಮತಿ ಹಿಂಪಡೆಯಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ,’ ಎಂದು ಸದನದಲ್ಲಿ ಪ್ರಶ್ನಿಸಿದ್ದರು. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಅಶ್ವಥ್‌ನಾರಾಯಣ್‌ ಅವರು ಈ ಸಂಸ್ಥೆಯು ಒತ್ತುವರಿ ಮಾಡಿಲ್ಲ ಎಂದು ಉತ್ತರಿಸಿದ್ದರು.

ತನಿಖಾ ವರದಿ ಎತ್ತಿ ಹಿಡಿದಿದ್ದ ಅಶ್ವಥ್‌ನಾರಾಯಣ್‌

ಒತ್ತುವರಿ ಮಾಡಿಕೊಂಡಿರುವ ಆರೋಪ ಸಂಬಂಧ ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಸದನದಲ್ಲಿ ಕೇಳಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಅಶ್ವಥ್‌ನಾರಾಯಣ್‌ ಅವರು ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವೂ ಸ್ಥಳ ಮತ್ತು ದಾಖಲೆಗಳ ಪರಿಶೀಲನೆ ವರದಿಯಲ್ಲಿ ಭೂಮಿ ಒತ್ತುವರಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯನ್ನೇ ಎತ್ತಿ ಹಿಡಿದಿದ್ದರು. ಈ ವರದಿಯನ್ನಾಧರಿಸಿ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸಂಸ್ಥೆಯು ಯಾವುದೇ ಒತ್ತುವರಿ ಮಾಡಿಲ್ಲ ಎಂದು ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲೇ ಲಿಖಿತ ಉತ್ತರ ನೀಡಿದ್ದರು.

ಈ ಉತ್ತರದಿಂದ ಸಮಾಧಾನಗೊಳ್ಳದ ಎನ್‌ ರವಿಕುಮಾರ್‌ ಅವರು ಕಂದಾಯ ಇಲಾಖೆಯ ಕದ ತಟ್ಟಿದ್ದರು. ಆ ವೇಳೆಯಲ್ಲಿ ಕಂದಾಯ ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಲ್ಲಿದ್ದ ವರದಿಯನ್ನು ತಳ್ಳಿ ಹಾಕಿತ್ತು.

ಒತ್ತುವರಿ ಎಂದಿದ್ದ ಕಂದಾಯ ಇಲಾಖೆ

ವಿಶೇಷವೆಂದರೆ ಈ ಪ್ರಕರಣದಲ್ಲಿ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ವರದಿಯನ್ನು ಕಂದಾಯ ಇಲಾಖೆಯು ತಳ್ಳಿ ಹಾಕಿತ್ತು. ‘ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ಹುಳಿಮಾವು ಗ್ರಾಮದ ಸರ್ವೆ ನಂಬರ್‌ 63ರಲ್ಲಿ 5 ಎಕರೆ ಜಾಗವನ್ನು ಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್‌ ನ್ಯಾಯಾಲಯದ ಆದೇಶದ ಮೇರೆಗೆ 2009ರ ಜುಲೈ 25ರಂದು ಆದೇಶಿಸಿದೆ. 2016ರ ಅಕ್ಟೋಬರ್‌ 1ರಂದು ಒತ್ತುವರಿ ಜಾಗವನ್ನು ತೆರವುಗೊಳಿಸಲಾಗಿದೆ,’ ಎಂದು ಉತ್ತರಿಸಿತ್ತು.

ಒತ್ತುವರಿ ತೆರವುಗೊಳಿಸಲು 2009ರಲ್ಲಿ ನ್ಯಾಯಾಲಯ ಆದೇಶಿಸಿದ್ದರೆ 2016ರಲ್ಲಿ ತೆರವುಗೊಳಿಸಲಾಗಿದೆ ಎಂದು ಕಂದಾಯ ಇಲಾಖೆ ಹೇಳುತ್ತಿದೆ. ಆದರೆ ಶಿಕ್ಷಣ ಇಲಾಖೆಯ ತಜ್ಞರ ಸಮಿತಿಯು 2004ರ ಆಗಸ್ಟ್‌ 16ರಂದು ಸರ್ಕಾರಕ್ಕೆ ನೀಡಿದ್ದ ಸ್ಥಳ ತನಿಖಾ ವರದಿಯಲ್ಲಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ಇರಲಿಲ್ಲ.

ಆದರೂ ಸರ್ಕಾರದ ಆದೇಶದಂತೆ ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಟ್ಟಡ ಸೇರಿದಂತೆ ಒಟ್ಟು 3.20 ಎಕರೆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದಿದೆ. ಬೇಗೂರು ಹೋಬಳಿಯ ಹುಳಿಮಾವು ಗ್ರಾಮದ ಸರ್ವೇ ನಂ.63 ರಲ್ಲಿ ಸುಮಾರು ರೂ. 37 ಕೋಟಿ ಬೆಲೆಬಾಳುವ ಆಸ್ತಿ ಇದಾಗಿದೆ. ಸರ್ಕಾರದ ಆದೇಶದಂತೆ ಜಾರಿದಳದ ವಿಶೇಷ ಜಿಲ್ಲಾಧಿಕಾರಿ ದುರ್ಗಾಶ್ರೀ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಾ ಶಿವಣ್ಣ, ತಹಸೀಲ್ದಾರ್ ರಾಮಲಕ್ಷ್ಮಯ್ಯ ಅವರ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು, ಶಿಕ್ಷಣ ಸಂಸ್ಥೆಯನ್ನು ನಡೆಸಿದ್ದಲ್ಲದೇ, ಸಂಸ್ಥೆಯು ಈ ಹಿಂದೆ ಜಮೀನನ್ನು ಮಂಜೂರಿ ಮಾಡಿಕೊಡಲು ಕೋರಿ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸುತ್ತಾ ಬಂದಿತ್ತು. ಈ ಮನವಿಗಳನ್ನು 2010 ರಲ್ಲೆ ತಿರಸ್ಕರಿಸಿದ್ದು, ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಸೂಚಿಸಿತ್ತು ಎಂದು ಜಾರಿ ದಳ ಹೇಳುತ್ತಿದೆ.

ಸಂಸ್ಥೆಯು ವಿವಿಧ ನ್ಯಾಯಾಲಯಗಳಲ್ಲಿ ಈ ಕುರಿತು ಮೇಲ್ಮನವಿ ಸಲ್ಲಿಸಿ ಅವುಗಳನ್ನು ನ್ಯಾಯಾಲಯದಿಂದ ತಿರಸ್ಕರಿಸಲಾಗಿತ್ತು. ನಂತರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯನ್ನೂ ಕೂಡ ತಿರಸ್ಕರಿಸಲಾಗಿತ್ತು ಎಂದೂ ಸರ್ಕಾರ ಹೇಳಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img