Saturday | June 20, 2026 |

ಕೃಷ್ಣ ಮಠಕ್ಕೆ ಶ್ರೀಗಂಧ; ಡಿ ಸಿ ಶಿಫಾರಸ್ಸು ಬದಿಗಿರಿಸಿತೇ ಬಿಜೆಪಿ ಸರ್ಕಾರ?

Support THE-FILE

spot_img

ಬೆಂಗಳೂರು; ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ಇಲ್ಲದ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ವಾರ್ಷಿಕ 10.00 ಕೆ ಜಿ ಶ್ರೀಗಂಧ ಮಂಜೂರು ಮಾಡಬಹುದು ಎಂದು ಜಿಲ್ಲಾಧಿಕಾರಿ ಶಿಫಾರಸ್ಸನ್ನು ಬದಿಗಿರಿಸಿ ಪ್ರತಿ ತಿಂಗಳಿಗೆ 10.00 ಕೆ ಜಿ ಯಂತೆ ವಾರ್ಷಿಕ 120 ಕೆ ಜಿ ಶ್ರೀಗಂಧವನ್ನು ಮಂಜೂರು ಮಾಡಲಿರುವ ಬಿಜೆಪಿ ಸರ್ಕಾರವು ಕೃಷ್ಣ ಭಕ್ತಿಯನ್ನು ಮೆರೆಯಲಿದೆ!

ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ನಮೂದಿಸಿದ ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಕ್ರಮವಾಗಿ 20 ಕೆ ಜಿ ಹಾಗೂ 10 ಕೆ ಜಿ ಶ್ರೀಗಂಧವನ್ನು ಮಂಜೂರು ಮಾಡಲು ಅವಕಾಶವಿದೆ. ಉಡುಪಿಯ ಶ್ರೀ ಕೃಷ್ಣ ಮಠವು ಈ ಎರಡೂ ಪಟ್ಟಿಯಲ್ಲಿ ಸೇರಿಲ್ಲ. ಒಂದು ವೇಳೆ ಇವೆರಡೂ ಪ್ರವರ್ಗಕ್ಕೆ ಒಳಗೊಂಡಿಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಶಿಫಾರಸ್ಸಿನ ಆಧಾರದ ಮೇಲೆ ವಾರ್ಷಿಕವಾಗಿ 10.00 ಕೆ ಜಿ ಶ್ರೀಗಂಧವನ್ನು ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಬೇಡಿಕೆ ಇವುಗಳಲ್ಲಿ ಯಾವುದು ಪ್ರಮಾಣ ಕಡಿಮೆ ಇರುತ್ತದೆಯೋ ಅದನ್ನು ಪರಿಗಣಿಸಬಹುದು ಎಂದು ಸರ್ಕಾರ ಆದೇಶಿಸಿತ್ತು.

ಆದರೆ ಈ ಆದೇಶವನ್ನೇ ಅರಣ್ಯ, ಪರಿಸರ ಇಲಾಖೆಯು ಬದಿಗಿರಿಸಿ ಪ್ರತಿ ಮಾಹೆ 10 ಕೆ ಜಿ ಯಂತೆ ವಾರ್ಷಿಕ 120 ಕೆ ಜಿ ಶ್ರೀಗಂಧವನ್ನು ಪ್ರತಿ ವರ್ಷ ಒದಗಿಸು ಹಾಗೂ ಶ್ರೀಗಂಧದ ಲಭ್ಯತೆ ಮೇರೆಗೆ ಈ ಪ್ರಮಾಣವನ್ನು ಹೆಚ್ಚಿಸಿ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ವಿಶೇಷವಾಗಿ ಗಂಧವನ್ನು ಸಮರ್ಪಿಸಿ ಭಕ್ತರಿಗೆ ಪ್ರಸಾದ ರೂಪವಾಗಿ ನೀಡಲು ತಿಂಗಳಿಗೆ ಪ್ರತಿ ಮಾಹೆ 50 ಕೆ ಜಿ ಯಂತೆ ವಾರ್ಷಿಕವಾಗಿ 6 ಕ್ವಿಂಟಾಲ್‌ ಶ್ರೀಗಂಧ ಒದಗಿಸಬೇಕು ಎಂದು ಕೃಷ್ಣಮಠ ಪರ್ಯಾಯ ಆದಮಾರು ಮಠವು ಸರ್ಕಾರಕ್ಕೆ ಕೋರಿತ್ತು.

ಸ್ವಾತಂತ್ರ್ಯ ಪೂರ್ವದಿಂದಲೂ ಶ್ರೀ ಕೃಷ್ಣನ ಪೂಜಾ ಕೈಂಕರ್ಯಗಳಿಗಾಗಿ ರಾಜರಿಂದ ಬಳವಳಿಯಾಗಿ ಬಂದ ಪ್ರದೇಶದಿಂದ ಶ್ರೀಗಂಧ ದೊರಕುತ್ತಿತ್ತು. ಆ ನಂತರ ಬ್ರಿಟಿಷರ ಕಾಲದಿಂದ ಪ್ರತಿ ವರ್ಷವೂ 1090 ಕೆ ಜಿ ಶ್ರೀಗಂಧವನ್ನು ಭೂಮಿ ನೋಡಿಕೊಂಡು ಸರ್ಕಾರವೇ ಒದಗಿಸುತ್ತಿತ್ತು. ಆದರೆ 2017ರಲ್ಲಿದ್ದ ಕಾಂಗ್ರೆಸ್‌ ಸರ್ಕಾರವು ಇದನ್ನು ರದ್ದುಗೊಳಿಸಿತ್ತು. ಇದನ್ನು ಪರಿಶೀಲಿಸಿ ಪುನಃ ಶ್ರೀಗಂಧವನ್ನು ಒದಗಿಸಿ ಅದನ್ನು ಭಕ್ತರಿಗೆ ವಿನಿಯೋಗಿಸಲು ಅನುಕೂಲ ಮಾಡಿಕೊಟ್ಟು ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀಕೃಷ್ಣಮಠ ಪರ್ಯಾಯ ಶ್ರೀ ಆದಮಾರು ಮಠದ ವ್ಯವಸ್ಥಾಪಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 2021ರ ಆಗಸ್ಟ್‌ 17ರಂದು ಪತ್ರ ಬರೆದಿದ್ದರು. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹಾಗೆಯೇ ಮಠವು 2021ರ ಏಪ್ರಿಲ್‌ 23ರಂದು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಪತ್ರ ಬರೆದಿತ್ತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರತಿ ವರ್ಷವೂ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು ಎಂದು ಕೋರಿಕೊಂಡಿತ್ತು. ಶ್ರೀಗಂಧವನ್ನು ಪಡೆಯಲು ಮಠವು ಕಾನೂನುಬದ್ಧವಾಗಿ ಹಕ್ಕು ಹೊಂದಿತ್ತಾದರೂ ಅದನ್ನು 2017ರ ಡಿಸೆಂಬರ್‌ 4ರಂದು ಹಿಂದಿನ ಕಾಂಗ್ರೆಸ್‌ ಸರ್ಕಾರವು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಮಠವು ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದಿತ್ತು.

‘ಉಚಿತವಾಗಿ ಶ್ರೀಗಂಧವನ್ನು ಪಡೆಯಲು ಮಠವು ಟೈಟಲ್‌ ಡೀಡ್‌ ಹೋಲ್ಡರ್‌ ಆಗಿದೆ. ಕರ್ನಾಟಕ ಅರಣ್ಯ ಸಂಹಿತೆ 97ರ ಪ್ರಕಾರ 29 ಧಾರ್ಮಿಕ ಸಂಸ್ಥೆಗಳಿಗೆ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು. ಹೀಗಾಗಿ ಶ್ರೀಗಂಧವನ್ನು ಮಠಕ್ಕೆ ಪೂರೈಕೆ ಮಾಡುವುದು ಸರ್ಕಾರದ ಹೊಣೆಗಾರಿಕೆಯಾಗಿದೆ,’ ಎಂದು ಏಪ್ರಿಲ್‌ 2021ರಂದು ಬರೆದಿದ್ದ ಪತ್ರದಲ್ಲಿ ವಿವರಿಸಲಾಗಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img